<p><strong>ರಾಯಚೂರು</strong>: ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ವಿಕಲಚೇತನರ ಕುಂದು ಕೊರತೆ ಸಭೆ ನಡೆಸಬೇಕು. 2016ರಲ್ಲಿ ಅನುಷ್ಠಾನಗೊಂಡ ಕಾಯ್ದೆಯನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿ ಜಿಲ್ಲಾ ವಿಕಲಚೇತನರ ಒಕ್ಕೂಟದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರುಗುರುವಾರ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು.</p>.<p>ವಿಕಲಚೇತನರ ಶೇ 5 ರಷ್ಟು ಅನುದಾನದಡಿ ಜಿಲ್ಲಾಮಟ್ಟದ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ಮಾಡಬೇಕು. ನೂತನ ತಾಲ್ಲೂಕು ಸಿರವಾರ, ಮಸ್ಕಿಗೆ ಎಂ.ಆರ್. ಡಬ್ಲ್ಯೂ ಕಾರ್ಯಕರ್ತರನ್ನು ನೇಮಕ ಮಾಡಬೇಕು ಆಗ್ರಹಿಸಿದರು.</p>.<p>ಸಂಸದರ ಅನುದಾನದಲ್ಲಿ ಸುಮಾರು 12 ವರ್ಷಗಳಿಂದ ಹಾಗೂ 7 ತಾಲ್ಲೂಕುಗಳ 3 ವರ್ಷದಿಂದ ಗ್ರಾಮೀಣ ಕ್ಷೇತ್ರಗಳಲ್ಲಿ ಕೂಡಲೇ ತ್ರಿಚಕ್ರ ವಾಹನಗಳನ್ನು ಮಂಜೂರು ಮಾಡಬೇಕು. ತಾಲ್ಲೂಕು ಪಂಚಾಯಿತಿ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿಗಳಲ್ಲಿ ಶೇ 5ರ ಯೋಜನೆ ಅಡಿಯಲ್ಲಿ 2018-19 ರಿಂದ ಇಲ್ಲಿಯವರಗೆ ಅನುದಾನದ ಬಿಡುಗಡೆ ಯಾಗಿದ್ದು ಸದ್ಬಳಕೆಗೆ ಕ್ರಮ ತೆಗೆದುಕೊಳ್ಳಬೇಕು.</p>.<p>ಜಿಲ್ಲಾ ವಿಕಲಚೇತನರ ಪುನರ್ ವಸತಿ ಕೇಂದ್ರ ಯೋಜನೆಗಳ ಅನುಷ್ಠಾನಗೊಳ್ಳದೇ ಕೇಂದ್ರದಲ್ಲಿ ಯುಡಿಐಡಿ ಕಾರ್ಡುಗಳು ಮಾತ್ರ ವಿತರಣೆಗೆ ಸೀಮಿತವಾಗಿವೆ. ಇದರಿಂದ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಕೂಡಲೇ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಹಾಗೂ ಒಂದು ಕುಟುಂಬದಲ್ಲಿ ಒಬ್ಬ ವಿಕಲಚೇತನರಿದ್ದರೆ ಆ ಕುಟುಂಬಕ್ಕೆ ಅಂತ್ಯೋದಯ ಕಾರ್ಡ್ ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.</p>.<p>ಒಕ್ಕೂಟದ ಜಿಲ್ಲಾ ಗೌರವಾದ್ಯಕ್ಷ ಹೊನ್ನಪ್ಪ, ಜಿಲ್ಲಾಧ್ಯಕ್ಷ ಎಂ.ಡಿ.ಜಾಫರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರಸಪ್ಪ ಟೈಲರ್, ಪದಾಧಿಕಾರಿ ಮರಿಸ್ವಾಮಿ, ನಾಗರಾಜ, ಅಂಬರೀಶ, ಮೌಲಸಾಬ್, ವೆಂಕೋಬಾ, ತಿಮ್ಮಪ್ಪ, ವೀರೇಶ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ವಿಕಲಚೇತನರ ಕುಂದು ಕೊರತೆ ಸಭೆ ನಡೆಸಬೇಕು. 2016ರಲ್ಲಿ ಅನುಷ್ಠಾನಗೊಂಡ ಕಾಯ್ದೆಯನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿ ಜಿಲ್ಲಾ ವಿಕಲಚೇತನರ ಒಕ್ಕೂಟದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರುಗುರುವಾರ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು.</p>.<p>ವಿಕಲಚೇತನರ ಶೇ 5 ರಷ್ಟು ಅನುದಾನದಡಿ ಜಿಲ್ಲಾಮಟ್ಟದ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ಮಾಡಬೇಕು. ನೂತನ ತಾಲ್ಲೂಕು ಸಿರವಾರ, ಮಸ್ಕಿಗೆ ಎಂ.ಆರ್. ಡಬ್ಲ್ಯೂ ಕಾರ್ಯಕರ್ತರನ್ನು ನೇಮಕ ಮಾಡಬೇಕು ಆಗ್ರಹಿಸಿದರು.</p>.<p>ಸಂಸದರ ಅನುದಾನದಲ್ಲಿ ಸುಮಾರು 12 ವರ್ಷಗಳಿಂದ ಹಾಗೂ 7 ತಾಲ್ಲೂಕುಗಳ 3 ವರ್ಷದಿಂದ ಗ್ರಾಮೀಣ ಕ್ಷೇತ್ರಗಳಲ್ಲಿ ಕೂಡಲೇ ತ್ರಿಚಕ್ರ ವಾಹನಗಳನ್ನು ಮಂಜೂರು ಮಾಡಬೇಕು. ತಾಲ್ಲೂಕು ಪಂಚಾಯಿತಿ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿಗಳಲ್ಲಿ ಶೇ 5ರ ಯೋಜನೆ ಅಡಿಯಲ್ಲಿ 2018-19 ರಿಂದ ಇಲ್ಲಿಯವರಗೆ ಅನುದಾನದ ಬಿಡುಗಡೆ ಯಾಗಿದ್ದು ಸದ್ಬಳಕೆಗೆ ಕ್ರಮ ತೆಗೆದುಕೊಳ್ಳಬೇಕು.</p>.<p>ಜಿಲ್ಲಾ ವಿಕಲಚೇತನರ ಪುನರ್ ವಸತಿ ಕೇಂದ್ರ ಯೋಜನೆಗಳ ಅನುಷ್ಠಾನಗೊಳ್ಳದೇ ಕೇಂದ್ರದಲ್ಲಿ ಯುಡಿಐಡಿ ಕಾರ್ಡುಗಳು ಮಾತ್ರ ವಿತರಣೆಗೆ ಸೀಮಿತವಾಗಿವೆ. ಇದರಿಂದ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಕೂಡಲೇ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಹಾಗೂ ಒಂದು ಕುಟುಂಬದಲ್ಲಿ ಒಬ್ಬ ವಿಕಲಚೇತನರಿದ್ದರೆ ಆ ಕುಟುಂಬಕ್ಕೆ ಅಂತ್ಯೋದಯ ಕಾರ್ಡ್ ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.</p>.<p>ಒಕ್ಕೂಟದ ಜಿಲ್ಲಾ ಗೌರವಾದ್ಯಕ್ಷ ಹೊನ್ನಪ್ಪ, ಜಿಲ್ಲಾಧ್ಯಕ್ಷ ಎಂ.ಡಿ.ಜಾಫರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರಸಪ್ಪ ಟೈಲರ್, ಪದಾಧಿಕಾರಿ ಮರಿಸ್ವಾಮಿ, ನಾಗರಾಜ, ಅಂಬರೀಶ, ಮೌಲಸಾಬ್, ವೆಂಕೋಬಾ, ತಿಮ್ಮಪ್ಪ, ವೀರೇಶ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>