<p><strong>ಕವಿತಾಳ</strong>: ಚಿಣ್ಣರೊಂದಿಗೆ ಹಾಡಿ ಕುಣಿದು ಸಂಭ್ರಮಿಸಿದ ತರಬೇತಿ ನಿರತ ಐಎಎಸ್ ಅಧಿಕಾರಿಗಳು ಮಕ್ಕಳಿಗೆ ಚಾಕೊಲೇಟ್ ಮತ್ತು ಬಿಸ್ಕತ್ ನೀಡಿ ಖುಷಿ ಪಟ್ಟರು.</p>.<p>ಉತ್ತಾರಖಂಡದ ಮಸ್ಸೂರಿಯ ಐಎಎಸ್ ತರಬೇತಿ ಅಕಾಡೆಮಿಯಿಂದ ಆಗಮಿಸಿದ ತರಬೇತಿ ನಿರತ ಅಧಿಕಾರಿಗಳು ಎರಡು ದಿನಗಳಿಂದ ಸಮೀಪದ ತೋರಣದಿನ್ನಿ, ಮಲ್ಲದಗುಡ್ಡ ವ್ಯಾಪ್ತಿಯಲ್ಲಿ ಆಸ್ಪತ್ರೆ, ಗ್ರಾಮ ಪಂಚಾಯಿತಿ, ಅಂಗನವಾಡಿ ಕೇಂದ್ರ, ಸರ್ಕಾರಿ ಶಾಲೆಗಳು ಸೇರಿದಂತೆ ವಿವಿಧೆಡೆ ಭೇಟಿ ನೀಡಿ ಮಾಹಿತಿ ಪಡೆದರು.</p>.<p>ತೋರಣದಿನ್ನಿ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಮಂಗಳವಾರ ಭೇಟಿ ನೀಡಿದ ಅಧಿಕಾರಿಗಳ ತಂಡವನ್ನು ಅಲ್ಲಿನ ಮಕ್ಕಳು ಹಾಡು ನೃತ್ಯದ ಮೂಲಕ ಸ್ವಾಗತಿಸಿದರು, ನಗು ನಗುತ್ತಲೇ ಚಿಣ್ಣರೊಂದಿಗೆ ಬೆರೆತ ಅಧಿಕಾರಿಗಳು ಮಕ್ಕಳೊಂದಿಗೆ ತಾವೂ ಹೆಜ್ಜೆ ಹಾಕಿದರು.</p>.<p>ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಆವರಣದಲ್ಲಿ ಸಸಿ ನೆಟ್ಟುರು. ಗ್ರಾಮೀಣ ಆರ್ಥಿಕತೆ, ಕಿರು ಉದ್ಯಮ, ಕುಟುಂಬ ನಿರ್ವಹಣೆ ಕುರಿತು ಗ್ರಾಮದ ಸ್ವ ಸಹಾಯ ಗುಂಪಿನ ಸದಸ್ಯರೊಂದಿಗೆ ಚರ್ಚಿಸಿದರು.</p>.<p>ಭತ್ತದ ಬೆಳೆ, ನೀರಿನ ಬಳಕೆ, ಕ್ರಿಮಿನಾಶಕ, ರಸಗೊಬ್ಬರ ಬಳಕೆ, ಇಳುವರಿ ಹಾಗೂ ಮಾರುಕಟ್ಟೆ ವ್ಯವಸ್ಥೆ ಕುರಿತು ರೈತರಿಂದ ಮಾಹಿತಿ ಪಡೆದರು, ಶಾಲಾ ಕಾಲೇಜು ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು.</p>.<p>ಸಿಡಿಪಿಒ ಎಂ.ಡಿ.ಗೋಕುಲ್ ಹುಸೇನ್, ಮಸ್ಕಿ ತಾಲ್ಲೂಕು ಪಂಚಾಯಿತಿ ಇಒ ಅಮರೇಶ ಯಾದವ ಮತ್ತು ವಿವಿಧ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕವಿತಾಳ</strong>: ಚಿಣ್ಣರೊಂದಿಗೆ ಹಾಡಿ ಕುಣಿದು ಸಂಭ್ರಮಿಸಿದ ತರಬೇತಿ ನಿರತ ಐಎಎಸ್ ಅಧಿಕಾರಿಗಳು ಮಕ್ಕಳಿಗೆ ಚಾಕೊಲೇಟ್ ಮತ್ತು ಬಿಸ್ಕತ್ ನೀಡಿ ಖುಷಿ ಪಟ್ಟರು.</p>.<p>ಉತ್ತಾರಖಂಡದ ಮಸ್ಸೂರಿಯ ಐಎಎಸ್ ತರಬೇತಿ ಅಕಾಡೆಮಿಯಿಂದ ಆಗಮಿಸಿದ ತರಬೇತಿ ನಿರತ ಅಧಿಕಾರಿಗಳು ಎರಡು ದಿನಗಳಿಂದ ಸಮೀಪದ ತೋರಣದಿನ್ನಿ, ಮಲ್ಲದಗುಡ್ಡ ವ್ಯಾಪ್ತಿಯಲ್ಲಿ ಆಸ್ಪತ್ರೆ, ಗ್ರಾಮ ಪಂಚಾಯಿತಿ, ಅಂಗನವಾಡಿ ಕೇಂದ್ರ, ಸರ್ಕಾರಿ ಶಾಲೆಗಳು ಸೇರಿದಂತೆ ವಿವಿಧೆಡೆ ಭೇಟಿ ನೀಡಿ ಮಾಹಿತಿ ಪಡೆದರು.</p>.<p>ತೋರಣದಿನ್ನಿ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಮಂಗಳವಾರ ಭೇಟಿ ನೀಡಿದ ಅಧಿಕಾರಿಗಳ ತಂಡವನ್ನು ಅಲ್ಲಿನ ಮಕ್ಕಳು ಹಾಡು ನೃತ್ಯದ ಮೂಲಕ ಸ್ವಾಗತಿಸಿದರು, ನಗು ನಗುತ್ತಲೇ ಚಿಣ್ಣರೊಂದಿಗೆ ಬೆರೆತ ಅಧಿಕಾರಿಗಳು ಮಕ್ಕಳೊಂದಿಗೆ ತಾವೂ ಹೆಜ್ಜೆ ಹಾಕಿದರು.</p>.<p>ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಆವರಣದಲ್ಲಿ ಸಸಿ ನೆಟ್ಟುರು. ಗ್ರಾಮೀಣ ಆರ್ಥಿಕತೆ, ಕಿರು ಉದ್ಯಮ, ಕುಟುಂಬ ನಿರ್ವಹಣೆ ಕುರಿತು ಗ್ರಾಮದ ಸ್ವ ಸಹಾಯ ಗುಂಪಿನ ಸದಸ್ಯರೊಂದಿಗೆ ಚರ್ಚಿಸಿದರು.</p>.<p>ಭತ್ತದ ಬೆಳೆ, ನೀರಿನ ಬಳಕೆ, ಕ್ರಿಮಿನಾಶಕ, ರಸಗೊಬ್ಬರ ಬಳಕೆ, ಇಳುವರಿ ಹಾಗೂ ಮಾರುಕಟ್ಟೆ ವ್ಯವಸ್ಥೆ ಕುರಿತು ರೈತರಿಂದ ಮಾಹಿತಿ ಪಡೆದರು, ಶಾಲಾ ಕಾಲೇಜು ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು.</p>.<p>ಸಿಡಿಪಿಒ ಎಂ.ಡಿ.ಗೋಕುಲ್ ಹುಸೇನ್, ಮಸ್ಕಿ ತಾಲ್ಲೂಕು ಪಂಚಾಯಿತಿ ಇಒ ಅಮರೇಶ ಯಾದವ ಮತ್ತು ವಿವಿಧ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>