<p><strong>ಹಟ್ಟಿ ಚಿನ್ನದ ಗಣಿ: </strong>ಇಲ್ಲಿನ ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿಮೇ 24ರವರೆಗೆ ಚಿನ್ನ ಉತ್ಪಾದನೆ ಸ್ಧಗಿತಗೊಳಿಸಲಾಗಿದೆ.</p>.<p>‘ಕೊರೊನಾ ಸೋಂಕು ನಿಯಂತ್ರಣಕ್ಕೆ ಲಾಕ್ಡೌನ್ ಜಾರಿಯಲ್ಲಿರುವುದರಿಂದ ಈಕ್ರಮ ಕೈಗೊಳ್ಳಲಾಗಿದೆ. ಕಾರ್ಮಿಕರು ಹಾಗೂ ಸಿಬ್ಬಂದಿಗೆ ಮನೆಯಲ್ಲಿಯೇ ಇರುವಂತೆ ಸೂಚನೆ ನೀಡಲಾಗಿದೆ’ ಎಂದು ಕಂಪನಿಯ ಪ್ರಭಾರ ಕಾರ್ಯನಿರ್ವಾಹಕ ನಿರ್ದೇಶಕ ಪ್ರಕಾಶ ಬಹದೂರ್ತಿಳಿಸಿದ್ದಾರೆ.</p>.<p>‘ನೌಕರರು ಅನವಶ್ಯಕವಾಗಿ ರಸ್ತೆಯಲ್ಲಿ ತಿರುಗಾಡಿದರೆ ಅಂಥವರನ್ನು ಗೈರುಹಾಜರಿ ಎಂದು ಪರಿಗಣಿಸಲಾಗುವುದು. ನೌಕರರು ಕೇಂದ್ರ ಬಿಟ್ಟು ಬೇರೆ ಸ್ಥಳಗಳಿಗೆ ಭೇಟಿ ನೀಡಿ ಬಂದರೆ ಅಂಥವರ ವಿರುದ್ಧ ಕೋವಿಡ್ ನಿಯಮ ಉಲ್ಲಂಘನೆ ಅಡಿ ಪ್ರಕರಣ ದಾಖಲಿಸಲಾಗುವುದು’ ಎಂದುಎಚ್ಚರಿಸಿದ್ದಾರೆ.</p>.<p>‘ಅದಿರನ್ನು ಸಂಸ್ಕರಿಸಿ ದಿನಕ್ಕೆ 5 ಕೆ.ಜಿ ಚಿನ್ನ ಉತ್ಪಾದನೆ ಮಾಡಲಾಗುತ್ತಿತ್ತು. ಈಗ ಉತ್ಪಾದನೆ ಸ್ಧಗಿತವಾಗಿದ್ದರಿಂದ ಗಣಿ ಕಂಪನಿಗೆ ನಷ್ಟವಾಗುವುದಿಲ್ಲ. ಮುಂದಿನ ದಿನಗಳಲ್ಲಿ ಚಿನ್ನ ಉತ್ಪಾದನೆ ಹೆಚ್ಚಳ ಮಾಡಿ ನಷ್ಟ ಸರಿಪಡಿಸಲಾಗುವುದು’ ಎಂದು ಆಡಳಿತ ಮಂಡಳಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಟ್ಟಿ ಚಿನ್ನದ ಗಣಿ: </strong>ಇಲ್ಲಿನ ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿಮೇ 24ರವರೆಗೆ ಚಿನ್ನ ಉತ್ಪಾದನೆ ಸ್ಧಗಿತಗೊಳಿಸಲಾಗಿದೆ.</p>.<p>‘ಕೊರೊನಾ ಸೋಂಕು ನಿಯಂತ್ರಣಕ್ಕೆ ಲಾಕ್ಡೌನ್ ಜಾರಿಯಲ್ಲಿರುವುದರಿಂದ ಈಕ್ರಮ ಕೈಗೊಳ್ಳಲಾಗಿದೆ. ಕಾರ್ಮಿಕರು ಹಾಗೂ ಸಿಬ್ಬಂದಿಗೆ ಮನೆಯಲ್ಲಿಯೇ ಇರುವಂತೆ ಸೂಚನೆ ನೀಡಲಾಗಿದೆ’ ಎಂದು ಕಂಪನಿಯ ಪ್ರಭಾರ ಕಾರ್ಯನಿರ್ವಾಹಕ ನಿರ್ದೇಶಕ ಪ್ರಕಾಶ ಬಹದೂರ್ತಿಳಿಸಿದ್ದಾರೆ.</p>.<p>‘ನೌಕರರು ಅನವಶ್ಯಕವಾಗಿ ರಸ್ತೆಯಲ್ಲಿ ತಿರುಗಾಡಿದರೆ ಅಂಥವರನ್ನು ಗೈರುಹಾಜರಿ ಎಂದು ಪರಿಗಣಿಸಲಾಗುವುದು. ನೌಕರರು ಕೇಂದ್ರ ಬಿಟ್ಟು ಬೇರೆ ಸ್ಥಳಗಳಿಗೆ ಭೇಟಿ ನೀಡಿ ಬಂದರೆ ಅಂಥವರ ವಿರುದ್ಧ ಕೋವಿಡ್ ನಿಯಮ ಉಲ್ಲಂಘನೆ ಅಡಿ ಪ್ರಕರಣ ದಾಖಲಿಸಲಾಗುವುದು’ ಎಂದುಎಚ್ಚರಿಸಿದ್ದಾರೆ.</p>.<p>‘ಅದಿರನ್ನು ಸಂಸ್ಕರಿಸಿ ದಿನಕ್ಕೆ 5 ಕೆ.ಜಿ ಚಿನ್ನ ಉತ್ಪಾದನೆ ಮಾಡಲಾಗುತ್ತಿತ್ತು. ಈಗ ಉತ್ಪಾದನೆ ಸ್ಧಗಿತವಾಗಿದ್ದರಿಂದ ಗಣಿ ಕಂಪನಿಗೆ ನಷ್ಟವಾಗುವುದಿಲ್ಲ. ಮುಂದಿನ ದಿನಗಳಲ್ಲಿ ಚಿನ್ನ ಉತ್ಪಾದನೆ ಹೆಚ್ಚಳ ಮಾಡಿ ನಷ್ಟ ಸರಿಪಡಿಸಲಾಗುವುದು’ ಎಂದು ಆಡಳಿತ ಮಂಡಳಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>