<p><strong>ಮಸ್ಕಿ</strong>: ಪಟ್ಟಣದ ಸೋಮನಾಥನಗರ ಪ್ರದೇಶದಲ್ಲಿ ಮಳೆ ಬಂದರೆ ಸಾಕು ಬೀದಿಗಳು ಕೆರೆಯಂತಾಗುತ್ತವೆ. ಒಳಚರಂಡಿ ವ್ಯವಸ್ಥೆಯ ಕೊರತೆ ಮತ್ತು ಪುರಸಭೆಯ ನಿರ್ಲಕ್ಷ್ಯದಿಂದ ಜನ ನಿಂತ ಕೊಳಚೆ ನೀರಿನ ನಡುವೆ ಕಷ್ಟಕರ ಜೀವನ ನಡೆಸುತ್ತಿದ್ದಾರೆ.</p>.<p>ಸೋಮನಾಥನಗರದ ರಸ್ತೆಗಳು ಮತ್ತು ಮನೆಗಳ ಸುತ್ತಮುತ್ತ ನೀರು ನಿಂತು ಹಲವಾರು ದಿನಗಳು ಹರಿಯದೇ ಉಳಿಯುತ್ತದೆ. ಹಸಿರು ಕಪ್ಪು ನೀರಿನ ನಡುವೆ ಮಕ್ಕಳು, ಮಹಿಳೆಯರು ದಿನನಿತ್ಯದ ಚಟುವಟಿಕೆಗಳನ್ನು ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ನಿಂತ ನೀರಿನಿಂದ ಮಲೇರಿಯಾ, ಡೆಂಗ್ಯೂ ಮುಂತಾದ ಕಾಯಿಲೆಗಳ ಆತಂಕ ಹೆಚ್ಚಾಗಿದೆ.</p>.<p>ಸ್ಥಳೀಯರು ಹಲವು ಬಾರಿ ಪುರಸಭೆಗೆ ಮನವಿ ಸಲ್ಲಿಸಿದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವುದಾಗಿ ಆರೋಪಿಸಲಾಗಿದೆ. ‘ಮಳೆ ಬಂದರೆ ಮನೆ ಬಿಟ್ಟು ಹೋಗಬೇಕಾದ ಪರಿಸ್ಥಿತಿ. ಆದರೆ ಅಧಿಕಾರಿಗಳು ಸ್ಥಳಕ್ಕೆ ಬರುವುದೂ ಇಲ್ಲ’ ಎಂದು ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸಿದರು.</p>.<p>ನೀರಿನ ಹರಿವಿನ ಮಾರ್ಗಗಳು ಮುಚ್ಚಿ ಹೋಗಿರುವುದು ಹಾಗೂ ಒಳಚರಂಡಿ ಶುದ್ಧೀಕರಣದ ಕೊರತೆಯೇ ಈ ಸ್ಥಿತಿಗೆ ಕಾರಣವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಪ್ರದೇಶದಲ್ಲಿ ಸಮರ್ಪಕ ಡ್ರೆನೇಜ್ ಕ್ಲೀನಿಂಗ್ ಹಾಗೂ ನೀರು ಹರಿಯುವ ವ್ಯವಸ್ಥೆ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಆರೋಗ್ಯ ಅಪಾಯ ಎದುರಾಗುವ ಸಾಧ್ಯತೆ ಇದೆ ಸ್ಥಳೀಯ ನಿವಾಸಿಗಳು ಆತಂಕ ವ್ಯಕ್ತಪಡಿಸುತ್ತಿದ್ದಾರೆ.</p>.<div><blockquote>ಜನರ ಸಮಸ್ಯೆಯನ್ನು ಪರಿಗಣಿಸಿ ಮಸ್ಕಿ ಪುರಸಭೆ ತಕ್ಷಣ ಕ್ರಮ ಕೈಗೊಳ್ಳಬೇಕು ಒಳಚರಂಡಿ ಮತ್ತು ನೀರು ಹರಿಯುವ ವ್ಯವಸ್ಥೆ ಸುಧಾರಿಸಬೇಕು </blockquote><span class="attribution">ಹನುಮೇಶ ನಾಯಕ ಸ್ಥಳೀಯ ನಿವಾಸಿ</span></div>.<div><blockquote>ಸೋಮನಾಥ ನಗರದಲ್ಲಿ ಮನೆಗಳ ಸುತ್ತ ನಿಂತ ನೀರನ್ನು ಹೊರ ಹಾಕಲು ಪುರಸಭೆಯಿಂದ ಕ್ರಮ ಕೈಗೊಳ್ಳಲಾಗಿದೆ. ಮೊಟಾರ್ ಅಳವಡಿಸಿ ನೀರು ಹೊರ ಹಾಕುವ ಕೆಲಸ ನಡೆದಿದೆ </blockquote><span class="attribution"> ನರಸರೆಡ್ಡಿ ಪುರಸಭೆ ಮುಖ್ಯಾಧಿಕಾರಿ </span></div>. <p><strong>ಹಕ್ಕುಪತ್ರ ಸೌಲಭ್ಯಕ್ಕಾಗಿ ಹೋರಾಟ </strong></p><p>ನೀರಾವರಿ ಇಲಾಖೆಗೆ ಸೇರಿದ ಜಾಗ ಎನ್ನಲಾದ ಸೋಮನಾಥ ನಗರದಲ್ಲಿ 30-40 ವರ್ಷಗಳಿಂದ ನೂರಾರು ಬಡ ಕೂಲಿ ಕಾರ್ಮಿಕರು ಗುಡಿಸಲು ಮನೆಗಳನ್ನು ಕಟ್ಟಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಈ ಜನರಿಗೆ ಹಕ್ಕು ಪತ್ರ ನೀಡಿ ಸರ್ಕಾರದ ಸೌಲಭ್ಯ ಒದಗಿಸಬೇಕು ಎಂದು ಹಲವಾರು ದಿನಗಳಿಂದ ಹೋರಾಟ ನಡೆಸಲಾಗುತ್ತಿದೆ. ಈ ಜಮೀನಿನಲ್ಲಿ ವಾಸ ಮಾಡುವ ಬಡ ಜನರಿಗೆ ಹಕ್ಕುಪತ್ರ ನೀಡುವ ಸಂಬಂಧ ಸರ್ಕಾರ ಮಟ್ಟದಲ್ಲಿ ಕೆಲಸವಾಗಬೇಕಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಸ್ಕಿ</strong>: ಪಟ್ಟಣದ ಸೋಮನಾಥನಗರ ಪ್ರದೇಶದಲ್ಲಿ ಮಳೆ ಬಂದರೆ ಸಾಕು ಬೀದಿಗಳು ಕೆರೆಯಂತಾಗುತ್ತವೆ. ಒಳಚರಂಡಿ ವ್ಯವಸ್ಥೆಯ ಕೊರತೆ ಮತ್ತು ಪುರಸಭೆಯ ನಿರ್ಲಕ್ಷ್ಯದಿಂದ ಜನ ನಿಂತ ಕೊಳಚೆ ನೀರಿನ ನಡುವೆ ಕಷ್ಟಕರ ಜೀವನ ನಡೆಸುತ್ತಿದ್ದಾರೆ.</p>.<p>ಸೋಮನಾಥನಗರದ ರಸ್ತೆಗಳು ಮತ್ತು ಮನೆಗಳ ಸುತ್ತಮುತ್ತ ನೀರು ನಿಂತು ಹಲವಾರು ದಿನಗಳು ಹರಿಯದೇ ಉಳಿಯುತ್ತದೆ. ಹಸಿರು ಕಪ್ಪು ನೀರಿನ ನಡುವೆ ಮಕ್ಕಳು, ಮಹಿಳೆಯರು ದಿನನಿತ್ಯದ ಚಟುವಟಿಕೆಗಳನ್ನು ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ನಿಂತ ನೀರಿನಿಂದ ಮಲೇರಿಯಾ, ಡೆಂಗ್ಯೂ ಮುಂತಾದ ಕಾಯಿಲೆಗಳ ಆತಂಕ ಹೆಚ್ಚಾಗಿದೆ.</p>.<p>ಸ್ಥಳೀಯರು ಹಲವು ಬಾರಿ ಪುರಸಭೆಗೆ ಮನವಿ ಸಲ್ಲಿಸಿದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವುದಾಗಿ ಆರೋಪಿಸಲಾಗಿದೆ. ‘ಮಳೆ ಬಂದರೆ ಮನೆ ಬಿಟ್ಟು ಹೋಗಬೇಕಾದ ಪರಿಸ್ಥಿತಿ. ಆದರೆ ಅಧಿಕಾರಿಗಳು ಸ್ಥಳಕ್ಕೆ ಬರುವುದೂ ಇಲ್ಲ’ ಎಂದು ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸಿದರು.</p>.<p>ನೀರಿನ ಹರಿವಿನ ಮಾರ್ಗಗಳು ಮುಚ್ಚಿ ಹೋಗಿರುವುದು ಹಾಗೂ ಒಳಚರಂಡಿ ಶುದ್ಧೀಕರಣದ ಕೊರತೆಯೇ ಈ ಸ್ಥಿತಿಗೆ ಕಾರಣವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಪ್ರದೇಶದಲ್ಲಿ ಸಮರ್ಪಕ ಡ್ರೆನೇಜ್ ಕ್ಲೀನಿಂಗ್ ಹಾಗೂ ನೀರು ಹರಿಯುವ ವ್ಯವಸ್ಥೆ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಆರೋಗ್ಯ ಅಪಾಯ ಎದುರಾಗುವ ಸಾಧ್ಯತೆ ಇದೆ ಸ್ಥಳೀಯ ನಿವಾಸಿಗಳು ಆತಂಕ ವ್ಯಕ್ತಪಡಿಸುತ್ತಿದ್ದಾರೆ.</p>.<div><blockquote>ಜನರ ಸಮಸ್ಯೆಯನ್ನು ಪರಿಗಣಿಸಿ ಮಸ್ಕಿ ಪುರಸಭೆ ತಕ್ಷಣ ಕ್ರಮ ಕೈಗೊಳ್ಳಬೇಕು ಒಳಚರಂಡಿ ಮತ್ತು ನೀರು ಹರಿಯುವ ವ್ಯವಸ್ಥೆ ಸುಧಾರಿಸಬೇಕು </blockquote><span class="attribution">ಹನುಮೇಶ ನಾಯಕ ಸ್ಥಳೀಯ ನಿವಾಸಿ</span></div>.<div><blockquote>ಸೋಮನಾಥ ನಗರದಲ್ಲಿ ಮನೆಗಳ ಸುತ್ತ ನಿಂತ ನೀರನ್ನು ಹೊರ ಹಾಕಲು ಪುರಸಭೆಯಿಂದ ಕ್ರಮ ಕೈಗೊಳ್ಳಲಾಗಿದೆ. ಮೊಟಾರ್ ಅಳವಡಿಸಿ ನೀರು ಹೊರ ಹಾಕುವ ಕೆಲಸ ನಡೆದಿದೆ </blockquote><span class="attribution"> ನರಸರೆಡ್ಡಿ ಪುರಸಭೆ ಮುಖ್ಯಾಧಿಕಾರಿ </span></div>. <p><strong>ಹಕ್ಕುಪತ್ರ ಸೌಲಭ್ಯಕ್ಕಾಗಿ ಹೋರಾಟ </strong></p><p>ನೀರಾವರಿ ಇಲಾಖೆಗೆ ಸೇರಿದ ಜಾಗ ಎನ್ನಲಾದ ಸೋಮನಾಥ ನಗರದಲ್ಲಿ 30-40 ವರ್ಷಗಳಿಂದ ನೂರಾರು ಬಡ ಕೂಲಿ ಕಾರ್ಮಿಕರು ಗುಡಿಸಲು ಮನೆಗಳನ್ನು ಕಟ್ಟಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಈ ಜನರಿಗೆ ಹಕ್ಕು ಪತ್ರ ನೀಡಿ ಸರ್ಕಾರದ ಸೌಲಭ್ಯ ಒದಗಿಸಬೇಕು ಎಂದು ಹಲವಾರು ದಿನಗಳಿಂದ ಹೋರಾಟ ನಡೆಸಲಾಗುತ್ತಿದೆ. ಈ ಜಮೀನಿನಲ್ಲಿ ವಾಸ ಮಾಡುವ ಬಡ ಜನರಿಗೆ ಹಕ್ಕುಪತ್ರ ನೀಡುವ ಸಂಬಂಧ ಸರ್ಕಾರ ಮಟ್ಟದಲ್ಲಿ ಕೆಲಸವಾಗಬೇಕಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>