<p>ಹಟ್ಟಿ ಚಿನ್ನದ ಗಣಿ: ಗುತ್ತಿಗೆ ನೌಕರರಿಗೆ ಕನಿಷ್ಟ ಕೂಲಿ ಮೊತ್ತ ಪಾವತಿಸಬೇಕು ಎಂದು ಆಗ್ರಹಿಸಿ ಸಿಐಟಿಯು ಸಂಘಟನೆ ಮುಖಂಡರು ಹೋರಾಟ ನಡೆಸುತ್ತಿದ್ದ ಸಂದರ್ಭದಲ್ಲಿ ಹೋರಾಟಗಾರರನ್ನು ಬಂಧಿಸಲಾಗಿದೆ. ಅವರನ್ನು ಕೂಡಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಸ್ಥಳೀಯ ಸಿಐಟಿಯು ಮುಖಂಡರು ಪ್ರತಿಭಟಿಸಿದರು.</p>.<p>ಪಟ್ಟಣದ ಪೊಲೀಸ್ ಠಾಣೆ ಬಳಿಯ ಮುಖ್ಯ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ ಸಿಐಟಿಯು ಮುಖಂಡರು, ‘ಕೈಗಾರಿಕೆ, ಉದ್ಯಮಗಳಲ್ಲಿ ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ಕೂಲಿ ಕಾರ್ಮಿಕರಿಗೆ ಕನಿಷ್ಠ ಕೂಲಿ ತಿಂಗಳಿಗೆ ₹31 ಸಾವಿರ ಪಾವತಿಸಬೇಕೆಂದು ಒತ್ತಾಯಿಸಿ ಸಿಐಟಿಯು ಮುಖಂಡರು ಪ್ರತಿಭಟನೆ ನಡೆಸಿದ್ದರು. ಹೋರಾಟ ಹತ್ತಿಕ್ಕುವ ಉದ್ದೇಶದಿಂದ ಅವರನ್ನು ಬಂಧಿಸಲಾಗಿದೆ. ಬಂಧಿತ ಮುಖಂಡರನ್ನು ಕೂಡಲೇ ಬಿಡುಗಡೆಗೊಳಿಸಬೇಕು ಹಾಗೂ ಕನಿಷ್ಠ ₹31 ಸಾವಿರ ಸಂಬಳ ಗುತ್ತಿಗೆ ಕಾರ್ಮಿಕರಿಗೆ ನಿಗದಿಮಾಡಬೇಕು’ ಎಂದು ಆಗ್ರಹಿಸಿದರು</p>.<p>ಕೇಂದ್ರ ಸರ್ಕಾರ ಹೋರಾಟಗಾರರನ್ನು ಹತ್ತಿಕ್ಕುವ ಹುನ್ನಾರ ಮಾಡುತ್ತಿದೆ ಇದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.</p>.<p>ಸಿಐಟಿಯು ಮುಖಂಡರಾದ ರಮೇಶ ವೀರಾಪುರ, ವೆಂಕೋಬ್ ಮಿಯ್ಯಾಪುರ, ಮೈನುದ್ದೀನ್, ನಿಂಗಪ್ಪ ವೀರಾಪುರ, ಮಹ್ಮದ್ ಹನೀಫ್, ಚಂದ್ರು ನೇಲ್ಗಿ, ರಮೇಶ ಬಾಬು, ಫಕ್ರುದ್ದೀನ್, ಪಾಶಾ ಕ್ಯಾಂಟೀನ್, ಪೆಂಚಲಯ್ಯ, ಮಿಯ್ಯಾಸಾಬ್ ಇತರರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-32-2123590778</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಟ್ಟಿ ಚಿನ್ನದ ಗಣಿ: ಗುತ್ತಿಗೆ ನೌಕರರಿಗೆ ಕನಿಷ್ಟ ಕೂಲಿ ಮೊತ್ತ ಪಾವತಿಸಬೇಕು ಎಂದು ಆಗ್ರಹಿಸಿ ಸಿಐಟಿಯು ಸಂಘಟನೆ ಮುಖಂಡರು ಹೋರಾಟ ನಡೆಸುತ್ತಿದ್ದ ಸಂದರ್ಭದಲ್ಲಿ ಹೋರಾಟಗಾರರನ್ನು ಬಂಧಿಸಲಾಗಿದೆ. ಅವರನ್ನು ಕೂಡಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಸ್ಥಳೀಯ ಸಿಐಟಿಯು ಮುಖಂಡರು ಪ್ರತಿಭಟಿಸಿದರು.</p>.<p>ಪಟ್ಟಣದ ಪೊಲೀಸ್ ಠಾಣೆ ಬಳಿಯ ಮುಖ್ಯ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ ಸಿಐಟಿಯು ಮುಖಂಡರು, ‘ಕೈಗಾರಿಕೆ, ಉದ್ಯಮಗಳಲ್ಲಿ ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ಕೂಲಿ ಕಾರ್ಮಿಕರಿಗೆ ಕನಿಷ್ಠ ಕೂಲಿ ತಿಂಗಳಿಗೆ ₹31 ಸಾವಿರ ಪಾವತಿಸಬೇಕೆಂದು ಒತ್ತಾಯಿಸಿ ಸಿಐಟಿಯು ಮುಖಂಡರು ಪ್ರತಿಭಟನೆ ನಡೆಸಿದ್ದರು. ಹೋರಾಟ ಹತ್ತಿಕ್ಕುವ ಉದ್ದೇಶದಿಂದ ಅವರನ್ನು ಬಂಧಿಸಲಾಗಿದೆ. ಬಂಧಿತ ಮುಖಂಡರನ್ನು ಕೂಡಲೇ ಬಿಡುಗಡೆಗೊಳಿಸಬೇಕು ಹಾಗೂ ಕನಿಷ್ಠ ₹31 ಸಾವಿರ ಸಂಬಳ ಗುತ್ತಿಗೆ ಕಾರ್ಮಿಕರಿಗೆ ನಿಗದಿಮಾಡಬೇಕು’ ಎಂದು ಆಗ್ರಹಿಸಿದರು</p>.<p>ಕೇಂದ್ರ ಸರ್ಕಾರ ಹೋರಾಟಗಾರರನ್ನು ಹತ್ತಿಕ್ಕುವ ಹುನ್ನಾರ ಮಾಡುತ್ತಿದೆ ಇದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.</p>.<p>ಸಿಐಟಿಯು ಮುಖಂಡರಾದ ರಮೇಶ ವೀರಾಪುರ, ವೆಂಕೋಬ್ ಮಿಯ್ಯಾಪುರ, ಮೈನುದ್ದೀನ್, ನಿಂಗಪ್ಪ ವೀರಾಪುರ, ಮಹ್ಮದ್ ಹನೀಫ್, ಚಂದ್ರು ನೇಲ್ಗಿ, ರಮೇಶ ಬಾಬು, ಫಕ್ರುದ್ದೀನ್, ಪಾಶಾ ಕ್ಯಾಂಟೀನ್, ಪೆಂಚಲಯ್ಯ, ಮಿಯ್ಯಾಸಾಬ್ ಇತರರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-32-2123590778</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>