<p><strong>ರಾಯಚೂರು:</strong> ಮಳೆ ಅಭಾವದಿಂದ ಅಚ್ಚುಕಟ್ಟು ಪ್ರದೇಶದಲ್ಲಿ ಕಾಲುವೆ ನೀರಿನ ಅಭಾವ ಕಂಡು ಬರುತ್ತಿದ್ದು, ರೈತರು, ತೊಗರಿ, ಜೋಳ ಮತ್ತು ಕಡಲೆ ಬೆಳೆಗಳನ್ನು ಬೆಳೆಯಲು ಶಿಫಾರಸು ಮಾಡಲಾಗಿದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಜಿ.ಎಸ್. ಯಡಹಳ್ಳಿ ಹೇಳಿದರು.</p>.<p>ಜಿಲ್ಲೆಯ ಸಿರವಾರ ತಾಲ್ಲೂಕಿನ ಜಕ್ಕಲದಿನ್ನಿ ಗ್ರಾಮದಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿಯಲ್ಲಿ ಐ.ಸಿ.ಎ.ಆರ್.- ಕೃಷಿ ವಿಜ್ಞಾನ ಕೇಂದ್ರರಿಂದ ರಾಯಚೂರಿನ ಪ್ರಗತಿಪರ ರೈತ ಶರಣಗೌಡ ಅವರ ಕ್ಷೇತ್ರದಲ್ಲಿ ಸೋಮವಾರ ಏರ್ಪಡಿಸಿದ್ದ ‘ಕಡಲೆಯಲ್ಲಿ ಸಮಗ್ರ ಬೆಳೆ ನಿರ್ವಹಣೆಯ ಕ್ಷೇತ್ರೋತ್ಸವ’ದಲ್ಲಿ ಮಾತನಾಡಿದರು.</p>.<p>ರಾಯಚೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಏಕಬೆಳೆ ಹಾಗೂ ವರ್ಷದಿಂದ ವರ್ಷಕ್ಕೆ ಸರದಿ ಬೆಲೆಯಾಗಿ ಭತ್ತ/ಹತ್ತಿ /ಮೆಣಸಿನಕಾಯಿ ಬೆಳೆಯಲಾಗುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಈ ನಿಟ್ಟಿನಲ್ಲಿ ಜಕ್ಕಲದಿನ್ನಿ ಗ್ರಾಮದಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆ ಅಡಿಯಲ್ಲಿ ಕಡಲೆಯಲ್ಲಿ ಸಮಗ್ರ ಬೆಳೆ ನಿರ್ವಹಣೆ ಪ್ರಾತ್ಯಾಕ್ಷಿಕೆಯನ್ನು ಕಡಲೆ ಬೆಳೆಯ ಬಿಜಿಡಿ-203 ತಳಿಯನ್ನು ಆಯ್ಕೆ ಮಾಡಿ ಆಯ್ದ ರೈತರ ಕ್ಷೇತ್ರಗಳಲ್ಲಿ ಕೈಗೊಳ್ಳಲಾಗಿದೆ. ಇದರ ವಿಶೇಷತೆ ಕುರಿತು ಅರಿವು ಮೂಡಿಸಲು ಕ್ಷೇತ್ರೋತ್ಸವ ಹಮ್ಮಿಕೊಳ್ಳಲಾಗಿದೆ ಎಂದರು.</p>.<p>ರಾಯಚೂರಿನ ತಳಿ ಅಭಿವೃದ್ಧಿ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ. ಜೆ.ಎಂ. ನೀಡಗುಂದಿ ಮಾತನಾಡಿ, ಈ ಪ್ರದೇಶಕ್ಕೆ ಸೂಕ್ತವಾದ ಕಡಲೆ ತಳಿಗಳು, ಅವುಗಳ ಗುಣ ಧರ್ಮಗಳು ಹಾಗೂ ಬೀಜೋತ್ಪಾದನೆಯ ಮಹತ್ವ ಕುರಿತು ಮಾಹಿತಿ ನೀಡಿದರು.</p>.<p>ಕಡಲೆ ಬೆಳೆಯಲ್ಲಿ ’ಸಮಗ್ರ ಕೀಟ ನಿರ್ವಹಣೆ ಅಂಗವಾಗಿ ಬಿತ್ತನೆ ಪೂರ್ವದಲ್ಲಿ ಪ್ರತಿ ಕಿಗ್ರಾಂ ಬೀಜಕ್ಕೆ 4 ಗ್ರಾಂ ಟ್ರೈಕೋಡರ್ಮಾ ಬೀಜೋಪಚಾರ ಮಾಡಿಸಿ ಬಿತ್ತನೆ ಕೈಗೊಂಡಲ್ಲಿ ನೆಟೆರೋಗದ ನಿರ್ವಹಣೆ ಮಾಡಬಹುದಾಗಿದೆ. ಹಸಿರು ಕಾಯಿಕೊರಕದ ನಿರ್ವಹಣೆಗಾಗಿ ಬಿತ್ತನೆ ಸಮಯದಲ್ಲಿ ಪ್ರತಿ ಎಕರೆಗೆ 200 ಗ್ರಾಂ ಸೂರ್ಯಕಾಂತಿ/ಜೋಳದ ಕಾಳು ಮಿಶ್ರಣ ಮಾಡಿ ಬಿತ್ತಿದಲ್ಲಿ ಪಕ್ಷಿಗಳು ಕೂರಲು ಆಶ್ರಯ ಸಸ್ಯಗಳಾದಿ ಸಹಕಾರಿಯಗುತ್ತವೆ. ಕೀಟಗಳ ಸಮೀಕ್ಷೆಗಾಗಿ ಪ್ರತಿ ಎಕರೆಗೆ 4 ರಂತೆ ಮೊಹಕ ಬಲೆಗಳನ್ನು ಅಳವಡಿಸಿ. ಆರ್ಥಿಕ ನಷ್ಠ ರೇಖೆಗೆ ಅನುಗುಣವಾಗಿ ಕೀಟ ನಿರ್ವಹಣಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.</p>.<p>ಮೊದಲನೆಯ ಸಿಂಪರಣೆಯಾಗಿ ತತ್ತಿನಾಶಕ ಕೀಟನಾಶಕವಾದ ಪ್ರೋಫೆನೊಪಾಸ್ ಕೀಟನಾಶಕವನ್ನು ಪ್ರತಿ ಲೀಟರ್ ನೀರಿಗೆ 2 ಮಿ.ಲೀ.ನಂತೆ ಬೆರೆಸಿ ಸಿಂಪಡಿಸಬೇಕು. ಆನಂತರ ಎರಡನೆ ಸಿಂಪರಣೆಯಾಗಿ ನೂತನ ಸ್ಪರ್ಷನಾಶಕ ಕೀಟನಾಶಕವನ್ನು ಸಿಂಪಡಿಸಿ ಪರಿಣಾಮಕಾರಿಯಾಗಿ ಹತೋಟಿ ಮಾಡಬಹುದು ಎಂದು ತಿಳಿಸಿದರು.</p>.<p>ಪ್ರಗತಿಪರ ರೈತ ಶರಣೆಗೌಡ ಅವರು ಕಡಲೆ ಬೇಸಾಯದಲ್ಲಿ ತಮ್ಮ ಅನುಭವ ಹಂಚಿಕೊಂಡರು. ರೈತರು ಕಡಲೆ, ಜೋಳ ಹಾಗೂ ಹತ್ತಿ ಬೆಳೆಯ ತಳಿಗಳು, ಕಳೆನಾಶಕ ಹಾಗೂ ಕೀಟನಾಶಕಗಳ ಬಗ್ಗೆ ತಜ್ಞರೊಂದಿಗೆ ಸಂವಾದ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಮಳೆ ಅಭಾವದಿಂದ ಅಚ್ಚುಕಟ್ಟು ಪ್ರದೇಶದಲ್ಲಿ ಕಾಲುವೆ ನೀರಿನ ಅಭಾವ ಕಂಡು ಬರುತ್ತಿದ್ದು, ರೈತರು, ತೊಗರಿ, ಜೋಳ ಮತ್ತು ಕಡಲೆ ಬೆಳೆಗಳನ್ನು ಬೆಳೆಯಲು ಶಿಫಾರಸು ಮಾಡಲಾಗಿದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಜಿ.ಎಸ್. ಯಡಹಳ್ಳಿ ಹೇಳಿದರು.</p>.<p>ಜಿಲ್ಲೆಯ ಸಿರವಾರ ತಾಲ್ಲೂಕಿನ ಜಕ್ಕಲದಿನ್ನಿ ಗ್ರಾಮದಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿಯಲ್ಲಿ ಐ.ಸಿ.ಎ.ಆರ್.- ಕೃಷಿ ವಿಜ್ಞಾನ ಕೇಂದ್ರರಿಂದ ರಾಯಚೂರಿನ ಪ್ರಗತಿಪರ ರೈತ ಶರಣಗೌಡ ಅವರ ಕ್ಷೇತ್ರದಲ್ಲಿ ಸೋಮವಾರ ಏರ್ಪಡಿಸಿದ್ದ ‘ಕಡಲೆಯಲ್ಲಿ ಸಮಗ್ರ ಬೆಳೆ ನಿರ್ವಹಣೆಯ ಕ್ಷೇತ್ರೋತ್ಸವ’ದಲ್ಲಿ ಮಾತನಾಡಿದರು.</p>.<p>ರಾಯಚೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಏಕಬೆಳೆ ಹಾಗೂ ವರ್ಷದಿಂದ ವರ್ಷಕ್ಕೆ ಸರದಿ ಬೆಲೆಯಾಗಿ ಭತ್ತ/ಹತ್ತಿ /ಮೆಣಸಿನಕಾಯಿ ಬೆಳೆಯಲಾಗುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಈ ನಿಟ್ಟಿನಲ್ಲಿ ಜಕ್ಕಲದಿನ್ನಿ ಗ್ರಾಮದಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆ ಅಡಿಯಲ್ಲಿ ಕಡಲೆಯಲ್ಲಿ ಸಮಗ್ರ ಬೆಳೆ ನಿರ್ವಹಣೆ ಪ್ರಾತ್ಯಾಕ್ಷಿಕೆಯನ್ನು ಕಡಲೆ ಬೆಳೆಯ ಬಿಜಿಡಿ-203 ತಳಿಯನ್ನು ಆಯ್ಕೆ ಮಾಡಿ ಆಯ್ದ ರೈತರ ಕ್ಷೇತ್ರಗಳಲ್ಲಿ ಕೈಗೊಳ್ಳಲಾಗಿದೆ. ಇದರ ವಿಶೇಷತೆ ಕುರಿತು ಅರಿವು ಮೂಡಿಸಲು ಕ್ಷೇತ್ರೋತ್ಸವ ಹಮ್ಮಿಕೊಳ್ಳಲಾಗಿದೆ ಎಂದರು.</p>.<p>ರಾಯಚೂರಿನ ತಳಿ ಅಭಿವೃದ್ಧಿ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ. ಜೆ.ಎಂ. ನೀಡಗುಂದಿ ಮಾತನಾಡಿ, ಈ ಪ್ರದೇಶಕ್ಕೆ ಸೂಕ್ತವಾದ ಕಡಲೆ ತಳಿಗಳು, ಅವುಗಳ ಗುಣ ಧರ್ಮಗಳು ಹಾಗೂ ಬೀಜೋತ್ಪಾದನೆಯ ಮಹತ್ವ ಕುರಿತು ಮಾಹಿತಿ ನೀಡಿದರು.</p>.<p>ಕಡಲೆ ಬೆಳೆಯಲ್ಲಿ ’ಸಮಗ್ರ ಕೀಟ ನಿರ್ವಹಣೆ ಅಂಗವಾಗಿ ಬಿತ್ತನೆ ಪೂರ್ವದಲ್ಲಿ ಪ್ರತಿ ಕಿಗ್ರಾಂ ಬೀಜಕ್ಕೆ 4 ಗ್ರಾಂ ಟ್ರೈಕೋಡರ್ಮಾ ಬೀಜೋಪಚಾರ ಮಾಡಿಸಿ ಬಿತ್ತನೆ ಕೈಗೊಂಡಲ್ಲಿ ನೆಟೆರೋಗದ ನಿರ್ವಹಣೆ ಮಾಡಬಹುದಾಗಿದೆ. ಹಸಿರು ಕಾಯಿಕೊರಕದ ನಿರ್ವಹಣೆಗಾಗಿ ಬಿತ್ತನೆ ಸಮಯದಲ್ಲಿ ಪ್ರತಿ ಎಕರೆಗೆ 200 ಗ್ರಾಂ ಸೂರ್ಯಕಾಂತಿ/ಜೋಳದ ಕಾಳು ಮಿಶ್ರಣ ಮಾಡಿ ಬಿತ್ತಿದಲ್ಲಿ ಪಕ್ಷಿಗಳು ಕೂರಲು ಆಶ್ರಯ ಸಸ್ಯಗಳಾದಿ ಸಹಕಾರಿಯಗುತ್ತವೆ. ಕೀಟಗಳ ಸಮೀಕ್ಷೆಗಾಗಿ ಪ್ರತಿ ಎಕರೆಗೆ 4 ರಂತೆ ಮೊಹಕ ಬಲೆಗಳನ್ನು ಅಳವಡಿಸಿ. ಆರ್ಥಿಕ ನಷ್ಠ ರೇಖೆಗೆ ಅನುಗುಣವಾಗಿ ಕೀಟ ನಿರ್ವಹಣಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.</p>.<p>ಮೊದಲನೆಯ ಸಿಂಪರಣೆಯಾಗಿ ತತ್ತಿನಾಶಕ ಕೀಟನಾಶಕವಾದ ಪ್ರೋಫೆನೊಪಾಸ್ ಕೀಟನಾಶಕವನ್ನು ಪ್ರತಿ ಲೀಟರ್ ನೀರಿಗೆ 2 ಮಿ.ಲೀ.ನಂತೆ ಬೆರೆಸಿ ಸಿಂಪಡಿಸಬೇಕು. ಆನಂತರ ಎರಡನೆ ಸಿಂಪರಣೆಯಾಗಿ ನೂತನ ಸ್ಪರ್ಷನಾಶಕ ಕೀಟನಾಶಕವನ್ನು ಸಿಂಪಡಿಸಿ ಪರಿಣಾಮಕಾರಿಯಾಗಿ ಹತೋಟಿ ಮಾಡಬಹುದು ಎಂದು ತಿಳಿಸಿದರು.</p>.<p>ಪ್ರಗತಿಪರ ರೈತ ಶರಣೆಗೌಡ ಅವರು ಕಡಲೆ ಬೇಸಾಯದಲ್ಲಿ ತಮ್ಮ ಅನುಭವ ಹಂಚಿಕೊಂಡರು. ರೈತರು ಕಡಲೆ, ಜೋಳ ಹಾಗೂ ಹತ್ತಿ ಬೆಳೆಯ ತಳಿಗಳು, ಕಳೆನಾಶಕ ಹಾಗೂ ಕೀಟನಾಶಕಗಳ ಬಗ್ಗೆ ತಜ್ಞರೊಂದಿಗೆ ಸಂವಾದ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>