ಘೋಷಿತ ಯೋಜನೆಗಳನ್ನು ಶೀಘ್ರದಲ್ಲೆ ಮಾಡಿಕೊಡುವ ಬಗ್ಗೆ ರೈಲ್ವೆ ಅಧಿಕಾರಿಗಳು ಮೇಲಿಂದ ಮೇಲೆ ಭರವಸೆಗಳನ್ನು ನೀಡಿ, ಪ್ರಚಾರ ಪಡೆಯುವುದು ಹಾಗೇ ಮುಂದುವರಿದಿದೆ. ವಾಸ್ತವದಲ್ಲಿ ಗುಂತಕಲ್ ರೈಲ್ವೆ ವಿಭಾಗದ ಅಧಿಕಾರಿಗಳು ಕಾರ್ಯೋನ್ಮುಖರಾಗಿ ಅಂಗವಿಕಲರು, ವಯೋವೃದ್ಧರಿಗೆ ಅನುಕೂಲ ಮಾಡಿಕೊಡುತ್ತಿಲ್ಲ. ಅಧಿಕಾರಿಗಳ ಈ ನಿರ್ಲಕ್ಷ್ಯವನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಅನೇಕ ಬಾರಿ ಪ್ರತಿಭಟನೆಗಳನ್ನು ನಡೆಸಿ ಮನವಿ ಸಲ್ಲಿಸಿವೆ. ಆದರೆ, ಕಾರ್ಯಾನುಷ್ಠಾನ ಮಾತ್ರ ಶೂನ್ಯವಾಗಿದೆ.