<p><strong>ಹಟ್ಟಿ ಚಿನ್ನದ ಗಣಿ:</strong> ಇಲ್ಲಿಯ ಚಿನ್ನದ ಗಣಿ ಕಂಪನಿ ಕಾರ್ಮಿಕರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.</p>.<p>ಸಿಬ್ಬಂದಿ ಹಾಗೂ ಕಾರ್ಮಿಕ ಸಂಘದ ಪದಾಧಿಕಾರಿಗಳು ಪ್ರತಿಭಟನೆ ವೇಳೆ ಆಡಳಿತ ಮಂಡಳಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಬಹುದಿನಗಳ ಬೇಡಿಕೆಯಾದ ಮೆಡಿಕಲ್ ಅನ್ಫಿಟ್ ಯೋಜನೆ, ಹೊಸ ವೇತನ ಒಪ್ಪಂದ ಜಾರಿ ಮಾಡಬೇಕು. ಆಸ್ಪತ್ರೆ ಸೌಲಭ್ಯಗಳನ್ನು ಒದಗಿಸಬೇಕು ಎಂದು ಕಾರ್ಮಿಕರು ಅವರು ಆಗ್ರಹಿಸಿದರು.</p>.<p>ಹಲವು ಕಾರ್ಮಿಕರು ಮೆಡಿಕಲ್ ಅನ್ಫಿಟ್ ಯೋಜನೆಯಿಂದ ವಂಚಿತರಾಗಿದ್ದಾರೆ. ಇದು ಇದೇ ರೀತಿ ಮುಂದುವರಿದರೆ ಕಾರ್ಮಿಕರ ಕುಟುಂಬಗಳು ಬೀದಿಗೆ ಬೀಳಬೇಕಾದ ಪರಿಸ್ಥಿತಿ ಬರುತ್ತದೆ ಎಂದು ಹೇಳಿದರು.</p>.<p>ಪ್ರತಿಭಟನೆಯನ್ನು ಹಗುರವಾಗಿ ತೆಗೆದುಕೊಂಡರೆ, ಮುಂದಾಗುವ ಅನಾಹುತಗಳಿಗೆ ಗಣಿ ಕಂಪನಿ ಆಡಳಿತವೇ ನೇರ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಆಡಳಿತ ಮಂಡಳಿ ಎಚ್ಚೆತ್ತುಕೊಂಡು ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕು. ನಿರ್ಲಕ್ಷ್ಯ ಮಾಡಿದರೆ, ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಸಿಬ್ಬಂದಿ ಹಾಗೂ ಕಾರ್ಮಿಕ ಸಂಘದ ಪದಾಧಿಕಾ ರಿಗಳು ಎಚ್ಚರಿಕೆ ನೀಡಿದರು.</p>.<p>ಸಿಬ್ಬಂದಿ ಹಾಗೂ ಕಾರ್ಮಿಕ ಸಂಘದ ಪದಾಧಿಕಾರಿಗಳು, ಎಸ್, ಎಸ್.ಟಿ ನೌಕರರ ಸಂಘದ ಪದಾಧಿಕಾರಿಗಳು ಹಾಗೂ ಕಾರ್ಮಿಕರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-32-1588337352</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಟ್ಟಿ ಚಿನ್ನದ ಗಣಿ:</strong> ಇಲ್ಲಿಯ ಚಿನ್ನದ ಗಣಿ ಕಂಪನಿ ಕಾರ್ಮಿಕರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.</p>.<p>ಸಿಬ್ಬಂದಿ ಹಾಗೂ ಕಾರ್ಮಿಕ ಸಂಘದ ಪದಾಧಿಕಾರಿಗಳು ಪ್ರತಿಭಟನೆ ವೇಳೆ ಆಡಳಿತ ಮಂಡಳಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಬಹುದಿನಗಳ ಬೇಡಿಕೆಯಾದ ಮೆಡಿಕಲ್ ಅನ್ಫಿಟ್ ಯೋಜನೆ, ಹೊಸ ವೇತನ ಒಪ್ಪಂದ ಜಾರಿ ಮಾಡಬೇಕು. ಆಸ್ಪತ್ರೆ ಸೌಲಭ್ಯಗಳನ್ನು ಒದಗಿಸಬೇಕು ಎಂದು ಕಾರ್ಮಿಕರು ಅವರು ಆಗ್ರಹಿಸಿದರು.</p>.<p>ಹಲವು ಕಾರ್ಮಿಕರು ಮೆಡಿಕಲ್ ಅನ್ಫಿಟ್ ಯೋಜನೆಯಿಂದ ವಂಚಿತರಾಗಿದ್ದಾರೆ. ಇದು ಇದೇ ರೀತಿ ಮುಂದುವರಿದರೆ ಕಾರ್ಮಿಕರ ಕುಟುಂಬಗಳು ಬೀದಿಗೆ ಬೀಳಬೇಕಾದ ಪರಿಸ್ಥಿತಿ ಬರುತ್ತದೆ ಎಂದು ಹೇಳಿದರು.</p>.<p>ಪ್ರತಿಭಟನೆಯನ್ನು ಹಗುರವಾಗಿ ತೆಗೆದುಕೊಂಡರೆ, ಮುಂದಾಗುವ ಅನಾಹುತಗಳಿಗೆ ಗಣಿ ಕಂಪನಿ ಆಡಳಿತವೇ ನೇರ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಆಡಳಿತ ಮಂಡಳಿ ಎಚ್ಚೆತ್ತುಕೊಂಡು ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕು. ನಿರ್ಲಕ್ಷ್ಯ ಮಾಡಿದರೆ, ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಸಿಬ್ಬಂದಿ ಹಾಗೂ ಕಾರ್ಮಿಕ ಸಂಘದ ಪದಾಧಿಕಾ ರಿಗಳು ಎಚ್ಚರಿಕೆ ನೀಡಿದರು.</p>.<p>ಸಿಬ್ಬಂದಿ ಹಾಗೂ ಕಾರ್ಮಿಕ ಸಂಘದ ಪದಾಧಿಕಾರಿಗಳು, ಎಸ್, ಎಸ್.ಟಿ ನೌಕರರ ಸಂಘದ ಪದಾಧಿಕಾರಿಗಳು ಹಾಗೂ ಕಾರ್ಮಿಕರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-32-1588337352</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>