<p><strong>ರಾಯಚೂರು</strong>: ಜಿಲ್ಲೆಯ ವಿವಿಧೆಡೆ ಮಂಗಳವಾರ ದಿನವಿಡೀ ಸುರಿದ ಜಿಟಿಜಿಟಿ ಮಳೆಯಿಂದಾಗಿ ತಗ್ಗು ಪ್ರದೇಶದ ಮನೆಗಳಲ್ಲಿ ನೀರು ನುಗ್ಗಿ ಅವಾಂತರ ಸೃಷ್ಠಿಯಾಯಿತು.</p>.<p>ತಾಲ್ಲೂಕಿನ ಪತ್ತೆಪುರ ಗ್ರಾಮದ ಹಳ್ಳ ದಾಟುತ್ತಿದ್ದ ಜಾಗೀರ ವೆಂಕಟಾಪುರ ಗ್ರಾಮದ ಯುವಕ ಬಸವರಾಜ (33) ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.</p>.<p>ಮಂಗಳವಾರ ರಾತ್ರಿ ಮಳೆ ಸುರಿದಿದೆ. ಹಳ್ಳದಲ್ಲಿ ರಭಸವಾಗಿ ನೀರು ಹರಿಯುತ್ತಿತ್ತು. ಬಸವರಾಜ ಸೇರಿ ಸುಮಾರು 8 ಜನ ಪರಸ್ಪರ ಕೈ ಹಿಡಿದುಕೊಂಡು ಹಳ್ಳ ದಾಟುತ್ತಿದ್ದರು. ಬಸವರಾಜ ಅವರು ಕೈಯಲ್ಲಿ ಹೆಲ್ಮೆಟ್ ಹಿಡಿದಿದ್ದರು. ಅದು ನೀರಿನಲ್ಲಿ ಬಿದ್ದ ಕಾರಣ ಕೈಬಿಟ್ಟಿದ್ದಾರೆ. ಹೀಗಾಗಿ ಆಯತಪ್ಪಿ ಬಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.</p>.<p>ಬಸವರಾಜ ಅವರು ಖಾಸಗಿ ಬ್ಯಾಂಕ್ ಉದ್ಯೋಗಿಯಾಗಿದ್ದರು ಎಂದು ತಿಳಿದು ಬಂದಿದೆ. ಈ ಕುರಿತು ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ರಾಯಚೂರಿನ ಸಿಯತಲಾಬ್, ನೀರಭಾವಿಕುಂಟಾ, ಜಲಾಲ್ ನಗರ, ಚಂದ್ರಬಂಡಾ ರಸ್ತೆಯ ಆಶ್ರಯ ಕಾಲೊನಿ ಸೇರಿದಂತೆ ಅನೇಕ ತಗ್ಗು ಪ್ರದೇಶದ ಬಡಾವಣೆಗಳಿಗೆ ನೀರು ನುಗ್ಗಿದೆ. ನಗರದ ರಿಮ್ಸ್ ಆಸ್ಪತ್ರೆಯ ಆವರಣದಲ್ಲಿ ಭಾರಿ ನೀರು ನಿಂತಿದ್ದರಿಂದ ರೋಗಿಗಳು, ಸಂಬಂಧಿಕರು ಪರದಾಡಿದರು.</p>.<p>ತಾಲ್ಲೂಕಿನ ಇಡಪನೂರು ಗ್ರಾಮದ ಸೇತುವೆಯ ಭಾಗ ಕುಸಿದಿದ್ದರಿಂದ ಸಂಚಾರಕ್ಕೆ ಸಮಸ್ಯೆಯಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ಜಿಲ್ಲೆಯ ವಿವಿಧೆಡೆ ಮಂಗಳವಾರ ದಿನವಿಡೀ ಸುರಿದ ಜಿಟಿಜಿಟಿ ಮಳೆಯಿಂದಾಗಿ ತಗ್ಗು ಪ್ರದೇಶದ ಮನೆಗಳಲ್ಲಿ ನೀರು ನುಗ್ಗಿ ಅವಾಂತರ ಸೃಷ್ಠಿಯಾಯಿತು.</p>.<p>ತಾಲ್ಲೂಕಿನ ಪತ್ತೆಪುರ ಗ್ರಾಮದ ಹಳ್ಳ ದಾಟುತ್ತಿದ್ದ ಜಾಗೀರ ವೆಂಕಟಾಪುರ ಗ್ರಾಮದ ಯುವಕ ಬಸವರಾಜ (33) ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.</p>.<p>ಮಂಗಳವಾರ ರಾತ್ರಿ ಮಳೆ ಸುರಿದಿದೆ. ಹಳ್ಳದಲ್ಲಿ ರಭಸವಾಗಿ ನೀರು ಹರಿಯುತ್ತಿತ್ತು. ಬಸವರಾಜ ಸೇರಿ ಸುಮಾರು 8 ಜನ ಪರಸ್ಪರ ಕೈ ಹಿಡಿದುಕೊಂಡು ಹಳ್ಳ ದಾಟುತ್ತಿದ್ದರು. ಬಸವರಾಜ ಅವರು ಕೈಯಲ್ಲಿ ಹೆಲ್ಮೆಟ್ ಹಿಡಿದಿದ್ದರು. ಅದು ನೀರಿನಲ್ಲಿ ಬಿದ್ದ ಕಾರಣ ಕೈಬಿಟ್ಟಿದ್ದಾರೆ. ಹೀಗಾಗಿ ಆಯತಪ್ಪಿ ಬಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.</p>.<p>ಬಸವರಾಜ ಅವರು ಖಾಸಗಿ ಬ್ಯಾಂಕ್ ಉದ್ಯೋಗಿಯಾಗಿದ್ದರು ಎಂದು ತಿಳಿದು ಬಂದಿದೆ. ಈ ಕುರಿತು ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ರಾಯಚೂರಿನ ಸಿಯತಲಾಬ್, ನೀರಭಾವಿಕುಂಟಾ, ಜಲಾಲ್ ನಗರ, ಚಂದ್ರಬಂಡಾ ರಸ್ತೆಯ ಆಶ್ರಯ ಕಾಲೊನಿ ಸೇರಿದಂತೆ ಅನೇಕ ತಗ್ಗು ಪ್ರದೇಶದ ಬಡಾವಣೆಗಳಿಗೆ ನೀರು ನುಗ್ಗಿದೆ. ನಗರದ ರಿಮ್ಸ್ ಆಸ್ಪತ್ರೆಯ ಆವರಣದಲ್ಲಿ ಭಾರಿ ನೀರು ನಿಂತಿದ್ದರಿಂದ ರೋಗಿಗಳು, ಸಂಬಂಧಿಕರು ಪರದಾಡಿದರು.</p>.<p>ತಾಲ್ಲೂಕಿನ ಇಡಪನೂರು ಗ್ರಾಮದ ಸೇತುವೆಯ ಭಾಗ ಕುಸಿದಿದ್ದರಿಂದ ಸಂಚಾರಕ್ಕೆ ಸಮಸ್ಯೆಯಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>