ರಾಯಚೂರು: ಪ್ರತಿಯೊಬ್ಬ ವಾಹನ ಸವಾರರು ಹೆಲ್ಮೆಟ್ ಧರಿಸಿಕೊಂಡು ಸಂಚಾರ ನಿಯಮಗಳನ್ನು ಪಾಲಿಸಿ ಅಪಾಯಗಳಿಂದ ರಕ್ಷಣೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಹೇಳಿದರು.
ನಗರದ ಮಹಾತ್ಮ ಗಾಂಧೀಜಿ ಜಿಲ್ಲಾ ಕ್ರೀಡಾಂಗಣದ ಹತ್ತಿರ ಜಿಲ್ಲಾ ಪೊಲೀಸ್ ಇಲಾಖೆಯಿಂದ ಮಂಗಳವಾರ ಆಯೋಜಿಸಿದ್ದ ಹೆಲ್ಮೆಟ್ ಜಾಗೃತಿ ಜಾಥಾಕ್ಕೆ ಹಸಿರು ನಿಶಾನೆ ತೋರಿಸುವ ಪೂರ್ವ ಮಾತನಾಡಿದರು.
ವಾಹನಗಳಲ್ಲಿ ಸಂಚರಿಸಲು ಸಂಚಾರ ನಿಯಮಗಳನ್ನು ಪಾಲಿಸುವುದು ಅಗತ್ಯವಾಗಿದ್ದು, ಎಲ್ಲರೂ ಸಂಚಾರ ನಿಮಯಗಳನ್ನು ಅನುಸರಿಸಿ ಸುಗಮ ಸಂಚಾರ ಮಾಡಬೇಕು ಎಂದರು.
ಕ್ರೀಡಾಂಗಣದಿಂದ ತೀನ್ ಕಂದಿಲ್ ಮೂಲಕ ಜಿಲ್ಲಾ ಪೊಲೀಸ್ ಪರೇಡ್ ಮೈದಾನದವರೆಗೆ ಪೊಲೀಸ್ ವರಿಷ್ಠಾಧಿಕಾರಿ ಸಹಿತ ನೂರಾರು ಜನರು ದ್ವಿಚಕ್ರ ವಾಹನಗಳಲ್ಲಿ ಜಾಥಾ ನಡೆಸಿ ಜಾಗೃತಿ ಮೂಡಿಸಿದರು. ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೂಡ ದ್ವಿಚಕ್ರ ವಾಹನದಲ್ಲಿ ಸಾಥ್ ನೀಡಿದರು
ಸಿಪಿಐ ಉಮೇಶ, ಪಿಎಸ್ಐಗಳಾದ ಅಮರಪ್ಪ ಶಿವಬಲ, ಉಮೇಶ ಕಾಂಬ್ಳೆ ಹಾಗೂ ಇತರರು ಇದ್ದರು.