ರೈಸ್ ಮಿಲ್ನಲ್ಲಿ ಪಡಿತರ ಅಕ್ಕಿ ಅಕ್ರಮವಾಗಿ ಸಂಗ್ರಹಿಸಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಆಹಾರ ಇಲಾಖೆಯ ಅಧಿಕಾರಿ ದೇವರಾಜು ಹಾಗೂ ಮಾನ್ವಿ ಪೊಲೀಸ್ ಠಾಣೆ ಪಿಎಸ್ಐ ವೀರನಗೌಡ ದಾಳಿ ಮಾಡಿದ್ದಾರೆ. ಆಹಾರ ಇಲಾಖೆಯ ಅಧಿಕಾರಿ ದೇವರಾಜ ನೀಡಿದ ದೂರಿನನ್ವಯ ವೆಂಕಟಸಾಯಿ ಆಗ್ರೋ ಇಂಡಸ್ಟ್ರೀಸ್ ರೈಸ್ ಮಿಲ್ ಮಾಲೀಕರ ವಿರುದ್ಧ ಮಾನ್ವಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.