<p><strong>ಹಟ್ಟಿ ಚಿನ್ನದ ಗಣಿ:</strong> ಒಟಿಪಿ ಮೂಲಕ ಪಡಿತರ ಪಡೆಯುತ್ತಿದ್ದ ಈಗ ಚೀಟಿದಾರ ಕುಟುಂಬ ಒಬ್ಬ ಸದಸ್ಯ ಬೆರಳಚ್ಚು ನೀಡುವುದು ಕಡ್ಡಾಯ. ಆದರೆ ವಯಸ್ಸಾದ ಕಾರಣ ಕೆಲವರಲ್ಲಿ ಬೆರಳಚ್ಚು ಸವೆದಿದ್ದರಿಂದ, ಕೈಗಳು ನಡುಗುವುದರಿಂದ ಬೆರಳಚ್ಚು ನೀಡಲು ಸಾಧ್ಯವಾಗುತ್ತಿಲ್ಲ. ಇದರಿಂದ ಅನೇಕ ಜನ ಪಡಿತರದಿಂದ ವಂಚಿತರಾಗುತ್ತಿದ್ದಾರೆ. </p>.<p>ಹಟ್ಟಿ, ಗುರುಗುಂಟಾ, ಕೋಠಾ, ಆನ್ವರಿ, ನಿಲೋಗಲ್, ಯಲಗಟ್ಟಾ, ಪೈದೊಡ್ಡಿ, ಯರಜಂತಿ, ಬಂಢೆಭಾವಿ, ಮಾಚನೂರು, ನಿಲೋಗಲ್, ವೀರಾಪೂರ, ಗೆಜ್ಜಲಗಟ್ಟಾ, ಚಿಕ್ಕಹೆಸರೂರು, ಹೀರೆ ಹೆಸರೂರು, ಚುಕನಟ್ಟಿ, ನಗನೂರು ಗ್ರಾಮದಲ್ಲಿ ವಯಸ್ಸಾದವರು, ಅನಾರೋಗ್ಯಕ್ಕೆ ಒಳಗಾದವರೇ ಪಡಿತರದಿಂದ ವಂಚಿತರಾಗುತ್ತಿದ್ದಾರೆ. </p>.<p>‘ಕುಟುಂಬದಲ್ಲಿ ಬೆರಳಚ್ಚು ನೀಡುವಷ್ಟು ಆರೋಗ್ಯವಂತರು ಇದ್ದರೆ ಪಡಿತರ ಸಿಗುತ್ತದೆ. ಉಳಿದ ಜನರ ಸಮಸ್ಯೆ ಬಗೆಹರಿಸುವವರು ಇಲ್ಲದಂತಾಗಿದೆ’ ಎನ್ನುವುದು ನೊಂದವರ ಅಳಲು.</p>.<p>ತೀರಾ ವಯಸ್ಸಾದವರು ಮತ್ತು ಪಡಿತರ ಕೇಂದ್ರಗಳಿಗೆ ತೆರಳಿ ಪಡಿತರ ಪಡೆಯಲು ಸಾಧ್ಯವಿಲ್ಲ ಎನ್ನುವ ಸ್ಥಿತಿಯಲ್ಲಿ ಇರುವವರಿಗೆ ಬೆರಳಚ್ಚು ನೀಡುವ ನಿಯಮದಿಂದ ತೀವ್ರ ಸಮಸ್ಯೆಯಾಗಿದೆ. ಅಧಿಕಾರಿಗಳು ನೆರವಿಗೆ ಬರಬೇಕು ಎನ್ನುತ್ತಾರೆ ಸಾರ್ವಜನಿಕರು.</p>.<p>‘ಬೆರಳಚ್ಚು ಬಾರದ ಕಾರಣ ಪಡಿತರ ಸಿಗುತ್ತಿಲ್ಲ. ಸಮಸ್ಯೆ ಬಗೆಹರಿಸಲು ಅಧಿಕಾರಿಗಳು, ಜನಪ್ರತಿನಿಧಿಗಳು ಮುಂದಾಗಲಿ’ ಎಂದು ತಾ.ಪಂ ಮಾಜಿ ಸದಸ್ಯ ರಾಜ ಸೇತುರಾಮ ನಾಯಕ ಆಗ್ರಹಿಸಿದ್ದಾರೆ.</p>.<p>‘ಪಡಿತರ ಸೌಲಭ್ಯದಿಂದ ವಂಚಿತರಾಗದ ರೀತಿಯಲ್ಲಿ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ತಿಳಿಸಲಾಗುವುದು’ ಎಂದು ಲಿಂಗಸುಗೂರು ಶಾಸಕ ಮಾನಪ್ಪ ವಜ್ಜಲ್ ಪ್ರಜಾವಾಣಿಗೆ ತಿಳಿಸಿದರು. </p>.<p>‘ಬೆರಳಚ್ಚು ನೀಡುವಾಗ ಆಗುವ ಸಮಸ್ಯೆಗಳ ಬಗ್ಗೆ ದೂರುಗಳು ಬಂದಿವೆ. ಸಂಬಂಧಪಟ್ಟ ಮೇಲಧಿಕರಿಗಳ ಗಮನಕ್ಕೆ ತರಲಾಗುವುವುದು’ ಆಹಾರ ಸರಬರಾಜು ಇಲಾಖೆಯ ಅಧಿಕಾರಿ ಅಬ್ದುಲ್ ರೋಪ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಟ್ಟಿ ಚಿನ್ನದ ಗಣಿ:</strong> ಒಟಿಪಿ ಮೂಲಕ ಪಡಿತರ ಪಡೆಯುತ್ತಿದ್ದ ಈಗ ಚೀಟಿದಾರ ಕುಟುಂಬ ಒಬ್ಬ ಸದಸ್ಯ ಬೆರಳಚ್ಚು ನೀಡುವುದು ಕಡ್ಡಾಯ. ಆದರೆ ವಯಸ್ಸಾದ ಕಾರಣ ಕೆಲವರಲ್ಲಿ ಬೆರಳಚ್ಚು ಸವೆದಿದ್ದರಿಂದ, ಕೈಗಳು ನಡುಗುವುದರಿಂದ ಬೆರಳಚ್ಚು ನೀಡಲು ಸಾಧ್ಯವಾಗುತ್ತಿಲ್ಲ. ಇದರಿಂದ ಅನೇಕ ಜನ ಪಡಿತರದಿಂದ ವಂಚಿತರಾಗುತ್ತಿದ್ದಾರೆ. </p>.<p>ಹಟ್ಟಿ, ಗುರುಗುಂಟಾ, ಕೋಠಾ, ಆನ್ವರಿ, ನಿಲೋಗಲ್, ಯಲಗಟ್ಟಾ, ಪೈದೊಡ್ಡಿ, ಯರಜಂತಿ, ಬಂಢೆಭಾವಿ, ಮಾಚನೂರು, ನಿಲೋಗಲ್, ವೀರಾಪೂರ, ಗೆಜ್ಜಲಗಟ್ಟಾ, ಚಿಕ್ಕಹೆಸರೂರು, ಹೀರೆ ಹೆಸರೂರು, ಚುಕನಟ್ಟಿ, ನಗನೂರು ಗ್ರಾಮದಲ್ಲಿ ವಯಸ್ಸಾದವರು, ಅನಾರೋಗ್ಯಕ್ಕೆ ಒಳಗಾದವರೇ ಪಡಿತರದಿಂದ ವಂಚಿತರಾಗುತ್ತಿದ್ದಾರೆ. </p>.<p>‘ಕುಟುಂಬದಲ್ಲಿ ಬೆರಳಚ್ಚು ನೀಡುವಷ್ಟು ಆರೋಗ್ಯವಂತರು ಇದ್ದರೆ ಪಡಿತರ ಸಿಗುತ್ತದೆ. ಉಳಿದ ಜನರ ಸಮಸ್ಯೆ ಬಗೆಹರಿಸುವವರು ಇಲ್ಲದಂತಾಗಿದೆ’ ಎನ್ನುವುದು ನೊಂದವರ ಅಳಲು.</p>.<p>ತೀರಾ ವಯಸ್ಸಾದವರು ಮತ್ತು ಪಡಿತರ ಕೇಂದ್ರಗಳಿಗೆ ತೆರಳಿ ಪಡಿತರ ಪಡೆಯಲು ಸಾಧ್ಯವಿಲ್ಲ ಎನ್ನುವ ಸ್ಥಿತಿಯಲ್ಲಿ ಇರುವವರಿಗೆ ಬೆರಳಚ್ಚು ನೀಡುವ ನಿಯಮದಿಂದ ತೀವ್ರ ಸಮಸ್ಯೆಯಾಗಿದೆ. ಅಧಿಕಾರಿಗಳು ನೆರವಿಗೆ ಬರಬೇಕು ಎನ್ನುತ್ತಾರೆ ಸಾರ್ವಜನಿಕರು.</p>.<p>‘ಬೆರಳಚ್ಚು ಬಾರದ ಕಾರಣ ಪಡಿತರ ಸಿಗುತ್ತಿಲ್ಲ. ಸಮಸ್ಯೆ ಬಗೆಹರಿಸಲು ಅಧಿಕಾರಿಗಳು, ಜನಪ್ರತಿನಿಧಿಗಳು ಮುಂದಾಗಲಿ’ ಎಂದು ತಾ.ಪಂ ಮಾಜಿ ಸದಸ್ಯ ರಾಜ ಸೇತುರಾಮ ನಾಯಕ ಆಗ್ರಹಿಸಿದ್ದಾರೆ.</p>.<p>‘ಪಡಿತರ ಸೌಲಭ್ಯದಿಂದ ವಂಚಿತರಾಗದ ರೀತಿಯಲ್ಲಿ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ತಿಳಿಸಲಾಗುವುದು’ ಎಂದು ಲಿಂಗಸುಗೂರು ಶಾಸಕ ಮಾನಪ್ಪ ವಜ್ಜಲ್ ಪ್ರಜಾವಾಣಿಗೆ ತಿಳಿಸಿದರು. </p>.<p>‘ಬೆರಳಚ್ಚು ನೀಡುವಾಗ ಆಗುವ ಸಮಸ್ಯೆಗಳ ಬಗ್ಗೆ ದೂರುಗಳು ಬಂದಿವೆ. ಸಂಬಂಧಪಟ್ಟ ಮೇಲಧಿಕರಿಗಳ ಗಮನಕ್ಕೆ ತರಲಾಗುವುವುದು’ ಆಹಾರ ಸರಬರಾಜು ಇಲಾಖೆಯ ಅಧಿಕಾರಿ ಅಬ್ದುಲ್ ರೋಪ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>