‘ವ್ಯಾಗನ್ನಲ್ಲಿ ತುಂಬಿದ್ದ ಕಲ್ಲಿದ್ದಲನ್ನು ವೈಟಿಪಿಎಸ್ ಮತ್ತು ಆರ್ಟಿಪಿಎಸ್ ಪ್ರಾಂಗಣದಲ್ಲಿ ಸಂಪೂರ್ಣವಾಗಿ ಸುರಿಯಬೇಕು. ವ್ಯಾಗನ್ ಖಾಲಿಯಾದ ನಂತರವೇ ಅಲ್ಲಿಂದ ರೈಲು ಚಲಿಸಲು ಹಸಿರು ನಿಶಾನೆ ನೀಡಬೇಕು. ಆದರೆ, ವ್ಯಾಗನ್ಗಳಲ್ಲಿ ದೊಡ್ಡ ಪ್ರಮಾಣದ ಕಲ್ಲಿದ್ದಲುನ್ನು ಉಳಿಸಿ, ವಾಪಸ್ ಕಳುಹಿಸಲಾಗುತ್ತಿತ್ತು ಎಂಬ ವಿಷಯ ಬಹಿರಂಗವಾಗಿದೆ. ಈ ಸಂಬಂಧ ವರದಿಯನ್ನು ಮೂರು ದಿನದೊಳಗೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ತನಿಖಾ ತಂಡ ನೀಡಲಿದೆ’ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.