ಸಿಪಿಐ ಜಿಲ್ಲಾ ಕಾರ್ಯದರ್ಶಿ ಬಾಷುಮಿಯಾ ಮಾತನಾಡಿ, ಕೋಮು ಸೌಹಾರ್ದತೆಯನ್ನು ಕದಡುತ್ತಿರುವ ಶಕ್ತಿಗಳ ವಿರುದ್ಧ ಮೇ ತಿಂಗಳಲ್ಲಿ ಉಡುಪಿಯಲ್ಲಿ ಸಾಮರಸ್ಯ ನಡಿಗೆ ಕಾರ್ಯಕ್ರಮ, ಭಾವೈಕ್ಯತೆಯ ಸಂಕೇತವಾದ ತಿಂಥಿಣಿಯಲ್ಲಿಯೂ ಮೇ 14 ರಿಂದ ಮೂರು ದಿನಗಳ ಕಾಲ ಸಾಂಸ್ಕೃತಿಕ ಪ್ರತಿರೋಧ ಸಮಾವೇಶ. ಮೇ 3 ರಂದು ಸಿಂಧನೂರಿನಲ್ಲಿ ಹಿಂದೂ-ಮುಸ್ಲಿಮರು ಒಗ್ಗೂಡಿ ಬಸವ ಜಯಂತಿ ಮತ್ತು ರಂಜಾನ್ ಆಚರಣೆ, ಮೇ 8 ರಂದು ಸಿಂಧನೂರಿನಲ್ಲಿ ಬಹುತ್ವ ಭಾರತೀಯರ ಭಾವೈಕ್ಯ ಸಮಾವೇಶವನ್ನು ಏರ್ಪಡಿಸಿದೆ.