<p>ರಾಯಚೂರು: ಶಿಲ್ಪಾ ಮೆಡಿಕೇರ್ ಲಿಮಿಟೆಡ್, ಶಿಲ್ಪಾ ಫೌಂಡೇಶನ್ ಹಾಗೂ ಗ್ರೀನ್ ರಾಯಚೂರು ವತಿಯಿಂದ ರಾಯಚೂರು ಮಹಾನಗರ ಪಾಲಿಕೆಗೆ 2,000ಕ್ಕೂ ಹೆಚ್ಚು ಸಸಿಗಳನ್ನು ಹಸ್ತಾಂತರಿಸಲಾಯಿತು.<br /><br /> ಶಿಲ್ಪಾ ಮೆಡಿಕೇರ್ ಚೇರಮನ್ ವಿಷ್ಣುಕಾಂತ ಬೂತಡಾ ಅವರು ಮಹಾನಗರ ಪಾಲಿಕೆ ಕಚೇರಿ ಮುಂಭಾಗದಲ್ಲಿ ಆಯುಕ್ತ ಜುಬಿನ್ ಮೊಹಾಪಾತ್ರ ಅವರಿಗೆ ಸಾಂಕೇತಿಕವಾಗಿ ಸಸಿ ನೀಡುವ ಮೂಲಕ ಸಸಿಗಳನ್ನು ಹಸ್ತಾಂತರಿಸಿದರು. <br /><br /> ಆಯುಕ್ತ ಜುಬಿನ್ ಮೊಹಾಪಾತ್ರಾ ಮಾತನಾಡಿ, ‘ಮಹಾನಗರ ಪಾಲಿಕೆ ವತಿಯಿಂದ ನಗರವನ್ನು ಸ್ವಚ್ಛಗೊಳಿಸುವುದರ ಜೊತೆಗೆ ಹಸಿರು ಕ್ರಾಂತಿ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಶಿಲ್ಪಾ ಮೆಡಿಕೇರ್ ಕಂಪನಿ ಹಾಗೂ ಗ್ರೀನ್ ರಾಯಚೂರು ಸಂಸ್ಥೆ ಸಹ ಜೊತೆಯಾಗಿದ್ದು ಖುಷಿ ತಂದಿದೆ’ ಎಂದರು.</p>.<p>‘ಬರುವ ದಿನಗಳಲ್ಲಿ ರಾಯಚೂರಿನಲ್ಲಿ ಶೇ 33ರಷ್ಟು ಹಸಿರು ಹೊದಿಕೆ ಕಾಣುವಂತಾಗಲು ಶ್ರಮಿಸಲಿ. ಸಾರ್ವಜನಿಕರು ಸಹ ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು.<br /><br /> ಶಿಲ್ಪಾ ಮೆಡಿಕೇರ್ ಚೇರಮನ್ ವಿಷ್ಣುಕಾಂತ ಬೂತಡಾ ಮಾತನಾಡಿ, ‘ನಮ್ಮ ಸಂಸ್ಥೆ ಹಾಗೂ ಗ್ರೀನ್ ರಾಯಚೂರು ಸಂಸ್ಥೆ 2017ರಿಂದ ನಗರದಲ್ಲಿ ಸಸಿಗಳನ್ನು ನೆಟ್ಟು ಅವುಗಳನ್ನು ಪೋಷಿಸುವ ಕಾರ್ಯ ಮಾಡುತ್ತಿದೆ. ಈ ಬಾರಿ 2,000 ಸಸಿಗಳನ್ನು ಮಹಾನಗರ ಪಾಲಿಕೆಗೆ ನೀಡಲಾಗಿದೆ’ ಎಂದು ತಿಳಿಸಿದರು.<br /><br /> ಮಹಾನಗರ ಪಾಲಿಕೆಯ ಅಧಿಕಾರಿ ಮೇನಕಾ ಪಾಟೀಲ, ಕಾಂಗ್ರೆಸ್ ಮುಖಂಡರಾದ ಎಂ.ಈರಣ್ಣ , ಗ್ರೀನ್ ರಾಯಚೂರು ಸಂಸ್ಥೆಯ ಅಧ್ಯಕ್ಷೆ ಸರಸ್ವತಿ ಕಿಲಕಲೆ, ಉಪಾಧ್ಯಕ್ಷ ಡಾ.ಸಿ.ಪಿ.ಪಾಟೀಲ, ರಮೇಶಚಂದ್ರ ಜೈನ್, ಕಾರ್ಯದರ್ಶಿ ರಾಜೇಂದ್ರಕುಮಾರ್ ಶಿವಾಳೆ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಚೂರು: ಶಿಲ್ಪಾ ಮೆಡಿಕೇರ್ ಲಿಮಿಟೆಡ್, ಶಿಲ್ಪಾ ಫೌಂಡೇಶನ್ ಹಾಗೂ ಗ್ರೀನ್ ರಾಯಚೂರು ವತಿಯಿಂದ ರಾಯಚೂರು ಮಹಾನಗರ ಪಾಲಿಕೆಗೆ 2,000ಕ್ಕೂ ಹೆಚ್ಚು ಸಸಿಗಳನ್ನು ಹಸ್ತಾಂತರಿಸಲಾಯಿತು.<br /><br /> ಶಿಲ್ಪಾ ಮೆಡಿಕೇರ್ ಚೇರಮನ್ ವಿಷ್ಣುಕಾಂತ ಬೂತಡಾ ಅವರು ಮಹಾನಗರ ಪಾಲಿಕೆ ಕಚೇರಿ ಮುಂಭಾಗದಲ್ಲಿ ಆಯುಕ್ತ ಜುಬಿನ್ ಮೊಹಾಪಾತ್ರ ಅವರಿಗೆ ಸಾಂಕೇತಿಕವಾಗಿ ಸಸಿ ನೀಡುವ ಮೂಲಕ ಸಸಿಗಳನ್ನು ಹಸ್ತಾಂತರಿಸಿದರು. <br /><br /> ಆಯುಕ್ತ ಜುಬಿನ್ ಮೊಹಾಪಾತ್ರಾ ಮಾತನಾಡಿ, ‘ಮಹಾನಗರ ಪಾಲಿಕೆ ವತಿಯಿಂದ ನಗರವನ್ನು ಸ್ವಚ್ಛಗೊಳಿಸುವುದರ ಜೊತೆಗೆ ಹಸಿರು ಕ್ರಾಂತಿ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಶಿಲ್ಪಾ ಮೆಡಿಕೇರ್ ಕಂಪನಿ ಹಾಗೂ ಗ್ರೀನ್ ರಾಯಚೂರು ಸಂಸ್ಥೆ ಸಹ ಜೊತೆಯಾಗಿದ್ದು ಖುಷಿ ತಂದಿದೆ’ ಎಂದರು.</p>.<p>‘ಬರುವ ದಿನಗಳಲ್ಲಿ ರಾಯಚೂರಿನಲ್ಲಿ ಶೇ 33ರಷ್ಟು ಹಸಿರು ಹೊದಿಕೆ ಕಾಣುವಂತಾಗಲು ಶ್ರಮಿಸಲಿ. ಸಾರ್ವಜನಿಕರು ಸಹ ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು.<br /><br /> ಶಿಲ್ಪಾ ಮೆಡಿಕೇರ್ ಚೇರಮನ್ ವಿಷ್ಣುಕಾಂತ ಬೂತಡಾ ಮಾತನಾಡಿ, ‘ನಮ್ಮ ಸಂಸ್ಥೆ ಹಾಗೂ ಗ್ರೀನ್ ರಾಯಚೂರು ಸಂಸ್ಥೆ 2017ರಿಂದ ನಗರದಲ್ಲಿ ಸಸಿಗಳನ್ನು ನೆಟ್ಟು ಅವುಗಳನ್ನು ಪೋಷಿಸುವ ಕಾರ್ಯ ಮಾಡುತ್ತಿದೆ. ಈ ಬಾರಿ 2,000 ಸಸಿಗಳನ್ನು ಮಹಾನಗರ ಪಾಲಿಕೆಗೆ ನೀಡಲಾಗಿದೆ’ ಎಂದು ತಿಳಿಸಿದರು.<br /><br /> ಮಹಾನಗರ ಪಾಲಿಕೆಯ ಅಧಿಕಾರಿ ಮೇನಕಾ ಪಾಟೀಲ, ಕಾಂಗ್ರೆಸ್ ಮುಖಂಡರಾದ ಎಂ.ಈರಣ್ಣ , ಗ್ರೀನ್ ರಾಯಚೂರು ಸಂಸ್ಥೆಯ ಅಧ್ಯಕ್ಷೆ ಸರಸ್ವತಿ ಕಿಲಕಲೆ, ಉಪಾಧ್ಯಕ್ಷ ಡಾ.ಸಿ.ಪಿ.ಪಾಟೀಲ, ರಮೇಶಚಂದ್ರ ಜೈನ್, ಕಾರ್ಯದರ್ಶಿ ರಾಜೇಂದ್ರಕುಮಾರ್ ಶಿವಾಳೆ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>