ಭೂಮಿಯಿಲ್ಲದ ಕೃಷಿ ಕೂಲಿಕಾರ್ಮಿಕರ ಕಲ್ಯಾಣ ಮಾಡುವ ಯೋಜನೆ ಮಾಡಿದ್ದೇನೆ. ಮುಂದಿನ ಚುನಾವಣೆಯಲ್ಲಿ ನನ್ನ ಐದು ಯೋಜನೆಗಳನ್ನು ಘೋಷಿಸುತ್ತಿದ್ದೇನೆ. ಎಲ್ ಕೆಜಿಯಿಂದ ದ್ವಿತೀಯ ಪಿಯುಸಿವರೆಗೂ ಉಚಿತ ಶಿಕ್ಷಣ ಕೋವಿಡ್ ಸಂದರ್ಭದಲ್ಲಿ ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗಲಿಲ್ಲ. ಹೀಗಾಗಿ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ 30 ಹಾಸಿಗೆ ಸೌಲಭ್ಯದ ಆಸ್ಪತ್ರೆ ಸ್ಥಾಪಿಸಿ, ಉಚಿತ ಚಿಕಿತ್ಸೆ ನೀಡಲಾಗುವುದು. ಗ್ರಾಮೀಣ ಮಹಿಳೆಯರನ್ನು ಸ್ವಾವಲಂಬನೆ ನೀಡುವ ಯೋಜನೆ ಇದೆ. ಪ್ರತಿ ಕುಟುಂಬಕ್ಕೆ ಮಾಸಿಕ ₹15 ಸಾವಿರ ಆದಾಯ ಬರುವಂತೆ ಮಾಡಲಾಗುವುದು. ಪ್ರತಿ ಮಕ್ಕಳಿಗೂ ಉದ್ಯೋಗ ದೊರಕಿಸಲಾಗುವುದು. ಮಸಾಶನಗಳನ್ನು ಹೆಚ್ಚಿಸಲಾಗುವುದು ಎಂದು ಹೇಳಿದರು.