ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಿದ್ದರಾಮಯ್ಯ ಕಂಡರೆ ಎಚ್‌.ವಿಶ್ವನಾಥಗೆ ಅಸೂಯೆ’

Last Updated 4 ಜುಲೈ 2019, 12:29 IST
ಅಕ್ಷರ ಗಾತ್ರ

ರಾಯಚೂರು:‘ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಎಚ್‌. ವಿಶ್ವನಾಥ ಅವರಿಗೆ ಅಸೂಯೆ ಇದೆ. ಈ ಕಾರಣಕ್ಕಾಗಿ ಸಿದ್ದರಾಮಯ್ಯ ಕುರಿತು ಮೊದಲಿನಿಂದಲೂ ಟೀಕೆ ಟಿಪ್ಪಣೆ ಮಾಡುತ್ತಾ ಬರುತ್ತಿದ್ದಾರೆ’ ಎಂದು ವಿಧಾನ ಪರಿಷತ್‌ ಸದಸ್ಯ ಐವಾನ್‌ ಡಿಸೋಜಾ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದಕಂದಾಯ ಇಲಾಖೆಯ ಪ್ರಗತಿಯ ಪರಿಶೀಲನೆ ಬಳಿಕಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಸಮ್ಮಿಶ್ರ ಸರ್ಕಾರವು ಸಿದ್ದರಾಮಯ್ಯ ಅವರಿಂದಾಗಿ ಅಸ್ಥಿರವಾಗಿಲ್ಲ. ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬರಲು ಸಿದ್ದರಾಮಯ್ಯ ಕಾರಣ, ಅವರಿಂದಾಗಿಯೇ ಸರ್ಕಾರ ಸ್ಥಿರವಾಗಿ ಮುನ್ನಡೆಯುತ್ತಿದೆ. ಶಾಸಕ ಆನಂದಸಿಂಗ್‌ ಅವರ ರಾಜೀನಾಮೆಗೆ ವೈಯಕ್ತಿಕ ಕಾರಣವಿದೆ. ಬೇಡಿಕೆಗಳನ್ನು ಪರಿಶೀಲಿಸುವ ಭರವಸೆಯನ್ನು ಮುಖಂಡರು ನೀಡಿದ್ದಾರೆ. ಸರ್ಕಾರ ಅಸ್ಥಿರಗೊಳಿಸುವ ಬಿಜೆಪಿ ಮುಖಂಡರ ಪ್ರಯತ್ನ ಫಲಿಸುವುದಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT