<p>ಲಿಂಗಸುಗೂರು: ಬಸ್ ನಿಲ್ದಾಣಕ್ಕೆ ಹೊಂದಿ ಕೊಂಡ ಬೀದಿಬದಿ ವ್ಯಾಪಾರಿ ಗಳಿಂದ ತೊಂದರೆ ಆಗುತ್ತಿದೆ ಎಂದು ಸುಳ್ಳು ದೂರು ನೀಡಿ ಕಿರುಕುಳ ನೀಡುವುದನ್ನು ತಡೆಯುವಂತೆ ಕರ್ನಾಟಕ ರಾಜ್ಯ ಬೀದಿಬದಿ ವ್ಯಾಪಾರಿ ಗಳ ಮಹಾಮಂಡಲದ ತಾಲ್ಲೂಕು ಘಟಕ ಪದಾಧಿಕಾರಿಗಳು ಕೋರಿದರು.</p>.<p>ಬುಧವಾರ ಪುರಸಭೆ ಉಪಾಧ್ಯಕ್ಷ ಎಂ.ಡಿ ರಫಿ ಅವರಿಗೆ ಮನವಿ ಸಲ್ಲಿಸಿದರು.</p>.<p>ಈಚೆಗೆ ಬಸ್ ನಿಲ್ದಾಣದ ಅಂಗಡಿ ಮಾಲೀಕರು ಬೀದಿಬದಿ ವ್ಯಾಪಾರಿಗಳ ವಿರುದ್ಧ ದೂರು ಸಲ್ಲಿಸುತ್ತಿದ್ದಾರೆ. ಮಳಿಗೆಗಳ ಮುಂಭಾಗದ ತಡೆಗೋಡೆ ಹೊರಭಾಗದಲ್ಲಿ ರಸ್ತೆಯ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದೇವೆ. ಇದಕ್ಕೆ ಮಳಿಗೆಗಳ ಮಾಲೀಕರು ತಡೆಯೊಡ್ಡುತ್ತಿದ್ದಾರೆ ಎಂದು ಮನವಿಯಲ್ಲಿ ದೂರಿದರು.</p>.<p>ಬೀದಿಬದಿ ವ್ಯಾಪಾರದ ಗುರುತಿನ ಚೀಟಿ ಹೊಂದಿದ್ದೇವೆ. ಪುರಸಭೆಯು ಪ್ರಧಾನ ಮಂತ್ರಿ ರೋಜಗಾರ್ ಯೋಜನೆಯಡಿ ಸ್ವಯಂ ಉದ್ಯೋಗದಡಿ ಸಾಲ ಪಡೆದು ತಳ್ಳುವ ಗಾಡಿಯಲ್ಲಿ ವ್ಯಾಪಾರ ಮಾಡಿ, ಜೀವನ ಸಾಗಿಸುತ್ತಿದ್ದೇವೆ ಎಂದರು.</p>.<p>ರಸ್ತೆ ಬದಿಯ ತಡೆಗೋಡೆಯ ಹೊರಭಾಗದಲ್ಲಿ ಯಾರಿಗೂ ತೊಂದರೆ ಕೊಡದೆ ವ್ಯಾಪಾರ ಮಾಡುತ್ತಿದ್ದೇವೆ. ಸತ್ಯ ಅರಿತು, ಸುಳ್ಳು ದೂರುಗಳನ್ನು ಪರಿಗಣನೆಗೆ ತೆಗೆದುಕೊಳ್ಳಬಾರದು. ಇಲ್ಲದೆ ಹೋದಲ್ಲಿ ವ್ಯಾಪಾರಿಗಳ ಸಹಯೋಗದಲ್ಲಿ ಬೀದಿಗಿ ಳಿದು ಹೋರಾಟ ಮಾಡುತ್ತೇವೆ ಎಂದರು.</p>.<p>ತಾಲ್ಲೂಕು ಅಧ್ಯಕ್ಷ ಮಹಿಬೂಬ್ ಪಾಶಾ, ಉಪಾಧ್ಯಕ್ಷ ಜಗನ್ನಾಥ ಜಾಧವ್, ಕಾರ್ಯದರ್ಶಿ ಹುಸೇನ್ಸಾಬ್ ಗಾದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಲಿಂಗಸುಗೂರು: ಬಸ್ ನಿಲ್ದಾಣಕ್ಕೆ ಹೊಂದಿ ಕೊಂಡ ಬೀದಿಬದಿ ವ್ಯಾಪಾರಿ ಗಳಿಂದ ತೊಂದರೆ ಆಗುತ್ತಿದೆ ಎಂದು ಸುಳ್ಳು ದೂರು ನೀಡಿ ಕಿರುಕುಳ ನೀಡುವುದನ್ನು ತಡೆಯುವಂತೆ ಕರ್ನಾಟಕ ರಾಜ್ಯ ಬೀದಿಬದಿ ವ್ಯಾಪಾರಿ ಗಳ ಮಹಾಮಂಡಲದ ತಾಲ್ಲೂಕು ಘಟಕ ಪದಾಧಿಕಾರಿಗಳು ಕೋರಿದರು.</p>.<p>ಬುಧವಾರ ಪುರಸಭೆ ಉಪಾಧ್ಯಕ್ಷ ಎಂ.ಡಿ ರಫಿ ಅವರಿಗೆ ಮನವಿ ಸಲ್ಲಿಸಿದರು.</p>.<p>ಈಚೆಗೆ ಬಸ್ ನಿಲ್ದಾಣದ ಅಂಗಡಿ ಮಾಲೀಕರು ಬೀದಿಬದಿ ವ್ಯಾಪಾರಿಗಳ ವಿರುದ್ಧ ದೂರು ಸಲ್ಲಿಸುತ್ತಿದ್ದಾರೆ. ಮಳಿಗೆಗಳ ಮುಂಭಾಗದ ತಡೆಗೋಡೆ ಹೊರಭಾಗದಲ್ಲಿ ರಸ್ತೆಯ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದೇವೆ. ಇದಕ್ಕೆ ಮಳಿಗೆಗಳ ಮಾಲೀಕರು ತಡೆಯೊಡ್ಡುತ್ತಿದ್ದಾರೆ ಎಂದು ಮನವಿಯಲ್ಲಿ ದೂರಿದರು.</p>.<p>ಬೀದಿಬದಿ ವ್ಯಾಪಾರದ ಗುರುತಿನ ಚೀಟಿ ಹೊಂದಿದ್ದೇವೆ. ಪುರಸಭೆಯು ಪ್ರಧಾನ ಮಂತ್ರಿ ರೋಜಗಾರ್ ಯೋಜನೆಯಡಿ ಸ್ವಯಂ ಉದ್ಯೋಗದಡಿ ಸಾಲ ಪಡೆದು ತಳ್ಳುವ ಗಾಡಿಯಲ್ಲಿ ವ್ಯಾಪಾರ ಮಾಡಿ, ಜೀವನ ಸಾಗಿಸುತ್ತಿದ್ದೇವೆ ಎಂದರು.</p>.<p>ರಸ್ತೆ ಬದಿಯ ತಡೆಗೋಡೆಯ ಹೊರಭಾಗದಲ್ಲಿ ಯಾರಿಗೂ ತೊಂದರೆ ಕೊಡದೆ ವ್ಯಾಪಾರ ಮಾಡುತ್ತಿದ್ದೇವೆ. ಸತ್ಯ ಅರಿತು, ಸುಳ್ಳು ದೂರುಗಳನ್ನು ಪರಿಗಣನೆಗೆ ತೆಗೆದುಕೊಳ್ಳಬಾರದು. ಇಲ್ಲದೆ ಹೋದಲ್ಲಿ ವ್ಯಾಪಾರಿಗಳ ಸಹಯೋಗದಲ್ಲಿ ಬೀದಿಗಿ ಳಿದು ಹೋರಾಟ ಮಾಡುತ್ತೇವೆ ಎಂದರು.</p>.<p>ತಾಲ್ಲೂಕು ಅಧ್ಯಕ್ಷ ಮಹಿಬೂಬ್ ಪಾಶಾ, ಉಪಾಧ್ಯಕ್ಷ ಜಗನ್ನಾಥ ಜಾಧವ್, ಕಾರ್ಯದರ್ಶಿ ಹುಸೇನ್ಸಾಬ್ ಗಾದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>