<p><strong>ಮಸ್ಕಿ</strong>: ‘ತಾಲ್ಲೂಕಿನ ಹಿರೇಕಡಬೂರು-ಚಿಕ್ಕಕಡಬೂರಿನ ಹಳ್ಳದ ತಡೆಗೋಡೆ ನಿರ್ಮಾಣ ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ’ ಎಂದು ಶಾಸಕ, ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್.ಬಸನಗೌಡ ತುರುವಿಹಾಳ ತಿಳಿಸಿದರು.</p>.<p>ಹಿರೇಕಡಬೂರು ಗ್ರಾಮದಲ್ಲಿ ಬುಧವಾರ ಹಳ್ಳದ ತಡೆಗೋಡೆ ನಿರ್ಮಾಣಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಹಳ್ಳದ ತಡೆಗೋಡೆ ನಿರ್ಮಾಣಕ್ಕೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ₹55 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ. ಕಾಮಗಾರಿ ಜವಾಬ್ದಾರಿಯನ್ನು ಲೋಕೋಪಯೋಗಿ ಇಲಾಖೆಗೆ ವಹಿಸಲಾಗಿದೆ’ ಎಂದು ತಿಳಿಸಿದರು.</p>.<p>‘ಗುತ್ತಿಗೆದಾರರು ನಿಗದಿತ ಸಮಯದಲ್ಲಿ ಉತ್ತಮ ಗುಣಮಟ್ಟದ ಕೆಲಸ ನಿರ್ವಹಿಸುವ ಮೂಲಕ ಸರ್ಕಾರದ ಅನುದಾನ ಸಮರ್ಪಕವಾಗಿ ಬಳಕೆಯಾಗುವಂತೆ ಮಾಡಬೇಕು’ ಎಂದು ತಿಳಿಸಿದರು.</p>.<p>ಮುಖಂಡ ಅಯ್ಯನಗೌಡ, ದೇವಪ್ಪ, ರಮೇಶ ಕರೆಕುರಿ, ಹನುಮಂತ, ಶಿವುಗ್ಯಾನಪ್ಪ, ಮಲ್ಲಯ್ಯ, ಲಕ್ಷ್ಮಣ, ಅಭಿಗೌಡ, ಈರಪ್ಪ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಸ್ಕಿ</strong>: ‘ತಾಲ್ಲೂಕಿನ ಹಿರೇಕಡಬೂರು-ಚಿಕ್ಕಕಡಬೂರಿನ ಹಳ್ಳದ ತಡೆಗೋಡೆ ನಿರ್ಮಾಣ ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ’ ಎಂದು ಶಾಸಕ, ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್.ಬಸನಗೌಡ ತುರುವಿಹಾಳ ತಿಳಿಸಿದರು.</p>.<p>ಹಿರೇಕಡಬೂರು ಗ್ರಾಮದಲ್ಲಿ ಬುಧವಾರ ಹಳ್ಳದ ತಡೆಗೋಡೆ ನಿರ್ಮಾಣಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಹಳ್ಳದ ತಡೆಗೋಡೆ ನಿರ್ಮಾಣಕ್ಕೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ₹55 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ. ಕಾಮಗಾರಿ ಜವಾಬ್ದಾರಿಯನ್ನು ಲೋಕೋಪಯೋಗಿ ಇಲಾಖೆಗೆ ವಹಿಸಲಾಗಿದೆ’ ಎಂದು ತಿಳಿಸಿದರು.</p>.<p>‘ಗುತ್ತಿಗೆದಾರರು ನಿಗದಿತ ಸಮಯದಲ್ಲಿ ಉತ್ತಮ ಗುಣಮಟ್ಟದ ಕೆಲಸ ನಿರ್ವಹಿಸುವ ಮೂಲಕ ಸರ್ಕಾರದ ಅನುದಾನ ಸಮರ್ಪಕವಾಗಿ ಬಳಕೆಯಾಗುವಂತೆ ಮಾಡಬೇಕು’ ಎಂದು ತಿಳಿಸಿದರು.</p>.<p>ಮುಖಂಡ ಅಯ್ಯನಗೌಡ, ದೇವಪ್ಪ, ರಮೇಶ ಕರೆಕುರಿ, ಹನುಮಂತ, ಶಿವುಗ್ಯಾನಪ್ಪ, ಮಲ್ಲಯ್ಯ, ಲಕ್ಷ್ಮಣ, ಅಭಿಗೌಡ, ಈರಪ್ಪ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>