<p><strong>ಹಟ್ಟಿ ಚಿನ್ನದಗಣಿ:</strong> ದೇಶದ ಏಕೈಕ ಚಿನ್ನದ ಗಣಿ ಇರುವ ಹಟ್ಟಿ ಪಟ್ಟಣದಲ್ಲಿ ರಾತ್ರಿ ಸಮಯದಲ್ಲಿ ಸಾರ್ವಜನಿಕರು, ಕಾರ್ಮಿಕರು ಕತ್ತಲಲ್ಲಿ ತಿರುಗಾಡಬೇಕಾದ ಪರಿಸ್ದಿತಿ ಇದೆ.</p>.<p>ಹಟ್ಟಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ವಿದ್ಯುತ್ ಕಂಬಗಳನ್ನು ಅಳವಡಿಸಿ, ದೀಪಗಳನ್ನು ಹಾಕಿದರೂ ನಿರ್ವಹಣೆ ಮಾಡದೇ ಕತ್ತಲು ಆವರಿಸಿದೆ.</p>.<p>ಎಸ್ಎಫ್ಸಿ ಯೋಜನೆ ಅಡಿಯಲ್ಲಿ ₹50ಲಕ್ಷದ ವೆಚ್ಚದಲ್ಲಿ 2020 ರಲ್ಲಿ ಟೆಂಡರ್ ಕರೆದು ವಿದ್ಯುತ್ ಕಂಬಗಳನ್ನು ಹಾಕಲಾಗಿದೆ. ಅಂದಿನಿಂದ ಇಂದಿನವರೆಗೂ ಬೀದಿ ದೀಪಗಳು ಉರಿಯಿತ್ತಿಲ್ಲ ಇದರಿಂದ ಜನರು ಸಮಸ್ಯೆ ಎದುರಿಸುತ್ತಿದ್ದಾರೆ.</p>.<p>ಈ ವಿದ್ಯುತ್ ಕಂಬಗಳನ್ನು ಗಣಿ ಕಂಪನಿ ಆಡಳಿತ ನಿರ್ವಹಣೆ ಮಾಡಬೇಕು. ಆದರೆ ಇದರ ನಿರ್ವಹಣೆಯನ್ನೇ ಕಂಪೆನಿ ಮರೆತು ಬಿಟ್ಟಿದೆ. ಕ್ಯಾಂಪ್ ಪ್ರದೇಶದಲ್ಲಿ ಹಾದು ಹೋಗುವ ಮುಖ್ಯರಸ್ತೆ, ಲಿಂಗವಧೂತ ದೇವಸ್ಧಾನ ಮುಖ್ಯರಸ್ತೆ ಪಕ್ಕದಲ್ಲಿ ಹಾಕಿದ ಕಂಬಗಳಲ್ಲಿ ದೀಪಗಳೇ ಇಲ್ಲವಾಗಿದೆ.</p>.<p>ಈ ಸಮಸ್ಯೆ ಬಗ್ಗೆ ಅಧಿಚೂಚಿತ ಪ್ರದೇಶ ಸಮಿತಿ, ಮುಖ್ಯಾಧಿಕಾರಿ ಗಮನಕ್ಕೆ ತರಲಾಗಿದ್ದು ಯಾವುದೆ ಕ್ರಮ ಕೈಗೊಂಡಿಲ್ಲ. ಅಧಿಸೂಚಿತ ಪ್ರದೇಶ ಸಮಿತಿ ಅಧಿಕಾರಿಗಳನ್ನು ವಿಚಾರಿಸಿದರೆ, ವಿದ್ಯುತ್ ಕಂಬಗಳ ನಿರ್ವಹಣೆಯನ್ನು ಗಣಿ ಕಂಪನಿ ಆಡಳಿತವೇ ಮಾಡಬೇಕು ಎನ್ನುವ ಹಾರಿಕೆ ಉತ್ತರ ನೀಡುತ್ತಾರೆ.</p>.<p>ಸಂಬಂಧಪಟ್ಟ ಅಧಿಕಾರಿಗಳು ಇತ್ತ ಕಡೆ ಗಮನಹರಿಸಿ ಬೀದಿ ದೀಪವನ್ನು ದುರಸ್ತಿ ಮಾಡಿ ಜನರಿಗೆ ಅನುಕೂಲ ಮಾಡಿಕೊಡಬೇಕು. ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ಅನುಸರಿಸಿದರೆ ಹೋರಾಟ ನಡೆಸಬೇಕಾಗುತ್ತದೆ ಎಂದು ಕಾರ್ಮಿಕರು ಎಚ್ಚರಿಕೆ ನೀಡಿದ್ದಾರೆ.</p>.<div><blockquote>ಅಧಿಕಾರಿಗಳು ಒಬ್ಬರ ಮೇಲೆ ಒಬ್ಬರು ಕೆಸರೆರಚಾಟ ಮಾಡುತ್ತಿದ್ದಾರೆ. ಬೀದಿ ದೀಪಗಳ ದುರಸ್ತಿ ಮಾಡದಿದ್ದರೆ ಉಗ್ರ ಹೋರಾಟ ಅನಿವಾರ್ಯ</blockquote><span class="attribution">ವೀನೋದ ಕುಮಾರ ಹಿಂದೂ ದಲಿತ ಹೋರಾಟ ಸಮಿತಿ ಹಟ್ಟಿ ಘಟಕದ ಅಧ್ಯಕ್ಷ</span></div>.<div><blockquote>ಬೀದಿ ದೀಪಗಳ ದುರಸ್ತಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಸೂಕ್ತ ಕ್ರಮ ಕೈಗೊಂಡು ಜನರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು</blockquote><span class="attribution">ಯಮನೂರಪ್ಪ ಹಿರಿಯ ವ್ಯವಸ್ಧಾಪಕ ಹಟ್ಟಿ ಚಿನ್ನದ ಗಣಿಕಂಪನಿ</span></div>.<div><blockquote>ಬೀದಿ ದೀಪಗಳ ನಿರ್ವಹಣೆಯನ್ನು ಗಣಿ ಕಂಪನಿ ಆಡಳಿತ ಮಾಡಬೇಕಿದೆ. ದುರಸ್ತಿ ಮಾಡಿ ಎಂದು ಗಣಿ ಕಂಪನಿ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ</blockquote><span class="attribution">ಜಗನಾಥ ಅಧಿಸೂಚಿತ ಪ್ರದೇಶ ಸಮಿತಿ ಮುಖ್ಯಾಧಿಕಾರಿ ಹಟ್ಟಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಟ್ಟಿ ಚಿನ್ನದಗಣಿ:</strong> ದೇಶದ ಏಕೈಕ ಚಿನ್ನದ ಗಣಿ ಇರುವ ಹಟ್ಟಿ ಪಟ್ಟಣದಲ್ಲಿ ರಾತ್ರಿ ಸಮಯದಲ್ಲಿ ಸಾರ್ವಜನಿಕರು, ಕಾರ್ಮಿಕರು ಕತ್ತಲಲ್ಲಿ ತಿರುಗಾಡಬೇಕಾದ ಪರಿಸ್ದಿತಿ ಇದೆ.</p>.<p>ಹಟ್ಟಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ವಿದ್ಯುತ್ ಕಂಬಗಳನ್ನು ಅಳವಡಿಸಿ, ದೀಪಗಳನ್ನು ಹಾಕಿದರೂ ನಿರ್ವಹಣೆ ಮಾಡದೇ ಕತ್ತಲು ಆವರಿಸಿದೆ.</p>.<p>ಎಸ್ಎಫ್ಸಿ ಯೋಜನೆ ಅಡಿಯಲ್ಲಿ ₹50ಲಕ್ಷದ ವೆಚ್ಚದಲ್ಲಿ 2020 ರಲ್ಲಿ ಟೆಂಡರ್ ಕರೆದು ವಿದ್ಯುತ್ ಕಂಬಗಳನ್ನು ಹಾಕಲಾಗಿದೆ. ಅಂದಿನಿಂದ ಇಂದಿನವರೆಗೂ ಬೀದಿ ದೀಪಗಳು ಉರಿಯಿತ್ತಿಲ್ಲ ಇದರಿಂದ ಜನರು ಸಮಸ್ಯೆ ಎದುರಿಸುತ್ತಿದ್ದಾರೆ.</p>.<p>ಈ ವಿದ್ಯುತ್ ಕಂಬಗಳನ್ನು ಗಣಿ ಕಂಪನಿ ಆಡಳಿತ ನಿರ್ವಹಣೆ ಮಾಡಬೇಕು. ಆದರೆ ಇದರ ನಿರ್ವಹಣೆಯನ್ನೇ ಕಂಪೆನಿ ಮರೆತು ಬಿಟ್ಟಿದೆ. ಕ್ಯಾಂಪ್ ಪ್ರದೇಶದಲ್ಲಿ ಹಾದು ಹೋಗುವ ಮುಖ್ಯರಸ್ತೆ, ಲಿಂಗವಧೂತ ದೇವಸ್ಧಾನ ಮುಖ್ಯರಸ್ತೆ ಪಕ್ಕದಲ್ಲಿ ಹಾಕಿದ ಕಂಬಗಳಲ್ಲಿ ದೀಪಗಳೇ ಇಲ್ಲವಾಗಿದೆ.</p>.<p>ಈ ಸಮಸ್ಯೆ ಬಗ್ಗೆ ಅಧಿಚೂಚಿತ ಪ್ರದೇಶ ಸಮಿತಿ, ಮುಖ್ಯಾಧಿಕಾರಿ ಗಮನಕ್ಕೆ ತರಲಾಗಿದ್ದು ಯಾವುದೆ ಕ್ರಮ ಕೈಗೊಂಡಿಲ್ಲ. ಅಧಿಸೂಚಿತ ಪ್ರದೇಶ ಸಮಿತಿ ಅಧಿಕಾರಿಗಳನ್ನು ವಿಚಾರಿಸಿದರೆ, ವಿದ್ಯುತ್ ಕಂಬಗಳ ನಿರ್ವಹಣೆಯನ್ನು ಗಣಿ ಕಂಪನಿ ಆಡಳಿತವೇ ಮಾಡಬೇಕು ಎನ್ನುವ ಹಾರಿಕೆ ಉತ್ತರ ನೀಡುತ್ತಾರೆ.</p>.<p>ಸಂಬಂಧಪಟ್ಟ ಅಧಿಕಾರಿಗಳು ಇತ್ತ ಕಡೆ ಗಮನಹರಿಸಿ ಬೀದಿ ದೀಪವನ್ನು ದುರಸ್ತಿ ಮಾಡಿ ಜನರಿಗೆ ಅನುಕೂಲ ಮಾಡಿಕೊಡಬೇಕು. ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ಅನುಸರಿಸಿದರೆ ಹೋರಾಟ ನಡೆಸಬೇಕಾಗುತ್ತದೆ ಎಂದು ಕಾರ್ಮಿಕರು ಎಚ್ಚರಿಕೆ ನೀಡಿದ್ದಾರೆ.</p>.<div><blockquote>ಅಧಿಕಾರಿಗಳು ಒಬ್ಬರ ಮೇಲೆ ಒಬ್ಬರು ಕೆಸರೆರಚಾಟ ಮಾಡುತ್ತಿದ್ದಾರೆ. ಬೀದಿ ದೀಪಗಳ ದುರಸ್ತಿ ಮಾಡದಿದ್ದರೆ ಉಗ್ರ ಹೋರಾಟ ಅನಿವಾರ್ಯ</blockquote><span class="attribution">ವೀನೋದ ಕುಮಾರ ಹಿಂದೂ ದಲಿತ ಹೋರಾಟ ಸಮಿತಿ ಹಟ್ಟಿ ಘಟಕದ ಅಧ್ಯಕ್ಷ</span></div>.<div><blockquote>ಬೀದಿ ದೀಪಗಳ ದುರಸ್ತಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಸೂಕ್ತ ಕ್ರಮ ಕೈಗೊಂಡು ಜನರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು</blockquote><span class="attribution">ಯಮನೂರಪ್ಪ ಹಿರಿಯ ವ್ಯವಸ್ಧಾಪಕ ಹಟ್ಟಿ ಚಿನ್ನದ ಗಣಿಕಂಪನಿ</span></div>.<div><blockquote>ಬೀದಿ ದೀಪಗಳ ನಿರ್ವಹಣೆಯನ್ನು ಗಣಿ ಕಂಪನಿ ಆಡಳಿತ ಮಾಡಬೇಕಿದೆ. ದುರಸ್ತಿ ಮಾಡಿ ಎಂದು ಗಣಿ ಕಂಪನಿ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ</blockquote><span class="attribution">ಜಗನಾಥ ಅಧಿಸೂಚಿತ ಪ್ರದೇಶ ಸಮಿತಿ ಮುಖ್ಯಾಧಿಕಾರಿ ಹಟ್ಟಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>