ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಆಶೀರ್ವಚನ ನೀಡಿದರು. ದ್ವೈತ, ಅದ್ವೈತ, ವಿಶಿಷ್ಟಾದ್ವೈತ ಸಿದ್ದಾಂತಗಳ ಪಾಂಡಿತ್ಯ ಹಾಗೂಪಾಣಿ ವ್ಯಾಕರಣದ ಬಗ್ಗೆ ಎರಡು ಗುಂಪುಗಳ ಮಧ್ಯೆ ಚರ್ಚೆ ನಡೆಯಿತು. ರಾಜ್ಯ ಪಶುಸಂಗೋಪನ ಸಚಿವ ಪ್ರಭು ಚವಾಣ, ಸಂಸದ ರಾಜಾ ಅಮರೇಶ್ವರ ನಾಯಕ, ಶಾಸಕ ಡಾ.ಶಿವರಾಜ ಪಾಟೀಲ, ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಹಾಗೂ ವಿದ್ವಾಂಸರು ಇದ್ದರು.