<p>ಲಿಂಗಸುಗೂರು: ‘ಹಸಿರು ಲಿಂಗಸುಗೂರು’ ಸಮಿತಿ ಸದಸ್ಯರಿಂದ ಸ್ಥಳೀಯ ಬಸ್ ನಿಲ್ದಾಣ ಆವರಣದಲ್ಲಿ ಭಾನುವಾರ ಸಸಿ ನೆಡುವ ಕಾರ್ಯಕ್ರಮ ಮೂಲಕ ಪ್ರಯಾಣಿಕರಲ್ಲಿ ಪರಿಸರ ಜಾಗೃತಿ ಅಭಿಯಾನ ನಡೆಸಲಾಯಿತು.</p>.<p>ಸಾರಿಗೆ ಘಟಕ ವ್ಯವಸ್ಥಾಪಕ ಆದಪ್ಪ ಕುಂಬಾರ ಮಾತನಾಡಿ, ‘ಯುವಕರು ಸಮಿತಿ ರಚಿಸಿಕೊಂಡು ತಾಲ್ಲೂಕು ಕೇಂದ್ರದ ಪ್ರಮುಖ ಸ್ಥಳಗಳಲ್ಲಿ ಸಸಿಗಳನ್ನು ನೆಡುವ ಮೂಲಕ ಜನರಲ್ಲಿ ಪರಿಸರ ಜಾಗೃತಿ ಮೂಡಿಸುತ್ತಿರುವುದು ಖುಷಿ ತಂದಿದೆ’ ಎಂದರು.</p>.<p>ಸಮಿತಿ ಹಿರಿಯ ಸದಸ್ಯ ಪ್ರಭುಸ್ವಾಮಿ ಅತ್ನೂರು ಮಾತನಾಡಿ, ‘ಹಸಿರು ಲಿಂಗಸುಗೂರು ಸಮಿತಿ ಸದಸ್ಯರು ಆರಂಭಿಕ ಹಂತವಾಗಿ 500 ಸಸಿಗಳನ್ನು ನೆಡುವ ಜೊತೆಗೆ ಅವುಗಳ ರಕ್ಷಣೆಗೆ ಮುಂದಾಗಿದ್ದೇವೆ. ಇದಕ್ಕೆ ಸಾರ್ವಜನಿಕರು ಸಹಕರಿಸಬೇಕು’ ಎಂದು ಕೋರಿದರು.</p>.<p>ಮುಖಂಡರಾದ ಭೀಮಶೇನ ಜೋಷಿ, ಸಂಜಯ ಹಿರೇಮಠ, ಮಲ್ಲಣ್ಣ ಕೆಂಭಾವಿ, ಚೆನ್ನಬಸವ ಹಿರೇಮಠ, ಅಮರೇಶ ಗಂಭೀರಮಠ, ಮಹಾಂತೇಶ ನರಕಲದಿನ್ನಿ, ಸುರೇಶ ಮೇಟಿ, ಆರ್.ಎಸ್ ಪಾಟೀಲ, ಮದನಮೋಹನ, ಸುಗೂರೇಶ ಸಾಲ್ಮನಿ, ಚೇತನ ಗುತ್ತೆದಾರ, ಕುಮಾರ ಭೋವಿ, ಚೇತನ, ಸಾರಿಗೆ ಸಂಸ್ಥೆ ನೌಕರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಲಿಂಗಸುಗೂರು: ‘ಹಸಿರು ಲಿಂಗಸುಗೂರು’ ಸಮಿತಿ ಸದಸ್ಯರಿಂದ ಸ್ಥಳೀಯ ಬಸ್ ನಿಲ್ದಾಣ ಆವರಣದಲ್ಲಿ ಭಾನುವಾರ ಸಸಿ ನೆಡುವ ಕಾರ್ಯಕ್ರಮ ಮೂಲಕ ಪ್ರಯಾಣಿಕರಲ್ಲಿ ಪರಿಸರ ಜಾಗೃತಿ ಅಭಿಯಾನ ನಡೆಸಲಾಯಿತು.</p>.<p>ಸಾರಿಗೆ ಘಟಕ ವ್ಯವಸ್ಥಾಪಕ ಆದಪ್ಪ ಕುಂಬಾರ ಮಾತನಾಡಿ, ‘ಯುವಕರು ಸಮಿತಿ ರಚಿಸಿಕೊಂಡು ತಾಲ್ಲೂಕು ಕೇಂದ್ರದ ಪ್ರಮುಖ ಸ್ಥಳಗಳಲ್ಲಿ ಸಸಿಗಳನ್ನು ನೆಡುವ ಮೂಲಕ ಜನರಲ್ಲಿ ಪರಿಸರ ಜಾಗೃತಿ ಮೂಡಿಸುತ್ತಿರುವುದು ಖುಷಿ ತಂದಿದೆ’ ಎಂದರು.</p>.<p>ಸಮಿತಿ ಹಿರಿಯ ಸದಸ್ಯ ಪ್ರಭುಸ್ವಾಮಿ ಅತ್ನೂರು ಮಾತನಾಡಿ, ‘ಹಸಿರು ಲಿಂಗಸುಗೂರು ಸಮಿತಿ ಸದಸ್ಯರು ಆರಂಭಿಕ ಹಂತವಾಗಿ 500 ಸಸಿಗಳನ್ನು ನೆಡುವ ಜೊತೆಗೆ ಅವುಗಳ ರಕ್ಷಣೆಗೆ ಮುಂದಾಗಿದ್ದೇವೆ. ಇದಕ್ಕೆ ಸಾರ್ವಜನಿಕರು ಸಹಕರಿಸಬೇಕು’ ಎಂದು ಕೋರಿದರು.</p>.<p>ಮುಖಂಡರಾದ ಭೀಮಶೇನ ಜೋಷಿ, ಸಂಜಯ ಹಿರೇಮಠ, ಮಲ್ಲಣ್ಣ ಕೆಂಭಾವಿ, ಚೆನ್ನಬಸವ ಹಿರೇಮಠ, ಅಮರೇಶ ಗಂಭೀರಮಠ, ಮಹಾಂತೇಶ ನರಕಲದಿನ್ನಿ, ಸುರೇಶ ಮೇಟಿ, ಆರ್.ಎಸ್ ಪಾಟೀಲ, ಮದನಮೋಹನ, ಸುಗೂರೇಶ ಸಾಲ್ಮನಿ, ಚೇತನ ಗುತ್ತೆದಾರ, ಕುಮಾರ ಭೋವಿ, ಚೇತನ, ಸಾರಿಗೆ ಸಂಸ್ಥೆ ನೌಕರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>