ತುಂಗಭದ್ರಾ ಕಾಡಾ ಅಧ್ಯಕ್ಷ ಸ್ಥಾನ ಕೊಡುವುದಾಗಿ ಬಿಜೆಪಿ ನಾಯಕರು ಹೇಳಿರುವುದರಿಂದ ಬಿಜೆಪಿಗೆ ಸೇರುತ್ತಾರೆಂಬ ಸುಳ್ಳು ಸುದ್ದಿಯನ್ನು ಕೆಲವರು ಹಬ್ಬಿಸಿರುವುದು ಸರಿಯಲ್ಲ. ಬಿಜೆಪಿಗೆ ಸೇರುವ ಸುದ್ದಿ ಸತ್ಯಕ್ಕೆ ದೂರವಾದುದ್ದು. ನಾನು ಕುರುಬರ ಎಸ್ಟಿ ಹೋರಾಟ ಸಮಿತಿಯ ಕಾರ್ಯಚಟುವಟಿಕೆಯಲ್ಲಿ ಸಕ್ರಿಯವಾಗಿದ್ದೇನೆ. ವಿನಾಃಕಾರಣ ಈ ರೀತಿ ವದಂತಿಗಳನ್ನು ಹಬ್ಬಿಸಿ ಜನರನ್ನು ಗೊಂದಲಕ್ಕೀಡು ಮಾಡಬಾರದು ಎಂದು ಹೇಳಿದ್ದಾರೆ.