<p><strong>ರಾಯಚೂರು</strong>: ಹಿರಿಯ ಕಥೆಗಾರ ಮಹಾಂತೇಶ ನವಲಕಲ್ ಅವರ ಭಾರತ ಭಾಗ್ಯವಿಧಾತ ಕಥೆಯಾಧಾರಿತ 'ಹಿಲಿಯೋಥಿಸ್' ನಾಟಕ ರಂಗದ ಮೇಲೆ ಪ್ರದರ್ಶನಗೊಳ್ಳಲು ಸಿದ್ಧವಾಗಿದೆ. ಈ ನಾಟಕವನ್ನು ಜಿಲ್ಲೆಯ ಯುವ ರಂಗ ನಿರ್ದೇಶಕ ಲಕ್ಷ್ಮಣ್ ಮಂಡಲಗೇರಾ ನಿರ್ದೇಶಿಸಿದ್ದು, ರಾಯಚೂರಿನ ಸಮುದಾಯ ತಂಡದ ಕಲಾವಿದರು ಪ್ರಸ್ತುತ ಪಡಿಸಲಿದ್ದಾರೆ ಎಂದು ಸಮುದಾಯ ಅಧ್ಯಕ್ಷ ವಿ.ಎನ್ ಅಕ್ಕಿ ತಿಳಿಸಿದ್ದಾರೆ.</p>.<p>ಮಹಾಂತೇಶ ನವಲಕಲ್ ಅವರ ಭಾರತ ಭಾಗ್ಯವಿಧಾತ ಕಥೆಯು ಬಹುರಾಷ್ಟ್ರೀಯ ಕ್ರಿಮಿನಾಶಕ ಕಂಪನಿಗಳು ರೈತರ ಬದುಕನ್ನು ನಾಶ ಮಾಡಹೊರಟಿರುವ ಕ್ರೌರ್ಯ, ಮೋಸದ ಪ್ರಪಂಚವನ್ನು ತೆರೆದಿಡುತ್ತದೆ. ಮಾರುಕಟ್ಟೆ ನಡೆಸುತ್ತಿರುವ ಮೌನ ಕೊಲೆಗಳ ವಿವರಗಳನ್ನು ಹೇಳುವ ಕಥಾ ಹಂದರವನ್ನು ಹೇಳಲು ಹೊರಟಿರುವ ಈ ನಾಟಕವು ಜಾಗತೀಕರಣವು ರೂಪಿಸುತ್ತಿರುವ ಮಾರುಕಟ್ಟೆಯ ಆಮಿಷಗಳಿಗೆ ರೈತರನ್ನು ಬಲಿ ತೆಗೆದುಕೊಳ್ಳುತ್ತಿರುವ ಅದೃಶ್ಯ ವ್ಯಾಪಾರ ಜಗತ್ತಿನ ದೃಶ್ಯಗಳನ್ನು ಕಟ್ಟಿ ಕೊಡಲು ನಿರ್ದೇಶಕರು ಪ್ರಯತ್ನಿಸಿದ್ದಾರೆ.</p>.<p>ಸಮುದಾಯ 50ರ ಸಂಭ್ರಮದೊಂದಿಗೆ ರಾಯಚೂರಿನ ಸಮುದಾಯ ತಂಡ ಯುವ ಕಲಾವಿದರನ್ನು ಒಟ್ಟುಗೂಡಿಸಿಕೊಂಡು ಭಾರತ ಭಾಗ್ಯವಿಧಾತ ಕಥೆಯ ನಾಟಕವನ್ನು ಕೈಗೆತ್ತಿಕೊಂಡು ಯುವ ರಂಗ ನಿರ್ದೇಶಕ ಲಕ್ಷ್ಮಣ ಮಂಡಲಗೇರಾ ಅವರು ರಂಗಪಠ್ಯ ಸಿದ್ಧಪಡಿಸಿಕೊಂಡು ನಿರ್ದೇಶಿಸಿದ್ದಾರೆ. ಈ ನಾಟಕಕ್ಕೆ ರಂಗಸಜ್ಜಿಕೆಯನ್ನು ನಾಗರಾಜ ಸಿರವಾರ ಸಿದ್ಧಪಡಿಸಿದ್ದು, ಹೇಮಂತ ಮರಿಯಮ್ಮನಹಳ್ಳಿ ಹಾಗೂ ಹನುಮಯ್ಯ ಸಂಗೀತ ಸಂಯೋಜನೆ ನೀಡಿದ್ದಾರೆ. ಪ್ರಸಾಧನವನ್ನು ವೆಂಕಟ ನರಸಿಂಹಲು ಅವರು ನಿರ್ವಹಿಸಿದ್ದಾರೆ.</p>.<p>‘ಹಿಲಿಯೋಥಿಸ್’ ನಾಟಕವು ನ.2ರಂದು ಸಂಜೆ 6.30ಕ್ಕೆ ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ ಎಂದು ವಿ.ಎನ್. ಅಕ್ಕಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ಹಿರಿಯ ಕಥೆಗಾರ ಮಹಾಂತೇಶ ನವಲಕಲ್ ಅವರ ಭಾರತ ಭಾಗ್ಯವಿಧಾತ ಕಥೆಯಾಧಾರಿತ 'ಹಿಲಿಯೋಥಿಸ್' ನಾಟಕ ರಂಗದ ಮೇಲೆ ಪ್ರದರ್ಶನಗೊಳ್ಳಲು ಸಿದ್ಧವಾಗಿದೆ. ಈ ನಾಟಕವನ್ನು ಜಿಲ್ಲೆಯ ಯುವ ರಂಗ ನಿರ್ದೇಶಕ ಲಕ್ಷ್ಮಣ್ ಮಂಡಲಗೇರಾ ನಿರ್ದೇಶಿಸಿದ್ದು, ರಾಯಚೂರಿನ ಸಮುದಾಯ ತಂಡದ ಕಲಾವಿದರು ಪ್ರಸ್ತುತ ಪಡಿಸಲಿದ್ದಾರೆ ಎಂದು ಸಮುದಾಯ ಅಧ್ಯಕ್ಷ ವಿ.ಎನ್ ಅಕ್ಕಿ ತಿಳಿಸಿದ್ದಾರೆ.</p>.<p>ಮಹಾಂತೇಶ ನವಲಕಲ್ ಅವರ ಭಾರತ ಭಾಗ್ಯವಿಧಾತ ಕಥೆಯು ಬಹುರಾಷ್ಟ್ರೀಯ ಕ್ರಿಮಿನಾಶಕ ಕಂಪನಿಗಳು ರೈತರ ಬದುಕನ್ನು ನಾಶ ಮಾಡಹೊರಟಿರುವ ಕ್ರೌರ್ಯ, ಮೋಸದ ಪ್ರಪಂಚವನ್ನು ತೆರೆದಿಡುತ್ತದೆ. ಮಾರುಕಟ್ಟೆ ನಡೆಸುತ್ತಿರುವ ಮೌನ ಕೊಲೆಗಳ ವಿವರಗಳನ್ನು ಹೇಳುವ ಕಥಾ ಹಂದರವನ್ನು ಹೇಳಲು ಹೊರಟಿರುವ ಈ ನಾಟಕವು ಜಾಗತೀಕರಣವು ರೂಪಿಸುತ್ತಿರುವ ಮಾರುಕಟ್ಟೆಯ ಆಮಿಷಗಳಿಗೆ ರೈತರನ್ನು ಬಲಿ ತೆಗೆದುಕೊಳ್ಳುತ್ತಿರುವ ಅದೃಶ್ಯ ವ್ಯಾಪಾರ ಜಗತ್ತಿನ ದೃಶ್ಯಗಳನ್ನು ಕಟ್ಟಿ ಕೊಡಲು ನಿರ್ದೇಶಕರು ಪ್ರಯತ್ನಿಸಿದ್ದಾರೆ.</p>.<p>ಸಮುದಾಯ 50ರ ಸಂಭ್ರಮದೊಂದಿಗೆ ರಾಯಚೂರಿನ ಸಮುದಾಯ ತಂಡ ಯುವ ಕಲಾವಿದರನ್ನು ಒಟ್ಟುಗೂಡಿಸಿಕೊಂಡು ಭಾರತ ಭಾಗ್ಯವಿಧಾತ ಕಥೆಯ ನಾಟಕವನ್ನು ಕೈಗೆತ್ತಿಕೊಂಡು ಯುವ ರಂಗ ನಿರ್ದೇಶಕ ಲಕ್ಷ್ಮಣ ಮಂಡಲಗೇರಾ ಅವರು ರಂಗಪಠ್ಯ ಸಿದ್ಧಪಡಿಸಿಕೊಂಡು ನಿರ್ದೇಶಿಸಿದ್ದಾರೆ. ಈ ನಾಟಕಕ್ಕೆ ರಂಗಸಜ್ಜಿಕೆಯನ್ನು ನಾಗರಾಜ ಸಿರವಾರ ಸಿದ್ಧಪಡಿಸಿದ್ದು, ಹೇಮಂತ ಮರಿಯಮ್ಮನಹಳ್ಳಿ ಹಾಗೂ ಹನುಮಯ್ಯ ಸಂಗೀತ ಸಂಯೋಜನೆ ನೀಡಿದ್ದಾರೆ. ಪ್ರಸಾಧನವನ್ನು ವೆಂಕಟ ನರಸಿಂಹಲು ಅವರು ನಿರ್ವಹಿಸಿದ್ದಾರೆ.</p>.<p>‘ಹಿಲಿಯೋಥಿಸ್’ ನಾಟಕವು ನ.2ರಂದು ಸಂಜೆ 6.30ಕ್ಕೆ ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ ಎಂದು ವಿ.ಎನ್. ಅಕ್ಕಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>