<p><strong>ತುರ್ವಿಹಾಳ: ‘</strong>ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಸಂಘಟಿತ ವಲಯದ ಕಾರ್ಮಿಕರ ಹಿತ ಕಾಯುವ ಕಾನೂನು ಜಾರಿಗೆ ತರಬೇಕು’ ಎಂದು ವಿಶ್ವೇಶ್ವರಯ್ಯ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಅನ್ವರ್ ಪಾಷಾ ಹೇಳಿದರು.</p>.<p>ಇಲ್ಲಿನ ಕಾರ್ಮಿಕ ಭನದ ಎದುರು ವಿಶ್ವೇಶ್ವರಯ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಅಸಂಘಟಿತ ಕಾರ್ಮಿಕರ ಸಂಘದ ವತಿಯಿಂದ ಬುಧವಾರ ನಡೆದ ವಿಶ್ವ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ,‘ಕಾನೂನು ಗಳಿಂದ ರೈತರಿಗೆ ಅನುಕೂಲವಾಗಬೇಕು’ ಎಂದರು.</p>.<p>ಕಾರ್ಮಿಕ ಮುಖಂಡ ಬಸವಂತಗೌಡ ಬುದ್ಧ, ಬಸವ, ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು.</p>.<p>ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಿತು.</p>.<p>ಕಾರ್ಮಿಕರ ಪರಿಶ್ರಮದಿಂದ ದೇಶದ ಅಭಿವೃದ್ಧಿ ಸಾಧ್ಯ. ಆದರೆ ಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯಗಳು ದೊರೆತಿಲ್ಲ ಎಂದು ದೂರಿದರು.</p>.<p>ಜನವಾದಿ ಮಹಿಳಾ ಸಂಘದ ಶಕುಂತಲಾ ಪಾಟೀಲ ಮಾತನಾಡಿ,‘ಕಾರ್ಮಿಕರು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳುವ ಜೊತೆಗೆ ಜಾಗೃತರಾಗಿ ಸಂಘಟಿತ ಹೋರಾಟದ ಮೂಲಕ ಉತ್ತಮ ಬದುಕು ರೂಪಿಸಿಕೊಳ್ಳಬೇಕು’ ಎಂದರು.</p>.<p>ಮುಖಂಡರಾದ ನಾಗಲಿಂಗ ಚಲವಾದಿ, ಹೊನ್ನುರಪ್ಪ ಕುಂಬಾರ, ಮುನಿಸ್ವಾಮಿ ಕಟ್ಟಿಮನಿ, ವೆಂಕಟೇಶ ಮಾಕಾಪುರ, ಶೇಖರಪ್ಪ ಕುಂಬಾರ, ಹನುಮಂತ ನಾಗಲಾಪುರ, ನಿರುಪಾದಿ ದಾಸರ, ರಾಮಣ್ಣ ನಂದವಾಡಗಿ ಹಾಗೂ ಇತರ ಕಾರ್ಮಿಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುರ್ವಿಹಾಳ: ‘</strong>ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಸಂಘಟಿತ ವಲಯದ ಕಾರ್ಮಿಕರ ಹಿತ ಕಾಯುವ ಕಾನೂನು ಜಾರಿಗೆ ತರಬೇಕು’ ಎಂದು ವಿಶ್ವೇಶ್ವರಯ್ಯ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಅನ್ವರ್ ಪಾಷಾ ಹೇಳಿದರು.</p>.<p>ಇಲ್ಲಿನ ಕಾರ್ಮಿಕ ಭನದ ಎದುರು ವಿಶ್ವೇಶ್ವರಯ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಅಸಂಘಟಿತ ಕಾರ್ಮಿಕರ ಸಂಘದ ವತಿಯಿಂದ ಬುಧವಾರ ನಡೆದ ವಿಶ್ವ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ,‘ಕಾನೂನು ಗಳಿಂದ ರೈತರಿಗೆ ಅನುಕೂಲವಾಗಬೇಕು’ ಎಂದರು.</p>.<p>ಕಾರ್ಮಿಕ ಮುಖಂಡ ಬಸವಂತಗೌಡ ಬುದ್ಧ, ಬಸವ, ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು.</p>.<p>ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಿತು.</p>.<p>ಕಾರ್ಮಿಕರ ಪರಿಶ್ರಮದಿಂದ ದೇಶದ ಅಭಿವೃದ್ಧಿ ಸಾಧ್ಯ. ಆದರೆ ಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯಗಳು ದೊರೆತಿಲ್ಲ ಎಂದು ದೂರಿದರು.</p>.<p>ಜನವಾದಿ ಮಹಿಳಾ ಸಂಘದ ಶಕುಂತಲಾ ಪಾಟೀಲ ಮಾತನಾಡಿ,‘ಕಾರ್ಮಿಕರು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳುವ ಜೊತೆಗೆ ಜಾಗೃತರಾಗಿ ಸಂಘಟಿತ ಹೋರಾಟದ ಮೂಲಕ ಉತ್ತಮ ಬದುಕು ರೂಪಿಸಿಕೊಳ್ಳಬೇಕು’ ಎಂದರು.</p>.<p>ಮುಖಂಡರಾದ ನಾಗಲಿಂಗ ಚಲವಾದಿ, ಹೊನ್ನುರಪ್ಪ ಕುಂಬಾರ, ಮುನಿಸ್ವಾಮಿ ಕಟ್ಟಿಮನಿ, ವೆಂಕಟೇಶ ಮಾಕಾಪುರ, ಶೇಖರಪ್ಪ ಕುಂಬಾರ, ಹನುಮಂತ ನಾಗಲಾಪುರ, ನಿರುಪಾದಿ ದಾಸರ, ರಾಮಣ್ಣ ನಂದವಾಡಗಿ ಹಾಗೂ ಇತರ ಕಾರ್ಮಿಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>