<p><strong>ರಾಯಚೂರು:</strong> ಅನುಭವ ಮಂಟಪದ ಮೂಲಕ ಬಸವಾದಿ ಶರಣರ ಜೊತೆಗೂಡಿ ತಮ್ಮ ವಚನಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕಾರ್ಯವನ್ನು ಹಡಪದ ಅಪ್ಪಣ್ಣ ಅವರು ಮಾಡಿದ್ದಾರೆ ಎಂದು ಕರ್ನಾಟಕ ಪ್ರೌಢಶಾಲಾ (ಬಡ್ತಿ) ಶಿಕ್ಷಕರ ಸಂಘದ ಜಿಲ್ಲಾ ಗೌರವಾಧ್ಯಕ್ಷ ದಂಡಪ್ಪ ಬಿರಾದಾರ ತಿಳಿಸಿದರು.</p>.<p>ನಗರದ ಪಂಡಿತ್ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಶನಿವಾರ ಆಯೋಜಿಸಿದ್ದ ಹಡಪದ ಅಪ್ಪಣ್ಣನವರ ಜಯಂತಿ ಸರಳ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಶುಭ ಕಾರ್ಯಕ್ಕೆ ಹೊರಡುವ ಸಂದರ್ಭದಲ್ಲಿ ಕೆಲವರ ಮುಖ ನೋಡಿದರೆ ಅಪಶಕುನ ಎಂಬ ಭಾವನೆ ಇರುವಂತಹ ಸಂದರ್ಭದಲ್ಲಿ ಬಸವೇಶ್ವರರು ಹಡಪದ ಅಪ್ಪಣ್ಣನ ಅವರನ್ನು ಆಪ್ತ ಕಾರ್ಯದರ್ಶಿ ಮಾಡಿ ಗೌರವ ಕೊಟ್ಟಿದ್ದರು. ಸರಳ ಸಜ್ಜನಿಕೆಯ ನಿಜಸುಖಿ ಶರಣರಾಗಿದ್ದಾರೆ ಎಂದು ಹೇಳಿದರು.</p>.<p>ಹಲವಾರು ವಚನಗಳನ್ನು ಅಪ್ಪಣ್ಣ ರಚನೆ ಮಾಡಿದ್ದಾರೆ. ವ್ಯಕ್ತಿ ಯಾವ ಕೆಲಸ ಮಾಡಿದರೂ ಅದನ್ನು ಕಾಯಕ ಎಂದು ತಿಳಿದುಕೊಂಡು ಬದುಕಬೇಕು ಎಂದು ಸಾರಿದ್ದಾರೆ ಎಂದು ತಿಳಿಸಿದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಲಾ ಬಿ.ನಾಯಕ ಅವರು ಹಡಪದ ಅಪ್ಪಣ್ಣ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು</p>.<p>ಮುಖಂಡರಾದ ಅಮೀನಗಡ ಅಮರಪ್ಪ, ದೇವೆಂದ್ರಪ್ಪ, ವೆಂಕಟೇಶ, ಧನಂಜಯ, ರವಿ, ಪ್ರಶಾಂತಕುಮಾರ, ಮಲ್ಲಿಕಾರ್ಜುನ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಅನುಭವ ಮಂಟಪದ ಮೂಲಕ ಬಸವಾದಿ ಶರಣರ ಜೊತೆಗೂಡಿ ತಮ್ಮ ವಚನಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕಾರ್ಯವನ್ನು ಹಡಪದ ಅಪ್ಪಣ್ಣ ಅವರು ಮಾಡಿದ್ದಾರೆ ಎಂದು ಕರ್ನಾಟಕ ಪ್ರೌಢಶಾಲಾ (ಬಡ್ತಿ) ಶಿಕ್ಷಕರ ಸಂಘದ ಜಿಲ್ಲಾ ಗೌರವಾಧ್ಯಕ್ಷ ದಂಡಪ್ಪ ಬಿರಾದಾರ ತಿಳಿಸಿದರು.</p>.<p>ನಗರದ ಪಂಡಿತ್ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಶನಿವಾರ ಆಯೋಜಿಸಿದ್ದ ಹಡಪದ ಅಪ್ಪಣ್ಣನವರ ಜಯಂತಿ ಸರಳ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಶುಭ ಕಾರ್ಯಕ್ಕೆ ಹೊರಡುವ ಸಂದರ್ಭದಲ್ಲಿ ಕೆಲವರ ಮುಖ ನೋಡಿದರೆ ಅಪಶಕುನ ಎಂಬ ಭಾವನೆ ಇರುವಂತಹ ಸಂದರ್ಭದಲ್ಲಿ ಬಸವೇಶ್ವರರು ಹಡಪದ ಅಪ್ಪಣ್ಣನ ಅವರನ್ನು ಆಪ್ತ ಕಾರ್ಯದರ್ಶಿ ಮಾಡಿ ಗೌರವ ಕೊಟ್ಟಿದ್ದರು. ಸರಳ ಸಜ್ಜನಿಕೆಯ ನಿಜಸುಖಿ ಶರಣರಾಗಿದ್ದಾರೆ ಎಂದು ಹೇಳಿದರು.</p>.<p>ಹಲವಾರು ವಚನಗಳನ್ನು ಅಪ್ಪಣ್ಣ ರಚನೆ ಮಾಡಿದ್ದಾರೆ. ವ್ಯಕ್ತಿ ಯಾವ ಕೆಲಸ ಮಾಡಿದರೂ ಅದನ್ನು ಕಾಯಕ ಎಂದು ತಿಳಿದುಕೊಂಡು ಬದುಕಬೇಕು ಎಂದು ಸಾರಿದ್ದಾರೆ ಎಂದು ತಿಳಿಸಿದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಲಾ ಬಿ.ನಾಯಕ ಅವರು ಹಡಪದ ಅಪ್ಪಣ್ಣ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು</p>.<p>ಮುಖಂಡರಾದ ಅಮೀನಗಡ ಅಮರಪ್ಪ, ದೇವೆಂದ್ರಪ್ಪ, ವೆಂಕಟೇಶ, ಧನಂಜಯ, ರವಿ, ಪ್ರಶಾಂತಕುಮಾರ, ಮಲ್ಲಿಕಾರ್ಜುನ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>