<p><strong>ಹಟ್ಟಿ ಚಿನ್ನದ ಗಣಿ:</strong> ಹಟ್ಟಿ ಪಟ್ಟಣದ ಬೈಪಾಸ್ ರಸ್ತೆಯಲ್ಲಿನ ಗುಂಡಿಗಳನ್ನು ಪಟ್ಟಣ ಪಂಚಾಯಿತಿ ಅಧಿಕಾರಿಗಳು ಮುಚ್ಚಿಸಿದ್ದು, ರಸ್ತೆಗೆ ಡಾಂಬರ್ ಹಾಕಿಸಿದ್ದಾರೆ.</p>.<p>ಬೈಪಾಸ್ ರಸ್ತೆಯಲ್ಲಿ ಗುಂಡಿಗಳು ನಿರ್ಮಾಣವಾಗಿ ವಾಹನ ಸವಾರರಿಗೆ ತೊಂದರೆ ಉಂಟಾಗಿತ್ತು. ಸಮಸ್ಯೆ ಕುರಿತು ‘ಪ್ರಜಾವಾಣಿ’ಯ ಏಪ್ರಿಲ್ 20ರ ಸಂಚಿಕೆಯಲ್ಲಿ ‘ಮಳೆ ಬಂದು ರಸ್ತೆ ಹಾಳು: ಸಂಚಾರಕ್ಕೆ ತೊಂದರೆ’ ಶೀರ್ಷಿಕೆ ಅಡಿಯಲ್ಲಿ ವಿಶೇಷ ವರದಿ ಪ್ರಕಟಿಸಲಾಗಿತ್ತು.</p>.<p>ವರದಿಗೆ ಸ್ಪಂದಿಸಿದ ಪಟ್ಟಣ ಪಂಚಾಯಿತಿ ಆಡಳಿತ, ₹7 ಲಕ್ಷ ವೆಚ್ಚದಲ್ಲಿ ಡಾಂಬರ್ ರಸ್ತೆ ನಿರ್ಮಿಸಿದೆ.</p>.<p>‘ಹಟ್ಟಿ ಪಟ್ಟಣದ ಬೈಪಾಸ್ ರಸ್ತೆ ಸಮಸ್ಯೆ ಕುರಿತು ಜನರಿಂದ ದೂರುಗಳು ಬಂದಿದ್ದವು. ಸುಗಮ ಸಂಚಾರಕ್ಕೆ ಅನುಕೂಲವಾಗಲು ರಸ್ತೆಗೆ ಡಾಂಬರ್ ಹಾಕಿ ಸಮಸ್ಯೆ ಬಗೆಹರಿಸಲಾಗಿದೆ’ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಜಗನ್ನಾಥ ತಿಳಿಸಿದರು.</p>.<p>‘ಸಮಸ್ಯೆ ಕುರಿತು ಹಲವು ಸಲ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರೂ ನಿರ್ಲಕ್ಷ್ಯ ವಹಿಸಿದ್ದರು. ‘ಪ್ರಜಾವಾಣಿ’ ಪತ್ರಿಕೆಯಲ್ಲಿ ವರದಿ ಬಂದ ಬಳಿಕ ಎಚ್ಚೆತ್ತುಕೊಂಡು ರಸ್ತೆ ನಿರ್ಮಿಸಿ ಜನರಿಗೆ ಅನುಕೂಲ ಮಾಡಿದ್ದಾರೆ’ ಎಂದು ಕರವೇ ಅಧ್ಯಕ್ಷ ಮೌನೇಶ ಕಾಕಾನಗರ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಟ್ಟಿ ಚಿನ್ನದ ಗಣಿ:</strong> ಹಟ್ಟಿ ಪಟ್ಟಣದ ಬೈಪಾಸ್ ರಸ್ತೆಯಲ್ಲಿನ ಗುಂಡಿಗಳನ್ನು ಪಟ್ಟಣ ಪಂಚಾಯಿತಿ ಅಧಿಕಾರಿಗಳು ಮುಚ್ಚಿಸಿದ್ದು, ರಸ್ತೆಗೆ ಡಾಂಬರ್ ಹಾಕಿಸಿದ್ದಾರೆ.</p>.<p>ಬೈಪಾಸ್ ರಸ್ತೆಯಲ್ಲಿ ಗುಂಡಿಗಳು ನಿರ್ಮಾಣವಾಗಿ ವಾಹನ ಸವಾರರಿಗೆ ತೊಂದರೆ ಉಂಟಾಗಿತ್ತು. ಸಮಸ್ಯೆ ಕುರಿತು ‘ಪ್ರಜಾವಾಣಿ’ಯ ಏಪ್ರಿಲ್ 20ರ ಸಂಚಿಕೆಯಲ್ಲಿ ‘ಮಳೆ ಬಂದು ರಸ್ತೆ ಹಾಳು: ಸಂಚಾರಕ್ಕೆ ತೊಂದರೆ’ ಶೀರ್ಷಿಕೆ ಅಡಿಯಲ್ಲಿ ವಿಶೇಷ ವರದಿ ಪ್ರಕಟಿಸಲಾಗಿತ್ತು.</p>.<p>ವರದಿಗೆ ಸ್ಪಂದಿಸಿದ ಪಟ್ಟಣ ಪಂಚಾಯಿತಿ ಆಡಳಿತ, ₹7 ಲಕ್ಷ ವೆಚ್ಚದಲ್ಲಿ ಡಾಂಬರ್ ರಸ್ತೆ ನಿರ್ಮಿಸಿದೆ.</p>.<p>‘ಹಟ್ಟಿ ಪಟ್ಟಣದ ಬೈಪಾಸ್ ರಸ್ತೆ ಸಮಸ್ಯೆ ಕುರಿತು ಜನರಿಂದ ದೂರುಗಳು ಬಂದಿದ್ದವು. ಸುಗಮ ಸಂಚಾರಕ್ಕೆ ಅನುಕೂಲವಾಗಲು ರಸ್ತೆಗೆ ಡಾಂಬರ್ ಹಾಕಿ ಸಮಸ್ಯೆ ಬಗೆಹರಿಸಲಾಗಿದೆ’ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಜಗನ್ನಾಥ ತಿಳಿಸಿದರು.</p>.<p>‘ಸಮಸ್ಯೆ ಕುರಿತು ಹಲವು ಸಲ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರೂ ನಿರ್ಲಕ್ಷ್ಯ ವಹಿಸಿದ್ದರು. ‘ಪ್ರಜಾವಾಣಿ’ ಪತ್ರಿಕೆಯಲ್ಲಿ ವರದಿ ಬಂದ ಬಳಿಕ ಎಚ್ಚೆತ್ತುಕೊಂಡು ರಸ್ತೆ ನಿರ್ಮಿಸಿ ಜನರಿಗೆ ಅನುಕೂಲ ಮಾಡಿದ್ದಾರೆ’ ಎಂದು ಕರವೇ ಅಧ್ಯಕ್ಷ ಮೌನೇಶ ಕಾಕಾನಗರ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>