ಯರಗುಂಟಾ, ಶಾಖವಾದಿ, ಯದ್ಲಾಪುರ, ಬೂರ್ದಿಪಾಡ, ಆತ್ಕೂರು, ಡಿ.ರಾಂಪೂರ ಗ್ರಾಮಗಳಲ್ಲಿ ಹಳ್ಳಗಳು ಎಲ್ಲೆಮೀರಿ ಹರಿಯುತ್ತಿವೆ. ಸಂಪರ್ಕ ರಸ್ತೆಗಳು ಕಾಲುವೆಗಳಾಗಿ ಮಾರ್ಪಟ್ಟಿವೆ. ತಾಲ್ಲೂಕು ಕೇಂದ್ರ ರಾಯಚೂರಿಗೆ ಸಂಪರ್ಕ ಕಡಿತವಾಗಿದೆ. ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗಿದ್ದು, ಮರುಸ್ಥಾಪನೆಗೆ ಜೆಸ್ಕಾಂ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.