ಹಿಂದಿನ ಸಮಾಜಕ್ಕೂ ಈಗಿನ ಸಮಾಜಕ್ಕೂ ಬಹಳಷ್ಟು ವ್ಯತ್ಯಾಸಗಳಿದ್ದು, ಸಮಾಜದಲ್ಲಿ ಮೌಢ್ಯತೆ, ಅಸಮಾನತೆ, ಭ್ರಷ್ಟಾಚಾರ ಹೆಚ್ಚುತ್ತಿದೆ. ಉನ್ನತ ಶಿಕ್ಷಣ ಪಡೆದವರು ಕೂಡ ಮೌಢ್ಯತೆಗೆ ಪ್ರೋತ್ಸಾಹ ನೀಡುತ್ತಿರುವುದು ನೈತಿಕತೆಯ ದುಸ್ಥಿತಿಗೆ ಕನ್ನಡಿಯಾಗಿದೆ. ಸಮಾಜದ ಬೆಳವಣಿಗೆಗೆ ಮುಂದಾಗಬೇಕಾದ ವಿದ್ಯಾವಂತರು ವಿಮುಖರಾಗುತ್ತಿರುವುದು ಕಳವಳದ ಸಂಗತಿಯಾಗಿದ್ದು, ಶಿಕ್ಷಣದಲ್ಲಿನ ನ್ಯೂನ್ಯತೆ ಅರಿತು ಪರಿಹಾರ ಕಂಡುಕೊಳ್ಳಬೇಕಾಗಿದೆ ಎಂದರು.