<p><strong>ಸಿರವಾರ:</strong> ತಾಲ್ಲೂಕಿನ ಹರವಿ ಗ್ರಾಮದಲ್ಲಿ ಗುರುವಾರ ರಾತ್ರಿ ಕಿಡಿಗೇಡಿಗಳು ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಯ ಕನ್ನಡಕ ಮುರಿದು ಅಪಮಾನ ಮಾಡಿದ್ದಾರೆ.</p>.<p>ಗ್ರಾಮಸ್ಥರು ಶುಕ್ರವಾರ ಬೆಳಿಗ್ಗೆ ಇದನ್ನು ನೋಡಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ನಂತರ ಸ್ಥಳಕ್ಕೆ ತಹಶೀಲ್ದಾರ್ ರವಿ ಎಸ್.ಅಂಗಡಿ ಮತ್ತು ಸಿಪಿಐ ಎಂ.ಶಶಿಕಾಂತ ಭೇಟಿ ನೀಡಿ ಮಾಹಿತಿ ಪಡೆದರು.</p>.<p>ಘಟನೆ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಹಾಗೂ ಪ್ರಗತಿ ಪರ ಹೋರಾಟಗಾರರು ಮಾನ್ವಿ–ಸಿರವಾರ ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.</p>.<p>ಕೂಡಲೇ ಕಿಡಿಗೇಡಿಗಳನ್ನು ಪತ್ತೆ ಮಾಡಿ ಕಠಿಣ ಕ್ರಮಕೈಗೊಳ್ಳುವುದಾಗಿ ತಹಶೀಲ್ದಾರ್ ಮತ್ತು ಸಿಪಿಐ ಭರವಸೆ ನೀಡಿದ ಬಳಿಕ ಪ್ರತಿಭಟನೆ ಕೈಬಿಟ್ಟರು.</p>.<p>ಮುಖಂಡರಾದ ಪ್ರಭುರಾಜ ಕೊಡ್ಲಿ, ತಿಪ್ಪಣ್ಣ ಬಾಗಲವಾಡ, ದತ್ತಣ್ಣ, ರವಿಕುಮಾರ, ಯಲ್ಲಪ್ಪ ಬಾದರದಿನ್ನಿ, ಜಾನೇಕಲ್ ಶಿವರಾಜ, ಬಸ್ಸಪ್ಪ ಹರವಿ, ಶಶಿಧರಗೌಡ ಹರವಿ, ಪೋಮಣ್ಣ, ಮೌನೇಶ, ಅಬ್ರಾಹಂ ಹೊನ್ನಟಗಿ, ಭೀಮಣ್ಣ ನಾಯಕ, ವೀರೇಶ, ಜಿ.ಶಿವಪ್ಪ ಹರವಿ ಹಾಗೂ ಎನ್.ಬಸವರಾಜ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರವಾರ:</strong> ತಾಲ್ಲೂಕಿನ ಹರವಿ ಗ್ರಾಮದಲ್ಲಿ ಗುರುವಾರ ರಾತ್ರಿ ಕಿಡಿಗೇಡಿಗಳು ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಯ ಕನ್ನಡಕ ಮುರಿದು ಅಪಮಾನ ಮಾಡಿದ್ದಾರೆ.</p>.<p>ಗ್ರಾಮಸ್ಥರು ಶುಕ್ರವಾರ ಬೆಳಿಗ್ಗೆ ಇದನ್ನು ನೋಡಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ನಂತರ ಸ್ಥಳಕ್ಕೆ ತಹಶೀಲ್ದಾರ್ ರವಿ ಎಸ್.ಅಂಗಡಿ ಮತ್ತು ಸಿಪಿಐ ಎಂ.ಶಶಿಕಾಂತ ಭೇಟಿ ನೀಡಿ ಮಾಹಿತಿ ಪಡೆದರು.</p>.<p>ಘಟನೆ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಹಾಗೂ ಪ್ರಗತಿ ಪರ ಹೋರಾಟಗಾರರು ಮಾನ್ವಿ–ಸಿರವಾರ ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.</p>.<p>ಕೂಡಲೇ ಕಿಡಿಗೇಡಿಗಳನ್ನು ಪತ್ತೆ ಮಾಡಿ ಕಠಿಣ ಕ್ರಮಕೈಗೊಳ್ಳುವುದಾಗಿ ತಹಶೀಲ್ದಾರ್ ಮತ್ತು ಸಿಪಿಐ ಭರವಸೆ ನೀಡಿದ ಬಳಿಕ ಪ್ರತಿಭಟನೆ ಕೈಬಿಟ್ಟರು.</p>.<p>ಮುಖಂಡರಾದ ಪ್ರಭುರಾಜ ಕೊಡ್ಲಿ, ತಿಪ್ಪಣ್ಣ ಬಾಗಲವಾಡ, ದತ್ತಣ್ಣ, ರವಿಕುಮಾರ, ಯಲ್ಲಪ್ಪ ಬಾದರದಿನ್ನಿ, ಜಾನೇಕಲ್ ಶಿವರಾಜ, ಬಸ್ಸಪ್ಪ ಹರವಿ, ಶಶಿಧರಗೌಡ ಹರವಿ, ಪೋಮಣ್ಣ, ಮೌನೇಶ, ಅಬ್ರಾಹಂ ಹೊನ್ನಟಗಿ, ಭೀಮಣ್ಣ ನಾಯಕ, ವೀರೇಶ, ಜಿ.ಶಿವಪ್ಪ ಹರವಿ ಹಾಗೂ ಎನ್.ಬಸವರಾಜ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>