<p><strong>ಹಟ್ಟಿ ಚಿನ್ನದ ಗಣಿ</strong>: ‘ಸ್ಧಳೀಯ ಹಟ್ಟಿ ಚಿನ್ನದ ಗಣಿ ಕಾರ್ಮಿಕರ ಬೇಡಿಕೆಗಳು ಈಡೇರುವವರೆಗೂ ನಮ್ಮ ಹೋರಾಟ ನಿಲ್ಲದು’ ಎಂದು ಕಾರ್ಮಿಕ ಮುಖಂಡ ಯಂಕೋಬ ಮಿಯ್ಯಾಪೂರ ಹೇಳಿದರು.</p>.<p>ಹಟ್ಟಿ ಚಿನ್ನದ ಗಣಿ ಕಂಪನಿ ಮುಖ್ಯದ್ವಾರದ ಮುಂದೆ ಸಿಬ್ಬಂದಿ ಹಾಗೂ ಕಾರ್ಮಿಕ ಹಾಗೂ ಸಿಐಟಿಯು ನೇತೃತ್ವದಲ್ಲಿ ಹಮ್ಮಿಕೊಂಡ 2ನೇ ಹಂತದ ಪ್ರತಿಭಟನೆ ವೇಳೆ ಕಾರ್ಮಿಕರನ್ನು ಉದ್ದೇಶಿಸಿ ಅವರು ಮಾತನಾಡಿದರು.</p>.<p>‘ಹೊಸ ವೇತನ ಒಪ್ಪಂದ ಮೆಡಿಕಲ್ ಅನ್ಪೀಟ್ , ಕಾರ್ಮಿಕರ ಹಳೆ ಬೋನಸ್, ಇವುಗಳನ್ನು ಕಾರ್ಮಿಕರಿಗೆ ಒದಗಿಸದೆ ಆಡಳಿತ ಮಂಡಳಿ ಕಾರ್ಮಿಕ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ’ ಎಂದು ಆರೋಪ ಮಾಡಿದರು.</p>.<p>ಕಾರ್ಮಿಕರು ಕಪ್ಪು ಪಟ್ಟಿ ಧರಿಸಿ ಹಾಗೂ ಕಪ್ಪು ಬಾವುಟಗಳನ್ನು ಹಿಡಿದು ಘೋಷಣೆ ಕೂಗಿದರು.</p>.<p>ವೇತನ ಪರಿಷ್ಕರಣೆ ಮಾತುಕತೆಗಳನ್ನು ಕೂಡಲೇ ಆರಂಭಿಸಬೇಕು. ಬಾಕಿ ಎಚ್.ಆರ್.ಎ. ಹಾಗೂ ಬೋನಸ್ ಸೇರಿದಂತೆ ವಿವಿಧ ಬಾಕಿ ಇತರೆ ಸೌಲಭ್ಯ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.</p>.<p>ಸಿಬ್ಬಂದಿ ಮತ್ತು ಕಾರ್ಮಿಕ ಸಂಘದ ಕಾರ್ಯದರ್ಶಿಗಳಾದ ವೆಂಕೋಬ್ ಗೌಸ್ ಮಿಯಾ, ರಮೇಶ ಬಾಬು, ನಾಗರಾಜ್, ಹನೀಫ್, ಸಿದ್ದಪ್ಪ ಮುಂಡರಗಿ, ಚಂದ್ರಶೇಖರ್ ನೆಲೋಗಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಬಾಬು ಸಾಗರ್, ರಮೇಶ ವೀರಾಪೂರ, ಮೌನುದ್ದೀನ್ ಇತರರು ಉಪಸ್ಧಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-32-1208011129</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಟ್ಟಿ ಚಿನ್ನದ ಗಣಿ</strong>: ‘ಸ್ಧಳೀಯ ಹಟ್ಟಿ ಚಿನ್ನದ ಗಣಿ ಕಾರ್ಮಿಕರ ಬೇಡಿಕೆಗಳು ಈಡೇರುವವರೆಗೂ ನಮ್ಮ ಹೋರಾಟ ನಿಲ್ಲದು’ ಎಂದು ಕಾರ್ಮಿಕ ಮುಖಂಡ ಯಂಕೋಬ ಮಿಯ್ಯಾಪೂರ ಹೇಳಿದರು.</p>.<p>ಹಟ್ಟಿ ಚಿನ್ನದ ಗಣಿ ಕಂಪನಿ ಮುಖ್ಯದ್ವಾರದ ಮುಂದೆ ಸಿಬ್ಬಂದಿ ಹಾಗೂ ಕಾರ್ಮಿಕ ಹಾಗೂ ಸಿಐಟಿಯು ನೇತೃತ್ವದಲ್ಲಿ ಹಮ್ಮಿಕೊಂಡ 2ನೇ ಹಂತದ ಪ್ರತಿಭಟನೆ ವೇಳೆ ಕಾರ್ಮಿಕರನ್ನು ಉದ್ದೇಶಿಸಿ ಅವರು ಮಾತನಾಡಿದರು.</p>.<p>‘ಹೊಸ ವೇತನ ಒಪ್ಪಂದ ಮೆಡಿಕಲ್ ಅನ್ಪೀಟ್ , ಕಾರ್ಮಿಕರ ಹಳೆ ಬೋನಸ್, ಇವುಗಳನ್ನು ಕಾರ್ಮಿಕರಿಗೆ ಒದಗಿಸದೆ ಆಡಳಿತ ಮಂಡಳಿ ಕಾರ್ಮಿಕ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ’ ಎಂದು ಆರೋಪ ಮಾಡಿದರು.</p>.<p>ಕಾರ್ಮಿಕರು ಕಪ್ಪು ಪಟ್ಟಿ ಧರಿಸಿ ಹಾಗೂ ಕಪ್ಪು ಬಾವುಟಗಳನ್ನು ಹಿಡಿದು ಘೋಷಣೆ ಕೂಗಿದರು.</p>.<p>ವೇತನ ಪರಿಷ್ಕರಣೆ ಮಾತುಕತೆಗಳನ್ನು ಕೂಡಲೇ ಆರಂಭಿಸಬೇಕು. ಬಾಕಿ ಎಚ್.ಆರ್.ಎ. ಹಾಗೂ ಬೋನಸ್ ಸೇರಿದಂತೆ ವಿವಿಧ ಬಾಕಿ ಇತರೆ ಸೌಲಭ್ಯ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.</p>.<p>ಸಿಬ್ಬಂದಿ ಮತ್ತು ಕಾರ್ಮಿಕ ಸಂಘದ ಕಾರ್ಯದರ್ಶಿಗಳಾದ ವೆಂಕೋಬ್ ಗೌಸ್ ಮಿಯಾ, ರಮೇಶ ಬಾಬು, ನಾಗರಾಜ್, ಹನೀಫ್, ಸಿದ್ದಪ್ಪ ಮುಂಡರಗಿ, ಚಂದ್ರಶೇಖರ್ ನೆಲೋಗಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಬಾಬು ಸಾಗರ್, ರಮೇಶ ವೀರಾಪೂರ, ಮೌನುದ್ದೀನ್ ಇತರರು ಉಪಸ್ಧಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-32-1208011129</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>