<p><strong>ಹಟ್ಟಿ ಚಿನ್ನದ ಗಣಿ</strong>: ಹಟ್ಟಿ ಚಿನ್ನದ ಗಣಿ ಕಂಪನಿ ಪ್ರದೇಶದಲ್ಲಿ ₹998 ಕೋಟಿ ವೆಚ್ಚದ ಕಾರ್ಮಿಕರ ಹೊಸ ವಸತಿ ಸಮುಚ್ಛಯಗಳು ಸೇರಿದಂತೆ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಗಣಿ ಕಂಪನಿ ನಿಗಮದ ಅಧ್ಯಕ್ಷ ಜೆ.ಟಿ. ಪಾಟೀಲ ಹೇಳಿದರು.</p>.<p>ಗಣಿ ಕಂಪನಿಯ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.</p>.<p>‘ಕಾಮಗಾರಿಗಳಿಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ₹998 ಕೋಟಿ ವೆಚ್ಚದಲ್ಲಿ ವಸತಿ ಗೃಹಗಳು, ಶಾಲೆ, ಆಸ್ಪತ್ರೆ, ಕ್ರೀಡಾ ಸಂಕೀರ್ಣ ಸೇರಿದಂತೆ ಅನೇಕ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ದೊರೆಯಲಿದೆ’ ಎಂದರು.</p>.<p>‘ಇದರಲ್ಲಿ 912 ಮನೆಗಳು, ಲಿಫ್ಟ್ ಎಲಿವೇಟರ್ನಂತಹ ಬೇರೆಬೇರೆ ಆಧುನಿಕ ಸೌಲಭ್ಯಗಳು ಇರಲಿವೆ. ನೆಲ ಮತ್ತು ಎರಡು ಮಹಡಿಯ 130 ಹಾಸಿಗೆಗಳ ಆಸ್ಪತ್ರೆ ನಿರ್ಮಾಣವಾಗಲಿದೆ’ ಎಂದು ತಿಳಿಸಿದರು.</p>.<p>ಚಿನ್ನದ ಉತ್ಪಾದನೆ ಹೆಚ್ಚಳ: ‘ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಈ ಮೊದಲು ವರ್ಷಕ್ಕೆ 1,500 ಕೆ.ಜಿ.ಯಷ್ಟು ಚಿನ್ನ ಉತ್ಪಾದನೆಯ ಗುರಿ ಇತ್ತು. ನಾನು ಅಧಿಕಾರ ಸ್ವೀಕರಿಸಿದ ಮೇಲೆ ವಾರ್ಷಿಕವಾಗಿ 1605 ಕೆ.ಜಿ ಚಿನ್ನವನ್ನು ಉತ್ಪಾದಿಸಲಾಗಿದೆ. ಇದೀಗ 2025-26ನೇ ಸಾಲಿನಲ್ಲಿ ವಾರ್ಷಿಕವಾಗಿ 1,700 ಕೆ.ಜಿ. ಚಿನ್ನವನ್ನು ಉತ್ಪಾದಿಸಲಾಗುವುದು’ ಎಂದು ಜೆ.ಟಿ.ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.</p>.<p>ಕಂಪನಿಯ ವ್ಯವಸ್ಥಾಪಕ ನಿರ್ದೇಶಕಿ ಶಿಲ್ಪಾ ಆರ್., ಇಡಿ ಪ್ರಕಾಶ ರಾಮಾಯಾಜಿ, ಜಿಎಂ ಶಫಿವುಲ್ಲಾ ಖಾನ್, ಎಚ್ಆರ್ ಯಮನೂರಪ್ಪ ಗೌಡರ್, ಮುಖಂಡರಾದ ವೇಣುಗೋಪಾಲಗೌಡ ಜಾಲಹಳ್ಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಟ್ಟಿ ಚಿನ್ನದ ಗಣಿ</strong>: ಹಟ್ಟಿ ಚಿನ್ನದ ಗಣಿ ಕಂಪನಿ ಪ್ರದೇಶದಲ್ಲಿ ₹998 ಕೋಟಿ ವೆಚ್ಚದ ಕಾರ್ಮಿಕರ ಹೊಸ ವಸತಿ ಸಮುಚ್ಛಯಗಳು ಸೇರಿದಂತೆ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಗಣಿ ಕಂಪನಿ ನಿಗಮದ ಅಧ್ಯಕ್ಷ ಜೆ.ಟಿ. ಪಾಟೀಲ ಹೇಳಿದರು.</p>.<p>ಗಣಿ ಕಂಪನಿಯ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.</p>.<p>‘ಕಾಮಗಾರಿಗಳಿಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ₹998 ಕೋಟಿ ವೆಚ್ಚದಲ್ಲಿ ವಸತಿ ಗೃಹಗಳು, ಶಾಲೆ, ಆಸ್ಪತ್ರೆ, ಕ್ರೀಡಾ ಸಂಕೀರ್ಣ ಸೇರಿದಂತೆ ಅನೇಕ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ದೊರೆಯಲಿದೆ’ ಎಂದರು.</p>.<p>‘ಇದರಲ್ಲಿ 912 ಮನೆಗಳು, ಲಿಫ್ಟ್ ಎಲಿವೇಟರ್ನಂತಹ ಬೇರೆಬೇರೆ ಆಧುನಿಕ ಸೌಲಭ್ಯಗಳು ಇರಲಿವೆ. ನೆಲ ಮತ್ತು ಎರಡು ಮಹಡಿಯ 130 ಹಾಸಿಗೆಗಳ ಆಸ್ಪತ್ರೆ ನಿರ್ಮಾಣವಾಗಲಿದೆ’ ಎಂದು ತಿಳಿಸಿದರು.</p>.<p>ಚಿನ್ನದ ಉತ್ಪಾದನೆ ಹೆಚ್ಚಳ: ‘ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಈ ಮೊದಲು ವರ್ಷಕ್ಕೆ 1,500 ಕೆ.ಜಿ.ಯಷ್ಟು ಚಿನ್ನ ಉತ್ಪಾದನೆಯ ಗುರಿ ಇತ್ತು. ನಾನು ಅಧಿಕಾರ ಸ್ವೀಕರಿಸಿದ ಮೇಲೆ ವಾರ್ಷಿಕವಾಗಿ 1605 ಕೆ.ಜಿ ಚಿನ್ನವನ್ನು ಉತ್ಪಾದಿಸಲಾಗಿದೆ. ಇದೀಗ 2025-26ನೇ ಸಾಲಿನಲ್ಲಿ ವಾರ್ಷಿಕವಾಗಿ 1,700 ಕೆ.ಜಿ. ಚಿನ್ನವನ್ನು ಉತ್ಪಾದಿಸಲಾಗುವುದು’ ಎಂದು ಜೆ.ಟಿ.ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.</p>.<p>ಕಂಪನಿಯ ವ್ಯವಸ್ಥಾಪಕ ನಿರ್ದೇಶಕಿ ಶಿಲ್ಪಾ ಆರ್., ಇಡಿ ಪ್ರಕಾಶ ರಾಮಾಯಾಜಿ, ಜಿಎಂ ಶಫಿವುಲ್ಲಾ ಖಾನ್, ಎಚ್ಆರ್ ಯಮನೂರಪ್ಪ ಗೌಡರ್, ಮುಖಂಡರಾದ ವೇಣುಗೋಪಾಲಗೌಡ ಜಾಲಹಳ್ಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>