ಗುಂಜಳ್ಳಿ, ನೆಲಹಾಳ, ತಲಮಾರಿ, ಇಡಪನೂರ, ಮಿಡಗಲ್ ದಿನ್ನಿ, ಜೇಗರಕಲ್, ಹೊಸಪೇಟೆ, ಯರಗುಂಟಾ, ಶಾಖವಾದಿ, ಯದ್ಲಾಪುರ, ಬೂರ್ದಿಪಾಡ, ಆತ್ಕೂರು, ಡಿ.ರಾಂಪೂರ ಗ್ರಾಮಗಳಲ್ಲಿ ಹಳ್ಳಗಳು ಎಲ್ಲೆಮೀರಿ ಹರಿಯುತ್ತಿವೆ. ಸಂಪರ್ಕ ರಸ್ತೆಗಳು ಕಾಲುವೆಗಳಾಗಿ ಮಾರ್ಪಟ್ಟಿವೆ. ತಾಲ್ಲೂಕು ಕೇಂದ್ರ ರಾಯಚೂರಿಗೆ ಸಂಪರ್ಕ ಕಡಿತವಾಗಿದೆ.