<p><strong>ಕವಿತಾಳ</strong>: ‘ಪೌಷ್ಟಿಕ ಆಹಾರ ಸೇವನೆ ಮತ್ತು ನಿಯಮಿತ ಆರೋಗ್ಯ ತಪಾಸಣೆ ಮೂಲಕ ಗರ್ಭಿಣಿಯರು ಆರೋಗ್ಯ ಕಾಪಾಡಿಕೊಳ್ಳಬೇಕು. ದೈಹಿಕ ಚಟುವಟಿಕೆಗಳು ಸಹಜ ಹೆರಿಗೆಗೆ ಸಹಕಾರಿʼ ಎಂದು ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಯೋಜನೆ ವೈದ್ಯಾಧಿಕಾರಿ ಡಾ.ಶ್ರೀಧರ ಇಲ್ಲೂರು ಹೇಳಿದರು.</p>.<p>ಇಲ್ಲಿಗೆ ಸಮೀಪದ ಗಂಗಾನಗರ ಕ್ಯಾಂಪ್ ಮತ್ತು ಲಕ್ಷ್ಮಿ ನಾರಾಯಣ ಕ್ಯಾಂಪ್ಗಳಲ್ಲಿ ಶನಿವಾರ ನಡೆದ ಗರ್ಭಿಣಿ ಹಾಗೂ ಬಾಣಂತಿಯರ ಆರೋಗ್ಯ ತಪಾಸಣೆ ಶಿಬಿರದಲ್ಲಿ ಅವರು ಮಾತನಾಡಿದರು.</p>.<p>‘ತರಕಾರಿ, ಬೇಯಿಸಿದ ಮೊಟ್ಟೆ, ಮೊಳಕೆ ಕಾಳು, ಹಣ್ಣುಗಳ ಸೇವನೆ ಮೂಲಕ ರಕ್ತಹೀನತೆ ಉಂಟಾಗದಂತೆ ಎಚ್ಚರ ವಹಿಸಬೇಕು. ಹೆರಿಗೆ ನಂತರ ಮಗುವಿಗೆ ಎದೆಹಾಲು ಉಣಿಸುವ ಮೂಲಕ ಮಗುವಿನ ಆರೋಗ್ಯ ಕಾಪಾಡಬೇಕು’ ಎಂದರು.</p>.<p>ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ, ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿ ಸುಮತ್ರಾ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕವಿತಾಳ</strong>: ‘ಪೌಷ್ಟಿಕ ಆಹಾರ ಸೇವನೆ ಮತ್ತು ನಿಯಮಿತ ಆರೋಗ್ಯ ತಪಾಸಣೆ ಮೂಲಕ ಗರ್ಭಿಣಿಯರು ಆರೋಗ್ಯ ಕಾಪಾಡಿಕೊಳ್ಳಬೇಕು. ದೈಹಿಕ ಚಟುವಟಿಕೆಗಳು ಸಹಜ ಹೆರಿಗೆಗೆ ಸಹಕಾರಿʼ ಎಂದು ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಯೋಜನೆ ವೈದ್ಯಾಧಿಕಾರಿ ಡಾ.ಶ್ರೀಧರ ಇಲ್ಲೂರು ಹೇಳಿದರು.</p>.<p>ಇಲ್ಲಿಗೆ ಸಮೀಪದ ಗಂಗಾನಗರ ಕ್ಯಾಂಪ್ ಮತ್ತು ಲಕ್ಷ್ಮಿ ನಾರಾಯಣ ಕ್ಯಾಂಪ್ಗಳಲ್ಲಿ ಶನಿವಾರ ನಡೆದ ಗರ್ಭಿಣಿ ಹಾಗೂ ಬಾಣಂತಿಯರ ಆರೋಗ್ಯ ತಪಾಸಣೆ ಶಿಬಿರದಲ್ಲಿ ಅವರು ಮಾತನಾಡಿದರು.</p>.<p>‘ತರಕಾರಿ, ಬೇಯಿಸಿದ ಮೊಟ್ಟೆ, ಮೊಳಕೆ ಕಾಳು, ಹಣ್ಣುಗಳ ಸೇವನೆ ಮೂಲಕ ರಕ್ತಹೀನತೆ ಉಂಟಾಗದಂತೆ ಎಚ್ಚರ ವಹಿಸಬೇಕು. ಹೆರಿಗೆ ನಂತರ ಮಗುವಿಗೆ ಎದೆಹಾಲು ಉಣಿಸುವ ಮೂಲಕ ಮಗುವಿನ ಆರೋಗ್ಯ ಕಾಪಾಡಬೇಕು’ ಎಂದರು.</p>.<p>ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ, ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿ ಸುಮತ್ರಾ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>