<p><strong>ರಾಯಚೂರು: </strong>ಜಗಜ್ಯೋತಿ ಬಸವಣ್ಣನವರ ಸಮಕಾಲಿನರಾದ ಹಡಪದ ಅಪ್ಪಣ್ಣ ಅವರು ಸಮಸಮಾಜ ನಿರ್ಮಿಸಲು ಹಾಗೂ ಪ್ರಜಾಪ್ರಭುತ್ವ ಗಟ್ಟಿಗೊಳ್ಳಲು ಅಪಾರವಾದ ಕೊಡುಗೆ ನೀಡಿದ್ದಾರೆ ಎಂದು ನಗರಸಭೆ ಉಪಾಧ್ಯಕ್ಷ ಜಯಣ್ಣ ಹೇಳಿದರು.</p>.<p>ನಗರದ ಪಂಡಿತ್ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಶುಕ್ರವಾರ ಆಯೋಜಿಸಿದ್ದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>12ನೇ ಶತಮಾನದ ಶರಣರ ಪ್ರಜಾಪ್ರಭುತ್ವ ವ್ಯವಸ್ಥೆ ಉತ್ತಮವಾಗಿದ್ದು, ಅದನ್ನು ಈಗಿನ ಪ್ರಜಾಪ್ರಭುತ್ವದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.</p>.<p>ಸುಸಂಸ್ಕೃತಿ ಸಮಾಜ ನಿರ್ಮಾಣದಲ್ಲಿ ಪ್ರತಿಯೊಂದು ಸಮಾಜಕ್ಕೂ ತನ್ನದೇ ಮಹತ್ವವಿದ್ದು, ಜಾತಿ ಹಾಗೂ ಸಮಾಜ ಕೀಳೆಂದು ಭಾವಿಸದೇ ಕುಲ ವೃತ್ತಿಯಲ್ಲಿ ನೈಪುಣ್ಯತೆ ಸಾಧಿಸಿ, ಪ್ರತಿಭೆಯನ್ನು ಜಗತ್ತಿಗೆ ಪ್ರದರ್ಶಿಸಬೇಕು ಎಂದರು.</p>.<p>ಆಯಾ ಜಾತಿಯ ಗುರುಗಳ ಜಯಂತಿಯನ್ನು ಸರ್ಕಾರದಿಂದ ಆಚರಣೆ ಮಾಡಲು ಒತ್ತಾಯ ಮಾಡುತ್ತಿರುವುದು ಕಾಣುತ್ತಿದ್ದು, ಕೆಲ ಜಯಂತಿಗಳು ಕಾಟಾಚಾರಕ್ಕೆ ಎಂಬಂತೆ ಆಚರಣೆ ಮಾಡಲಾಗುತ್ತದೆ. ಆದರೆ, ಹಡಪದ ಸಮಾಜ ಕ್ರಿಯಾಶೀಲತೆಯಿಂದ ಪಾಲ್ಗೊಂಡು ಜಯಂತಿ ಆಚರಣೆ ಮಾಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಎಚ್.ಸುರೇಶ ಬಳಗಾನೂರು ಉಪನ್ಯಾಸ ನೀಡಿ, ಹಡಪದ ಅಪ್ಪಣ್ಣ ಜಯಂತಿಯನ್ನು ಸರ್ಕಾರದಿಂದ ಮೊದಲಬಾರಿಗೆ ಆಚರಣೆ ಮಾಡುತ್ತಿದ್ದು, ಇದು 884ನೇ ಜಯಂತಿಯಾಗಿದೆ ಎಂದು ಹೇಳಿದರು.</p>.<p>ಕಲ್ಯಾಣದಲ್ಲಿ ಏನೇ ಕಾರ್ಯಕ್ರಮ ನಡೆಯಬೇಕಾದರೂ ಬಸವಣ್ಣವರು ಆಪ್ತ ಕಾರ್ಯದರ್ಶಿಯಾಗಿದ್ದ ಹಡಪದ ಅಪ್ಪಣ್ಣ ಅವರ ಸಹಾಯ ತೆಗೆದುಕೊಳ್ಳುತ್ತಿದ್ದರು. ಅಂತಹವರ ಜಯಂತಿ ಆಚರಣೆ ಮಾಡುತ್ತಿರುವ ಸರ್ಕಾರಕ್ಕೆ ಅಭಾರಿಯಾಗಿದ್ದೇವೆ ಎಂದರು.</p>.<p>ರಾಜ್ಯದಲ್ಲಿ ಸುಮಾರು 28 ಲಕ್ಷದಷ್ಟು ಜನಾಂಗದವರಿದ್ದು, ಎಲ್ಲರನ್ನೂ ಒಗ್ಗೂಡಿಸಿ ಸಮಾಜಕ್ಕೆ ಬೇಕಾಗುವ ಸೌಲಭ್ಯಗಳನ್ನು ಪಡೆಯಬೇಕಾಗಿದೆ. ಅಪ್ಪಣ್ಣನವರು ರಚಿಸಿರುವ 1000 ವಚನಗಳಲ್ಲಿ, 250 ವಚನಗಳು ಮಾತ್ರ ಲಭ್ಯವಾಗಿವೆ ಎಂದು ತಿಳಿಸಿದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಬಿ.ನೀಲಮ್ಮ ಪ್ರಾಸ್ತಾವಿಕ ಮಾತನಾಡಿ, ಜಯಂತಿಯನ್ನು ಆಚರಣೆ ಮಾಡುವ ಮೂಲಕ ತತ್ವಪುರುಷರ ಆದರ್ಶಗಳನ್ನು ಯುವ ಪೀಳಿಗೆ ಅಳವಡಿಸಿಕೊಳ್ಳಲು ಪ್ರೇರಣೆ ನೀಡಲಾಗುತ್ತಿದೆ ಎಂದು ಹೇಳಿದರು.</p>.<p>ಸಮಾಜದ ಮುಖಂಡರದಾದ ಅಮರಪ್ಪ ಹಡಪದ, ಮಹಾಬಲೇಶ, ವೀರಭದ್ರಪ್ಪ, ದೇವೇಂದ್ರಪ್ಪ, ಬಸವಂತರಾಯ, ವಾರ್ತಾ ಇಲಾಖೆ ವಾರ್ತಾ ಸಹಾಯಕ ಸುರೇಶ, ದಂಡಪ್ಪ ಬಿರಾದಾರ್, ಬಸವರಾಜ, ಸಂಗಪ್ಪ ಹಡಪದ, ಅಯ್ಯಪ್ಪ ದೊಂಡಂಬಳಿ, ಗುಂಡಪ್ಪ, ಚಂದ್ರಶೇಖರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>ಜಗಜ್ಯೋತಿ ಬಸವಣ್ಣನವರ ಸಮಕಾಲಿನರಾದ ಹಡಪದ ಅಪ್ಪಣ್ಣ ಅವರು ಸಮಸಮಾಜ ನಿರ್ಮಿಸಲು ಹಾಗೂ ಪ್ರಜಾಪ್ರಭುತ್ವ ಗಟ್ಟಿಗೊಳ್ಳಲು ಅಪಾರವಾದ ಕೊಡುಗೆ ನೀಡಿದ್ದಾರೆ ಎಂದು ನಗರಸಭೆ ಉಪಾಧ್ಯಕ್ಷ ಜಯಣ್ಣ ಹೇಳಿದರು.</p>.<p>ನಗರದ ಪಂಡಿತ್ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಶುಕ್ರವಾರ ಆಯೋಜಿಸಿದ್ದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>12ನೇ ಶತಮಾನದ ಶರಣರ ಪ್ರಜಾಪ್ರಭುತ್ವ ವ್ಯವಸ್ಥೆ ಉತ್ತಮವಾಗಿದ್ದು, ಅದನ್ನು ಈಗಿನ ಪ್ರಜಾಪ್ರಭುತ್ವದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.</p>.<p>ಸುಸಂಸ್ಕೃತಿ ಸಮಾಜ ನಿರ್ಮಾಣದಲ್ಲಿ ಪ್ರತಿಯೊಂದು ಸಮಾಜಕ್ಕೂ ತನ್ನದೇ ಮಹತ್ವವಿದ್ದು, ಜಾತಿ ಹಾಗೂ ಸಮಾಜ ಕೀಳೆಂದು ಭಾವಿಸದೇ ಕುಲ ವೃತ್ತಿಯಲ್ಲಿ ನೈಪುಣ್ಯತೆ ಸಾಧಿಸಿ, ಪ್ರತಿಭೆಯನ್ನು ಜಗತ್ತಿಗೆ ಪ್ರದರ್ಶಿಸಬೇಕು ಎಂದರು.</p>.<p>ಆಯಾ ಜಾತಿಯ ಗುರುಗಳ ಜಯಂತಿಯನ್ನು ಸರ್ಕಾರದಿಂದ ಆಚರಣೆ ಮಾಡಲು ಒತ್ತಾಯ ಮಾಡುತ್ತಿರುವುದು ಕಾಣುತ್ತಿದ್ದು, ಕೆಲ ಜಯಂತಿಗಳು ಕಾಟಾಚಾರಕ್ಕೆ ಎಂಬಂತೆ ಆಚರಣೆ ಮಾಡಲಾಗುತ್ತದೆ. ಆದರೆ, ಹಡಪದ ಸಮಾಜ ಕ್ರಿಯಾಶೀಲತೆಯಿಂದ ಪಾಲ್ಗೊಂಡು ಜಯಂತಿ ಆಚರಣೆ ಮಾಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಎಚ್.ಸುರೇಶ ಬಳಗಾನೂರು ಉಪನ್ಯಾಸ ನೀಡಿ, ಹಡಪದ ಅಪ್ಪಣ್ಣ ಜಯಂತಿಯನ್ನು ಸರ್ಕಾರದಿಂದ ಮೊದಲಬಾರಿಗೆ ಆಚರಣೆ ಮಾಡುತ್ತಿದ್ದು, ಇದು 884ನೇ ಜಯಂತಿಯಾಗಿದೆ ಎಂದು ಹೇಳಿದರು.</p>.<p>ಕಲ್ಯಾಣದಲ್ಲಿ ಏನೇ ಕಾರ್ಯಕ್ರಮ ನಡೆಯಬೇಕಾದರೂ ಬಸವಣ್ಣವರು ಆಪ್ತ ಕಾರ್ಯದರ್ಶಿಯಾಗಿದ್ದ ಹಡಪದ ಅಪ್ಪಣ್ಣ ಅವರ ಸಹಾಯ ತೆಗೆದುಕೊಳ್ಳುತ್ತಿದ್ದರು. ಅಂತಹವರ ಜಯಂತಿ ಆಚರಣೆ ಮಾಡುತ್ತಿರುವ ಸರ್ಕಾರಕ್ಕೆ ಅಭಾರಿಯಾಗಿದ್ದೇವೆ ಎಂದರು.</p>.<p>ರಾಜ್ಯದಲ್ಲಿ ಸುಮಾರು 28 ಲಕ್ಷದಷ್ಟು ಜನಾಂಗದವರಿದ್ದು, ಎಲ್ಲರನ್ನೂ ಒಗ್ಗೂಡಿಸಿ ಸಮಾಜಕ್ಕೆ ಬೇಕಾಗುವ ಸೌಲಭ್ಯಗಳನ್ನು ಪಡೆಯಬೇಕಾಗಿದೆ. ಅಪ್ಪಣ್ಣನವರು ರಚಿಸಿರುವ 1000 ವಚನಗಳಲ್ಲಿ, 250 ವಚನಗಳು ಮಾತ್ರ ಲಭ್ಯವಾಗಿವೆ ಎಂದು ತಿಳಿಸಿದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಬಿ.ನೀಲಮ್ಮ ಪ್ರಾಸ್ತಾವಿಕ ಮಾತನಾಡಿ, ಜಯಂತಿಯನ್ನು ಆಚರಣೆ ಮಾಡುವ ಮೂಲಕ ತತ್ವಪುರುಷರ ಆದರ್ಶಗಳನ್ನು ಯುವ ಪೀಳಿಗೆ ಅಳವಡಿಸಿಕೊಳ್ಳಲು ಪ್ರೇರಣೆ ನೀಡಲಾಗುತ್ತಿದೆ ಎಂದು ಹೇಳಿದರು.</p>.<p>ಸಮಾಜದ ಮುಖಂಡರದಾದ ಅಮರಪ್ಪ ಹಡಪದ, ಮಹಾಬಲೇಶ, ವೀರಭದ್ರಪ್ಪ, ದೇವೇಂದ್ರಪ್ಪ, ಬಸವಂತರಾಯ, ವಾರ್ತಾ ಇಲಾಖೆ ವಾರ್ತಾ ಸಹಾಯಕ ಸುರೇಶ, ದಂಡಪ್ಪ ಬಿರಾದಾರ್, ಬಸವರಾಜ, ಸಂಗಪ್ಪ ಹಡಪದ, ಅಯ್ಯಪ್ಪ ದೊಂಡಂಬಳಿ, ಗುಂಡಪ್ಪ, ಚಂದ್ರಶೇಖರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>