ಶಕ್ತಿನಗರ: ಈದ್ ಉಲ್ ಫಿತ್ರ್ ಹಬ್ಬವನ್ನು ಶಾಂತಿ ಮತ್ತು ಸೌಹರ್ದದಿಂದ ಆಚರಣೆ ಮಾಡಬೇಕು. ಯಾವುದೇ ಅಹಿತಕರ ಘಟನೆಗಳು ಅಸ್ಪದ ನೀಡಬಾರದು ಎಂದುಪಿಎಸ್ಐ ಎಚ್.ಹುಲಿಗೇಶ್ ಓಂಕಾರ ಹೇಳಿದರು.
ಇಲ್ಲಿನ ಪೊಲೀಸ್ ಠಾಣೆಯಲ್ಲಿ ರಂಜಾನ್ ಅಂಗವಾಗಿ ಈಚೆಗೆ ನಡೆದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.
ಮುಸ್ಲಿಂ ಮುಖಂಡ ಮಹೆಬೂಬ್ ಕೆರೂರ್ ಮಾತನಾಡಿ, ಎಲ್ಲಾ ಹಬ್ಬಗಳನ್ನು ಶಾಂತಿ ಮತ್ತು ಸೌಹರ್ದದಿಂದ ಆಚರಿಸಿಕೊಂಡು ಬಂದಿದ್ದೇವೆ. ಹಿಂದೂ– ಮುಸ್ಲಿಂ ಭೇದ ಭಾವ ಮಾಡದೆ, ಎಲ್ಲ ಹಬ್ಬ ಆಚರಣೆಗಳನ್ನು ಮಾಡುತ್ತೇವೆ ಎಂದರು.