<p>ಲಿಂಗಸುಗೂರು: ‘ತಾಲ್ಲೂಕಿನ ಪೈದೊಡ್ಡಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ 15ನೇ ಹಣಕಾಸು ಯೋಜನೆ ನಿಯಮಗಳನ್ನು ಉಲ್ಲಂಘಿಸಿ ಅನುದಾನ ದುರ್ಬಳಕೆ ಮಾಡಿಕೊಂಡಿದ್ದು, ಈ ಬಗ್ಗೆ ತನಿಖೆ ನಡೆಸಬೇಕು‘ ಎಂದು ಆಗ್ರಹಿಸಿ ಕನ್ನಡ ಸೇನೆ ಕರ್ನಾಟಕ ಸಂಘಟನೆ ಕಾರ್ಯಕರ್ತರು ಮನವಿ ಸಲ್ಲಿಸಿದರು.</p>.<p>ಶುಕ್ರವಾರ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಿಕಾರ್ಜುನ ಅವರಿಗೆ ದೂರು ಸಲ್ಲಿಸಿದ ಅವರು, ’2020-21ನೇ ಸಾಲಿನಲ್ಲಿ ಬಂದಿರುವ 15ನೇ ಹಣಕಾಸು ಯೋಜನೆಯ ₹ 70.88 ಲಕ್ಷ ಕ್ರಿಯಾಯೋಜನೆ ಅನುಷ್ಠಾನಗೊಳಿಸುವಲ್ಲಿ ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ, ಅನುಮೋದನೆ ಪಡೆಯದ ಕೆಲಸಗಳಿಗೆ ನಕಲಿ ಬಿಲ್ ಸೃಷ್ಠಿಸಿ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ‘ ಎಂದು ದೂರಿದರು.</p>.<p>‘ಯಾವುದೇ ವಸ್ತು ಖರೀದಿ ಮಾಡದೇ ಲಿಂಗಸುಗೂರು, ಗುರುಗುಂಟಾ, ಹಟ್ಟಿ ಸೇರಿದಂತೆ ಇತರೆ ಅಂಗಡಿಗಳ ಮಾಲೀಕರಿಗೆ ₹ 30.75 ಲಕ್ಷ ಬಿಲ್ ಪಾವತಿಸಿದ್ದು ಜಿಎಸ್ಟಿ ವಂಚನೆ ಮಾಡಲಾಗಿದೆ. ಕಾರಣ ಉನ್ನತ ಮಟ್ಟದ ಅಧಿಕಾರಿಗಳ ತಂಡ ರಚಿಸಿ ತನಿಖೆ ನಡೆಸುವ ಮೂಲಕ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ನಿರ್ಲಕ್ಷಿಸಿದರೆ ಹೋರಾಟ ನಡೆಸಲಾಗುವುದು‘ ಎಂದು ಎಚ್ಚರಿಕೆ ನೀಡಿದರು.</p>.<p>ಸಂಘಟನೆ ಮುಖಂಡರಾದ ಶರಣೋಜಿ ಪವಾರ್, ಕೆಂಪ್ ಶಿವು, ರಾಮಜೆಟ್ಟಿ, ಯಂಕೋಬ, ಬಸವರಾಜ, ಅಮರೇಶ, ಛತ್ರಪತಿ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಲಿಂಗಸುಗೂರು: ‘ತಾಲ್ಲೂಕಿನ ಪೈದೊಡ್ಡಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ 15ನೇ ಹಣಕಾಸು ಯೋಜನೆ ನಿಯಮಗಳನ್ನು ಉಲ್ಲಂಘಿಸಿ ಅನುದಾನ ದುರ್ಬಳಕೆ ಮಾಡಿಕೊಂಡಿದ್ದು, ಈ ಬಗ್ಗೆ ತನಿಖೆ ನಡೆಸಬೇಕು‘ ಎಂದು ಆಗ್ರಹಿಸಿ ಕನ್ನಡ ಸೇನೆ ಕರ್ನಾಟಕ ಸಂಘಟನೆ ಕಾರ್ಯಕರ್ತರು ಮನವಿ ಸಲ್ಲಿಸಿದರು.</p>.<p>ಶುಕ್ರವಾರ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಿಕಾರ್ಜುನ ಅವರಿಗೆ ದೂರು ಸಲ್ಲಿಸಿದ ಅವರು, ’2020-21ನೇ ಸಾಲಿನಲ್ಲಿ ಬಂದಿರುವ 15ನೇ ಹಣಕಾಸು ಯೋಜನೆಯ ₹ 70.88 ಲಕ್ಷ ಕ್ರಿಯಾಯೋಜನೆ ಅನುಷ್ಠಾನಗೊಳಿಸುವಲ್ಲಿ ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ, ಅನುಮೋದನೆ ಪಡೆಯದ ಕೆಲಸಗಳಿಗೆ ನಕಲಿ ಬಿಲ್ ಸೃಷ್ಠಿಸಿ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ‘ ಎಂದು ದೂರಿದರು.</p>.<p>‘ಯಾವುದೇ ವಸ್ತು ಖರೀದಿ ಮಾಡದೇ ಲಿಂಗಸುಗೂರು, ಗುರುಗುಂಟಾ, ಹಟ್ಟಿ ಸೇರಿದಂತೆ ಇತರೆ ಅಂಗಡಿಗಳ ಮಾಲೀಕರಿಗೆ ₹ 30.75 ಲಕ್ಷ ಬಿಲ್ ಪಾವತಿಸಿದ್ದು ಜಿಎಸ್ಟಿ ವಂಚನೆ ಮಾಡಲಾಗಿದೆ. ಕಾರಣ ಉನ್ನತ ಮಟ್ಟದ ಅಧಿಕಾರಿಗಳ ತಂಡ ರಚಿಸಿ ತನಿಖೆ ನಡೆಸುವ ಮೂಲಕ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ನಿರ್ಲಕ್ಷಿಸಿದರೆ ಹೋರಾಟ ನಡೆಸಲಾಗುವುದು‘ ಎಂದು ಎಚ್ಚರಿಕೆ ನೀಡಿದರು.</p>.<p>ಸಂಘಟನೆ ಮುಖಂಡರಾದ ಶರಣೋಜಿ ಪವಾರ್, ಕೆಂಪ್ ಶಿವು, ರಾಮಜೆಟ್ಟಿ, ಯಂಕೋಬ, ಬಸವರಾಜ, ಅಮರೇಶ, ಛತ್ರಪತಿ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>