<p><strong>ಹುಮನಾಬಾದ್</strong>: ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ನಿಮಿತ್ತ ಅಳವಡಿಸುವ ಬ್ಯಾನರ್ಗಳಿಗೆ ಕಡ್ಡಾಯವಾಗಿ ಪುರಸಭೆಯಿಂದ ಪರವಾನಗಿ ಪಡೆಯಬೇಕು ಎಂದು ಪಿಎಸ್ಐ ಸುರೇಶ ತಿಳಿಸಿದರು.</p>.<p>ಜಾತ್ರೆ ಅಂಗವಾಗಿ ಪಟ್ಟಣದ ಪುರಸಭೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಬ್ಯಾನರ್ಗಳಿಗೆ ಕೆಲ ಕಿಡಿಗೇಡಿಗಳು ಹಾನಿ ಮಾಡಿ ಕಾನೂನು ಸುವ್ಯವಸ್ಥೆ ಹಾಳು ಮಾಡುತ್ತಿದ್ದಾರೆ. ಹೀಗಾಗಿ ಪುರಸಭೆ ಈ ಕುರಿತು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಬೇಕು. ಯಾರ ಹೆಸರಲ್ಲಿ ಪರವಾನಗಿ ಪಡೆಯಲಾಗಿದೆ, ಬ್ಯಾನರ್ ಅಳತೆ, ಪ್ರಿಂಟರ್ಸ್ ಹೆಸರು ಹಾಗೂ ಎಷ್ಟು ದಿನಕ್ಕೆ ಪುರಸಭೆ ಪರವಾನಗಿ ಪಡೆದಿದೆ ಎಂಬ ಪತ್ರವನ್ನು ಬ್ಯಾನರ್ನಲ್ಲಿ ಪ್ರದರ್ಶಿಸಬೇಕು’ ಎಂದು ತಿಳಿಸಿದರು.</p>.<p>ಸದಸ್ಯರಾದ ವೀರೇಶ ಸೀಗಿ, ರಮೇಶ ಕಲ್ಲೂರ, ಅನೀಲ ಪಲ್ಲರಿ, ಎಸ್.ಎ.ಬಾಸಿದ್ ಸೇರಿದಂತೆ ಇತರೆ ಸದಸ್ಯರು ಮಾತನಾಡಿ, ‘ಪಟ್ಟಣದಲ್ಲಿ ಸ್ವಚ್ಛತೆ, ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಬೇಕು.ಪ್ರತಿನಿತ್ಯ ದೇವರ ಪಲ್ಲಕ್ಕಿ ಸಾಗುವ ರಸ್ತೆಯಲ್ಲಿ ಯಾವುದೇ ಸಮಸ್ಯೆ ಕಂಡುಬರದಂತೆ ಆಗಬೇಕು’ ಎಂದು ತಿಳಿಸಿದರು.</p>.<p>ಪುರಸಭೆ ಅಧ್ಯಕ್ಷೆ ಪಾರ್ವತಿ ಶೇರಿಕಾರ, ಉಪಾಧ್ಯಕ್ಷ ಮುಕ್ರಮ್ ಜಾ, ಮುಖ್ಯಾಧಿಕಾರಿ ಫೀರೋಜ್ ಖಾನ್ ಸೇರಿದಂತೆ ಪುರಸಭೆ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಮನಾಬಾದ್</strong>: ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ನಿಮಿತ್ತ ಅಳವಡಿಸುವ ಬ್ಯಾನರ್ಗಳಿಗೆ ಕಡ್ಡಾಯವಾಗಿ ಪುರಸಭೆಯಿಂದ ಪರವಾನಗಿ ಪಡೆಯಬೇಕು ಎಂದು ಪಿಎಸ್ಐ ಸುರೇಶ ತಿಳಿಸಿದರು.</p>.<p>ಜಾತ್ರೆ ಅಂಗವಾಗಿ ಪಟ್ಟಣದ ಪುರಸಭೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಬ್ಯಾನರ್ಗಳಿಗೆ ಕೆಲ ಕಿಡಿಗೇಡಿಗಳು ಹಾನಿ ಮಾಡಿ ಕಾನೂನು ಸುವ್ಯವಸ್ಥೆ ಹಾಳು ಮಾಡುತ್ತಿದ್ದಾರೆ. ಹೀಗಾಗಿ ಪುರಸಭೆ ಈ ಕುರಿತು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಬೇಕು. ಯಾರ ಹೆಸರಲ್ಲಿ ಪರವಾನಗಿ ಪಡೆಯಲಾಗಿದೆ, ಬ್ಯಾನರ್ ಅಳತೆ, ಪ್ರಿಂಟರ್ಸ್ ಹೆಸರು ಹಾಗೂ ಎಷ್ಟು ದಿನಕ್ಕೆ ಪುರಸಭೆ ಪರವಾನಗಿ ಪಡೆದಿದೆ ಎಂಬ ಪತ್ರವನ್ನು ಬ್ಯಾನರ್ನಲ್ಲಿ ಪ್ರದರ್ಶಿಸಬೇಕು’ ಎಂದು ತಿಳಿಸಿದರು.</p>.<p>ಸದಸ್ಯರಾದ ವೀರೇಶ ಸೀಗಿ, ರಮೇಶ ಕಲ್ಲೂರ, ಅನೀಲ ಪಲ್ಲರಿ, ಎಸ್.ಎ.ಬಾಸಿದ್ ಸೇರಿದಂತೆ ಇತರೆ ಸದಸ್ಯರು ಮಾತನಾಡಿ, ‘ಪಟ್ಟಣದಲ್ಲಿ ಸ್ವಚ್ಛತೆ, ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಬೇಕು.ಪ್ರತಿನಿತ್ಯ ದೇವರ ಪಲ್ಲಕ್ಕಿ ಸಾಗುವ ರಸ್ತೆಯಲ್ಲಿ ಯಾವುದೇ ಸಮಸ್ಯೆ ಕಂಡುಬರದಂತೆ ಆಗಬೇಕು’ ಎಂದು ತಿಳಿಸಿದರು.</p>.<p>ಪುರಸಭೆ ಅಧ್ಯಕ್ಷೆ ಪಾರ್ವತಿ ಶೇರಿಕಾರ, ಉಪಾಧ್ಯಕ್ಷ ಮುಕ್ರಮ್ ಜಾ, ಮುಖ್ಯಾಧಿಕಾರಿ ಫೀರೋಜ್ ಖಾನ್ ಸೇರಿದಂತೆ ಪುರಸಭೆ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>