ಮುದಗಲ್: ಸಮೀಪದ ನಾಗರಾಳ ಗ್ರಾಮದಲ್ಲಿ ಐದು ದಿನಗಳ ಶಾಲಾ ಆರೋಗ್ಯ ಮತ್ತು ಕ್ಷೇಮ ತರಬೇತಿ ಕಾರ್ಯಾಗಾರ ನಡೆಯಿತು.
ಜಿಲ್ಲಾ ಶಿಕ್ಷಣ ಹಾಗೂ ತರಬೇತಿ ಸಂಸ್ಥೆ, ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿ ಕಚೇರಿ ಸಹಯೋಗದಲ್ಲಿ ಕಾರ್ಯಾಗಾರ ಜರುಗಿತು.
ನಾಗರಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಎಚ್.ಬಿ.ತಳ್ಳಳ್ಳಿ ಮಾತನಾಡಿ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆ ಮತ್ತು ಜ್ಯೋತಿ ಸಂಜೀವಿನಿ ಯೋಜನೆ ಕುರಿತು ಮಾಹಿತಿ ನೀಡಿದರು.
ಬಿಆರ್ಪಿ ಮಹಾಂತೇಶ ಅಂಗಡಿ ಸೇರಿದಂತೆ ಹಲವು ಶಿಕ್ಷಕರು ಈ ವೇಳೆ ಇದ್ದರು.