ಸಿಂಧನೂರು: ತಾಲ್ಲೂಕಿನ ಸೋಮಲಾಪುರ ಗ್ರಾಮ ಪಂಚಾಯಿತಿ ಸದಸ್ಯೆ ರೇಣುಕಮ್ಮ ಹುಸೇನ್ ಮಲ್ಕಾಪುರ ಅವರು ಶಾಸಕ ಹಂಪನಗೌಡ ಬಾದರ್ಲಿ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಪಂಪನಗೌಡ ಬಾದರ್ಲಿ ಸಮ್ಮುಖದಲ್ಲಿ ಬುಧವಾರ ಶಾಸಕರ ನಿವಾಸದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾದರು.
ಕಾಂಗ್ರೆಸ್ ಮುಖಂಡರಾದ ರಾಜುಗೌಡ ಬಾದರ್ಲಿ, ಬಸವರಾಜ ಹಿರೇಗೌಡರ್, ಅಶೋಕ ಉಮಲೂಟಿ, ಲಿಂಗರಾಜ ದಢೇಸುಗೂರು, ರಾಮನಗೌಡ ಮಲ್ಲಾಪುರ, ಮೇಘನಾ ಸೋಮಲಾಪುರ, ಕರಿಯಪ್ಪ ಸೇರಿದಂತೆ ಸೋಮಲಾಪುರ ಗ್ರಾಮ ಪಂಚಾಯಿತಿ ಕಾಂಗ್ರೆಸ್ ಬೆಂಬಲಿತ ಸದಸ್ಯರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.