<p><strong>ಹಟ್ಟಿ ಚಿನ್ನದ ಗಣಿ:</strong> ಇಲ್ಲಿಗೆ ಸಮೀಪದ ಪೈದೊಡ್ಡಿ ಗ್ರಾಮ ಪಂಚಾಯಿತಿ ಕಟ್ಟಡಕ್ಕೆ ಭೂಮಿ ನೀಡಿದ್ದ ಮಾಲೀಕ ಭೀಮನಗೌಡ ಕಚೇರಿಗೆ ಬೀಗ ಹಾಕಿದ್ದು, ವಾಲ್ಮೀಕಿ ಭವನಕ್ಕೆ ಕಚೇರಿ ಸ್ಥಳಾಂತರ ಮಾಡಲಾಗಿದೆ.</p><p>‘1995ರಲ್ಲಿ ಗ್ರಾ.ಪಂ ಕಟ್ಟಡ ನಿರ್ಮಿಸಲಾಗಿದೆ. ಕಟ್ಟಡ ನಿರ್ಮಾಣದ ವೇಳೆ ನೀಡಿದ ಭರವಸೆ ಈಡೇರಿಸದ ಕಾರಣ ಬೀಗ ಹಾಕಿದ್ದೇನೆ’ ಎನ್ನುತ್ತಾರೆ ಭೂ ಮಾಲೀಕ ಭೀಮನಗೌಡ.</p><p>‘30 ವರ್ಷಗಳಿಂದ ಬಾಡಿಗೆ ಪಾವತಿಸಿಲ್ಲ. ನಮ್ಮ ಕುಟುಂಬ ಬೀದಿಗೆ ಬಂದಿದೆ. ಸಮಸ್ಯೆ ಬಗೆಹರಿಸಿ, ಇಲ್ಲ ಕಟ್ಟಡ ತೆರವು ಮಾಡಿ ಎಂದು ತಾಲ್ಲೂಕು ಪಂಚಾಯಿತಿ ಅಧಿಕಾರಿಗಳಿಗೆ ಪತ್ರದ ಮೂಲಕ ಮನವಿ ಮಾಡಿದ್ದೆ. ಆದರೂ ಸ್ಪಂದಿಸಿಲ್ಲ’ ಎನ್ನುವುದು ಅವರ ಆರೋಪ.</p><p>‘ಹಲವು ವರ್ಷಗಳಿಂದ ಸಮಸ್ಯೆ ಬಗೆಹರಿದಿಲ್ಲ. ಇದರಿಂದ ನನಗೆ ಅನ್ಯಾಯವಾಗಿದೆ. ನ್ಯಾಯ ಸಿಗುವವರೆಗೂ ಹೋರಾಟ ಮಾಡುವೆ’ ಎನ್ನುತ್ತಾರೆ ಅವರು.</p><p>ಗ್ರಾ.ಪಂ ಕಚೇರಿ ಯನ್ನು ತಾತ್ಕಾಲಿಕವಾಗಿ ವಾಲ್ಮೀಕಿ ಭನದಲ್ಲಿ ನಡೆಸಲಾಗುತ್ತಿದೆ. ಈ ಸ್ಥಳದಲ್ಲಿ ಸರಿಯಾಗಿ ನೆಟ್ವರ್ಕ್ ಬಾರದ ಕಾರಣ ಸಾರ್ವಜನಿಕರು ಪರದಾಡುತ್ತಿದ್ದಾರೆ. ಮೇಲಧಿಕಾರಿಗಳು ಗಮನಹರಿಸಿ ಸಮಸ್ಯೆ ಬಗೆಹರಿಸಿ ಜನರಿಗೆ ಗ್ರಾ.ಪಂ ಸೇವೆಗಳನ್ನು ಒದಗಿಸಿಕೊಡಬೇಕು ಎಂದು ಜನರು ಒತ್ತಾಯ ಮಾಡಿದ್ದಾರೆ.</p>.<div><blockquote>ಭೂದಾನ ಮಾಡಿದ ಕುಟುಂಬದ ಒಬ್ಬರಿಗೆ ನೌಕರಿ ನೀಡುವುದಾಗಿ ಭರವಸೆ ನೀಡಲಾಗಿತ್ತು. ಅದನ್ನು ಈಡೇರಿಸಿಲ್ಲ. ಅದಕ್ಕಾಗಿ ಬೀಗ ಹಾಕಿದ್ದೇನೆ. ಹೋರಾಟ ಮುಂದುವರಿಯುವುದು </blockquote><span class="attribution">ಭೀಮನಗೌಡ, ಭೂದಾನಿ</span></div>.<div><blockquote>ಹೊಸದಾಗಿ ಅಧಿಕಾರ ವಹಿಸಿಕೊಂಡಿರುವೆ. ಸಮಸ್ಯೆ ಬಗ್ಗೆ ತಿಳಿದಿದೆ. ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು </blockquote><span class="attribution">ವೀರಭದ್ರಪ್ಪ, ಪಿಡಿಒ ಪೈದೊಡ್ಡಿ</span></div>.<div><blockquote>ಗ್ರಾ.ಪಂಗೆ ಬೀಗ ಹಾಕಿದ್ದರಿಂದ ಜನರಿಗೆ ತೊಂದರೆಯಾಗಿದೆ. ತಾ.ಪಂ, ಜಿ.ಪಂ ಅಧಿಕಾರಿಗಳು ಗಮನಹರಿ ಸಮಸ್ಯೆ ಬಗೆಹರಿಸಲಿ </blockquote><span class="attribution">ಮುದುಕಪ್ಪ ಗುರಿಕಾರ, ಪೈದೊಡ್ಡಿ ಗ್ರಾಮಸ್ಥ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಟ್ಟಿ ಚಿನ್ನದ ಗಣಿ:</strong> ಇಲ್ಲಿಗೆ ಸಮೀಪದ ಪೈದೊಡ್ಡಿ ಗ್ರಾಮ ಪಂಚಾಯಿತಿ ಕಟ್ಟಡಕ್ಕೆ ಭೂಮಿ ನೀಡಿದ್ದ ಮಾಲೀಕ ಭೀಮನಗೌಡ ಕಚೇರಿಗೆ ಬೀಗ ಹಾಕಿದ್ದು, ವಾಲ್ಮೀಕಿ ಭವನಕ್ಕೆ ಕಚೇರಿ ಸ್ಥಳಾಂತರ ಮಾಡಲಾಗಿದೆ.</p><p>‘1995ರಲ್ಲಿ ಗ್ರಾ.ಪಂ ಕಟ್ಟಡ ನಿರ್ಮಿಸಲಾಗಿದೆ. ಕಟ್ಟಡ ನಿರ್ಮಾಣದ ವೇಳೆ ನೀಡಿದ ಭರವಸೆ ಈಡೇರಿಸದ ಕಾರಣ ಬೀಗ ಹಾಕಿದ್ದೇನೆ’ ಎನ್ನುತ್ತಾರೆ ಭೂ ಮಾಲೀಕ ಭೀಮನಗೌಡ.</p><p>‘30 ವರ್ಷಗಳಿಂದ ಬಾಡಿಗೆ ಪಾವತಿಸಿಲ್ಲ. ನಮ್ಮ ಕುಟುಂಬ ಬೀದಿಗೆ ಬಂದಿದೆ. ಸಮಸ್ಯೆ ಬಗೆಹರಿಸಿ, ಇಲ್ಲ ಕಟ್ಟಡ ತೆರವು ಮಾಡಿ ಎಂದು ತಾಲ್ಲೂಕು ಪಂಚಾಯಿತಿ ಅಧಿಕಾರಿಗಳಿಗೆ ಪತ್ರದ ಮೂಲಕ ಮನವಿ ಮಾಡಿದ್ದೆ. ಆದರೂ ಸ್ಪಂದಿಸಿಲ್ಲ’ ಎನ್ನುವುದು ಅವರ ಆರೋಪ.</p><p>‘ಹಲವು ವರ್ಷಗಳಿಂದ ಸಮಸ್ಯೆ ಬಗೆಹರಿದಿಲ್ಲ. ಇದರಿಂದ ನನಗೆ ಅನ್ಯಾಯವಾಗಿದೆ. ನ್ಯಾಯ ಸಿಗುವವರೆಗೂ ಹೋರಾಟ ಮಾಡುವೆ’ ಎನ್ನುತ್ತಾರೆ ಅವರು.</p><p>ಗ್ರಾ.ಪಂ ಕಚೇರಿ ಯನ್ನು ತಾತ್ಕಾಲಿಕವಾಗಿ ವಾಲ್ಮೀಕಿ ಭನದಲ್ಲಿ ನಡೆಸಲಾಗುತ್ತಿದೆ. ಈ ಸ್ಥಳದಲ್ಲಿ ಸರಿಯಾಗಿ ನೆಟ್ವರ್ಕ್ ಬಾರದ ಕಾರಣ ಸಾರ್ವಜನಿಕರು ಪರದಾಡುತ್ತಿದ್ದಾರೆ. ಮೇಲಧಿಕಾರಿಗಳು ಗಮನಹರಿಸಿ ಸಮಸ್ಯೆ ಬಗೆಹರಿಸಿ ಜನರಿಗೆ ಗ್ರಾ.ಪಂ ಸೇವೆಗಳನ್ನು ಒದಗಿಸಿಕೊಡಬೇಕು ಎಂದು ಜನರು ಒತ್ತಾಯ ಮಾಡಿದ್ದಾರೆ.</p>.<div><blockquote>ಭೂದಾನ ಮಾಡಿದ ಕುಟುಂಬದ ಒಬ್ಬರಿಗೆ ನೌಕರಿ ನೀಡುವುದಾಗಿ ಭರವಸೆ ನೀಡಲಾಗಿತ್ತು. ಅದನ್ನು ಈಡೇರಿಸಿಲ್ಲ. ಅದಕ್ಕಾಗಿ ಬೀಗ ಹಾಕಿದ್ದೇನೆ. ಹೋರಾಟ ಮುಂದುವರಿಯುವುದು </blockquote><span class="attribution">ಭೀಮನಗೌಡ, ಭೂದಾನಿ</span></div>.<div><blockquote>ಹೊಸದಾಗಿ ಅಧಿಕಾರ ವಹಿಸಿಕೊಂಡಿರುವೆ. ಸಮಸ್ಯೆ ಬಗ್ಗೆ ತಿಳಿದಿದೆ. ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು </blockquote><span class="attribution">ವೀರಭದ್ರಪ್ಪ, ಪಿಡಿಒ ಪೈದೊಡ್ಡಿ</span></div>.<div><blockquote>ಗ್ರಾ.ಪಂಗೆ ಬೀಗ ಹಾಕಿದ್ದರಿಂದ ಜನರಿಗೆ ತೊಂದರೆಯಾಗಿದೆ. ತಾ.ಪಂ, ಜಿ.ಪಂ ಅಧಿಕಾರಿಗಳು ಗಮನಹರಿ ಸಮಸ್ಯೆ ಬಗೆಹರಿಸಲಿ </blockquote><span class="attribution">ಮುದುಕಪ್ಪ ಗುರಿಕಾರ, ಪೈದೊಡ್ಡಿ ಗ್ರಾಮಸ್ಥ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>