<p><strong>ಹಟ್ಟಿ ಚಿನ್ನದ ಗಣಿ:</strong> ಹಟ್ಟಿ ಪಟ್ಟಣದಲ್ಲಿ ಪ್ರತಿ ಭಾನುವಾರ ನಡೆಯುವ ವಾರದ ಸಂತೆ ಜಾಗ ಮೂಲ ಸೌಲಭ್ಯಗಳಿಂದ ವಂಚಿತವಾಗಿದೆ.</p>.<p>ಸಂತೆಯಲ್ಲಿ ಕುಡಿಯುವ ನೀರು, ಶೌಚಾಲಯ, ರಸ್ತೆ, ವ್ಯಾಪಾರಸ್ಥರಿಗೆ ಕುಳಿತುಕೊಳ್ಳಲು ಅಸನಗಳು ಸೇರಿದಂತೆ ಇನ್ನಿತರ ಸೌಲಭ್ಯಗಳಿಲ್ಲ. ಹಳೆಯ ಬಸ್ ನಿಲ್ದಾಣದ ಪ್ರಮುಖ ರಸ್ತೆ ಬದಿ ಅಂಗಡಿಗಳನ್ನು ಇಟ್ಟು ವ್ಯಾಪಾರ ನಡೆಸುತ್ತಿದ್ದಾರೆ. ಇದರಿಂದ ಪಾದಚಾರಿಗಳಿಗೆ, ವಾಹನ ಸವಾರರಿಗೆ ತುಂಬ ತೊಂದರೆ ಆಗುತ್ತಿದೆ ಎನ್ನುತ್ತಾರೆ ಸಾರ್ವಜನಿಕರು.</p>.<p>ಪಟ್ಟಣ ನಿಗದಿಪಡಿಸಿದ ಪಂಚಾಯಿತಿ ಜಾಗದಲ್ಲಿ ವ್ಯಾಪಾರ ಮಾಡಬೇಕು. ಆದರೆ ರಸ್ತೆಯಲ್ಲಿ ವಹಿವಾಟು ನಡೆಸುವುದರಿಂದ ಸಂತೆ ದಿನ ವ್ಯಾಪಾರಿಗಳು ಮತ್ತು ಪಾದಚಾರಿಗಳ ಮಧ್ಯೆ ಜಗಳ ನಡೆದ ಉದಾಹರಣೆ ಕೂಡ ಇದೆ.</p>.<p>ಶೌಚಾಲಯ, ಕುಡಿಯುವ ನೀರಿಗಾಗಿ ವ್ಯಾಪಾರಸ್ಥರು ಹಾಗೂ ಗ್ರಾಹಕರು ಪರದಾಡುವಂತಾಗಿದೆ ಸೌಲಭ್ಯ ಕಲ್ಪಿಸಿಕೊಡಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಇತ್ತ ಕಡೆ ಸುಳಿಯುತ್ತಿಲ್ಲ ಎನ್ನುತ್ತಾರೆ ವ್ಯಾಪಾರಿಗಳು.</p>.<p>ಚರಂಡಿ ನೀರು ಸಂತೆಯ ಮೈದಾನದಲ್ಲಿ ಹರಿಯುತ್ತಿದ್ದು ಸುತ್ತಮುತ್ತಲಿನ ಪ್ರದೇಶ ಗಬ್ಬೆದ್ದು ನಾರುತ್ತಿದೆ. ಅದರ ಮಧ್ಯದಲ್ಲಿಯೇ ವ್ಯಾಪರ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಮೈಬು, ವೆಂಕೋಬ, ವೀರೇಶ ಅಳಲು ತೋಡಿಕೊಂಡರು. ಮೂಲಸೌಕರ್ಯ ನೀಡಬೇಕಾದ ಪಟ್ಟಣ ಪಂಚಾಯಿತಿ, ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ದೂರಿದ್ದಾರೆ.</p>.<p>ಕರ ವಸೂಲಿ ಮಾತ್ರ ನಿರಂತರವಾಗಿ ಮಾಡಲಾಗುತ್ತಿದೆ. ಇದಕ್ಕೆ ಪೂರಕವಾದ ಯಾವುದೇ ಸೌಲಭ್ಯಗಳನ್ನು ಪಂಚಾಯಿತಿ ಅಧಿಕಾರಿಗಳು ನೀಡುವುದಿಲ್ಲ ಎಂದು ವ್ಯಾಪಾರಸ್ಥರಾದ ಹುಸೇನ್ ಹೇಳುತ್ತಾರೆ.</p>.<div><blockquote>ಸಂತೆ ಬಜಾರ ಹರಾಜು ಪ್ರಕ್ರಿಯೆ ನಡೆಸಲು ಕ್ರಮ ಕೈಗೊಳ್ಳಲಾಗುವುದು. ಮೂಲಸೌಕರ್ಯ ಒದಗಿಸಲು ಪ.ಪಂ ಆಡಳಿತ ಸಿದ್ಧವಿದೆ </blockquote><span class="attribution">ಜಗನಾಥ ಪ.ಪಂ ಮುಖ್ಯಾಧಿಕಾರಿ ಹಟ್ಟಿ</span></div>.<div><blockquote>ಸಂತೆ ಬಜಾರ ಹರಾಜು ಪ್ರಕ್ರಿಯೆ ನಡೆಯದಂತೆ ಗುತ್ತಿಗೆದಾರ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಕಾನೂನಿನ ಪ್ರಕಾರ ಅವದಿ ಮುಗಿದಿದ್ದರೆ ಹೊಸ ಟೆಂಡರ್ ಮೂಲಕ ಹರಾಜು ನಡೆಸಲಿ </blockquote><span class="attribution">ಶಿವಪ್ರಸಾದ ನಾಯಕ ಗ್ರಾ.ಪಂ ಮಾಜಿ ಸದಸ್ಯ</span></div>
<p><strong>ಹಟ್ಟಿ ಚಿನ್ನದ ಗಣಿ:</strong> ಹಟ್ಟಿ ಪಟ್ಟಣದಲ್ಲಿ ಪ್ರತಿ ಭಾನುವಾರ ನಡೆಯುವ ವಾರದ ಸಂತೆ ಜಾಗ ಮೂಲ ಸೌಲಭ್ಯಗಳಿಂದ ವಂಚಿತವಾಗಿದೆ.</p>.<p>ಸಂತೆಯಲ್ಲಿ ಕುಡಿಯುವ ನೀರು, ಶೌಚಾಲಯ, ರಸ್ತೆ, ವ್ಯಾಪಾರಸ್ಥರಿಗೆ ಕುಳಿತುಕೊಳ್ಳಲು ಅಸನಗಳು ಸೇರಿದಂತೆ ಇನ್ನಿತರ ಸೌಲಭ್ಯಗಳಿಲ್ಲ. ಹಳೆಯ ಬಸ್ ನಿಲ್ದಾಣದ ಪ್ರಮುಖ ರಸ್ತೆ ಬದಿ ಅಂಗಡಿಗಳನ್ನು ಇಟ್ಟು ವ್ಯಾಪಾರ ನಡೆಸುತ್ತಿದ್ದಾರೆ. ಇದರಿಂದ ಪಾದಚಾರಿಗಳಿಗೆ, ವಾಹನ ಸವಾರರಿಗೆ ತುಂಬ ತೊಂದರೆ ಆಗುತ್ತಿದೆ ಎನ್ನುತ್ತಾರೆ ಸಾರ್ವಜನಿಕರು.</p>.<p>ಪಟ್ಟಣ ನಿಗದಿಪಡಿಸಿದ ಪಂಚಾಯಿತಿ ಜಾಗದಲ್ಲಿ ವ್ಯಾಪಾರ ಮಾಡಬೇಕು. ಆದರೆ ರಸ್ತೆಯಲ್ಲಿ ವಹಿವಾಟು ನಡೆಸುವುದರಿಂದ ಸಂತೆ ದಿನ ವ್ಯಾಪಾರಿಗಳು ಮತ್ತು ಪಾದಚಾರಿಗಳ ಮಧ್ಯೆ ಜಗಳ ನಡೆದ ಉದಾಹರಣೆ ಕೂಡ ಇದೆ.</p>.<p>ಶೌಚಾಲಯ, ಕುಡಿಯುವ ನೀರಿಗಾಗಿ ವ್ಯಾಪಾರಸ್ಥರು ಹಾಗೂ ಗ್ರಾಹಕರು ಪರದಾಡುವಂತಾಗಿದೆ ಸೌಲಭ್ಯ ಕಲ್ಪಿಸಿಕೊಡಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಇತ್ತ ಕಡೆ ಸುಳಿಯುತ್ತಿಲ್ಲ ಎನ್ನುತ್ತಾರೆ ವ್ಯಾಪಾರಿಗಳು.</p>.<p>ಚರಂಡಿ ನೀರು ಸಂತೆಯ ಮೈದಾನದಲ್ಲಿ ಹರಿಯುತ್ತಿದ್ದು ಸುತ್ತಮುತ್ತಲಿನ ಪ್ರದೇಶ ಗಬ್ಬೆದ್ದು ನಾರುತ್ತಿದೆ. ಅದರ ಮಧ್ಯದಲ್ಲಿಯೇ ವ್ಯಾಪರ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಮೈಬು, ವೆಂಕೋಬ, ವೀರೇಶ ಅಳಲು ತೋಡಿಕೊಂಡರು. ಮೂಲಸೌಕರ್ಯ ನೀಡಬೇಕಾದ ಪಟ್ಟಣ ಪಂಚಾಯಿತಿ, ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ದೂರಿದ್ದಾರೆ.</p>.<p>ಕರ ವಸೂಲಿ ಮಾತ್ರ ನಿರಂತರವಾಗಿ ಮಾಡಲಾಗುತ್ತಿದೆ. ಇದಕ್ಕೆ ಪೂರಕವಾದ ಯಾವುದೇ ಸೌಲಭ್ಯಗಳನ್ನು ಪಂಚಾಯಿತಿ ಅಧಿಕಾರಿಗಳು ನೀಡುವುದಿಲ್ಲ ಎಂದು ವ್ಯಾಪಾರಸ್ಥರಾದ ಹುಸೇನ್ ಹೇಳುತ್ತಾರೆ.</p>.<div><blockquote>ಸಂತೆ ಬಜಾರ ಹರಾಜು ಪ್ರಕ್ರಿಯೆ ನಡೆಸಲು ಕ್ರಮ ಕೈಗೊಳ್ಳಲಾಗುವುದು. ಮೂಲಸೌಕರ್ಯ ಒದಗಿಸಲು ಪ.ಪಂ ಆಡಳಿತ ಸಿದ್ಧವಿದೆ </blockquote><span class="attribution">ಜಗನಾಥ ಪ.ಪಂ ಮುಖ್ಯಾಧಿಕಾರಿ ಹಟ್ಟಿ</span></div>.<div><blockquote>ಸಂತೆ ಬಜಾರ ಹರಾಜು ಪ್ರಕ್ರಿಯೆ ನಡೆಯದಂತೆ ಗುತ್ತಿಗೆದಾರ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಕಾನೂನಿನ ಪ್ರಕಾರ ಅವದಿ ಮುಗಿದಿದ್ದರೆ ಹೊಸ ಟೆಂಡರ್ ಮೂಲಕ ಹರಾಜು ನಡೆಸಲಿ </blockquote><span class="attribution">ಶಿವಪ್ರಸಾದ ನಾಯಕ ಗ್ರಾ.ಪಂ ಮಾಜಿ ಸದಸ್ಯ</span></div>