<p><strong>ಸಿಂಧನೂರು</strong>: ತಾಲ್ಲೂಕಿನ ತುರ್ವಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಂಬರ್ ಪ್ಲೇಟ್ ಇಲ್ಲದೆ ಮರಳು ಅಕ್ರಮವಾಗಿ ಸಾಗಿಸುತ್ತಿದ್ದ ಮೂರು ಟಿಪ್ಪರ್ ಲಾರಿಗಳನ್ನು ಪೊಲೀಸರು ವಶಕ್ಕೆ ಪಡೆದು ಸೋಮವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲ್ಲೂಕಿನ ನವಲಿ ಗ್ರಾಮದಿಂದ ಉಮಲೂಟಿ ಮೂಲಕ ಮರಳನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿರುವ ಖಚಿತ ಮಾಹಿತಿಯ ಮೇರೆಗೆ ತುರ್ವಿಹಾಳ ಪೊಲೀಸರು ದಾಳಿ ನಡೆಸಿದ್ದಾರೆ.</p>.<p>ಚಾಲಕರು ಲಾರಿಗಳನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಈ ಟಿಪ್ಪರ್ ಲಾರಿಗಳು ಸೋಮಲಿಂಗ, ರಜಾಕ್, ಅನಿಲಕುಮಾರ ಎನ್ನುವವರಿಗೆ ಸೇರಿವೆ ಎಂದು ತಿಳಿದು ಬಂದಿದೆ.</p>
<p><strong>ಸಿಂಧನೂರು</strong>: ತಾಲ್ಲೂಕಿನ ತುರ್ವಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಂಬರ್ ಪ್ಲೇಟ್ ಇಲ್ಲದೆ ಮರಳು ಅಕ್ರಮವಾಗಿ ಸಾಗಿಸುತ್ತಿದ್ದ ಮೂರು ಟಿಪ್ಪರ್ ಲಾರಿಗಳನ್ನು ಪೊಲೀಸರು ವಶಕ್ಕೆ ಪಡೆದು ಸೋಮವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲ್ಲೂಕಿನ ನವಲಿ ಗ್ರಾಮದಿಂದ ಉಮಲೂಟಿ ಮೂಲಕ ಮರಳನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿರುವ ಖಚಿತ ಮಾಹಿತಿಯ ಮೇರೆಗೆ ತುರ್ವಿಹಾಳ ಪೊಲೀಸರು ದಾಳಿ ನಡೆಸಿದ್ದಾರೆ.</p>.<p>ಚಾಲಕರು ಲಾರಿಗಳನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಈ ಟಿಪ್ಪರ್ ಲಾರಿಗಳು ಸೋಮಲಿಂಗ, ರಜಾಕ್, ಅನಿಲಕುಮಾರ ಎನ್ನುವವರಿಗೆ ಸೇರಿವೆ ಎಂದು ತಿಳಿದು ಬಂದಿದೆ.</p>