ಸೋಂಕಿತರಿಗೆ ಸಕಾಲಕ್ಕೆ ಸೂಕ್ತ ಗುಣಮಟ್ಟದ ಚಿಕಿತ್ಸೆ ದೊರಕಿಸಬೇಕಿದೆ. ಮಂಡ್ಯ ಜಿಲ್ಲಾಡಳಿತ ಸೋಂಕಿತ ಸರ್ಕಾರಿ ನೌಕರರ ಚಿಕಿತ್ಸೆಗೆ ಪ್ರತ್ಯೇಕ ವಾರ್ಡ್ ಮೀಸಲಿರಿಸಲು ಆದೇಶಿಸಿದ್ದು, ರಾಯಚೂರು ಜಿಲ್ಲಾಡಳಿತವೂ ಪ್ರತ್ಯೇಕ ವಾರ್ಡ್ ರಚಿಸಿ ಗುಣಮಟ್ಟ ಚಿಕಿತ್ಸೆ ನೀಡಿ ನೌಕರರ ಆತ್ಮಸ್ಥೈರ್ಯ ಹೆಚ್ಚಿಸಬೇಕು ಎಂದು ಸಂಘದ ಜಿಲ್ಲಾಧ್ಯಕ್ಷ ಮಹೆಬೂಬ್ ಪಾಷಾ ಮೂಲಿಮನಿ ಹಾಗೂ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.