ಅಪೂರ್ಣ ಕಾಮಗಾರಿಗಳ ಸಂಖ್ಯೆ ಅಧಿಕವಾಗಿದ್ದು, ತ್ವರಿತವಾಗಿ ಪೂರ್ಣಗೊಳಿಸಬೇಕು. ಹರಿಜನವಾಡ ಬಡಾವಣೆ, ಯಕ್ಲಾಸಪುರ, ಮಾನ್ವಿ ತಾಲ್ಲೂಕಿನ ಕುರ್ಡಿಯಲ್ಲಿ ಶೌಚಾಲಯ ಕಾಮಗಾರಿಗೆ ಅನುದಾನ ನೀಡಿದ್ದರೂ ಕೆಲಸವಾಗಿಲ್ಲ. ದೇವದುರ್ಗದ ಬಾಲಕಿಯರ ವಸತಿ ನಿಲಯ ಕಾಮಗಾರಿ ಆಗಸ್ಟ್ 30ರೊಳಗೆ ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಿದರು.