<p><strong>ಮಾನ್ವಿ (ರಾಯಚೂರು ಜಿಲ್ಲೆ)</strong>: ತಾಲ್ಲೂಕಿನ ಚೀಕಲಪರ್ವಿ ಗ್ರಾಮದಲ್ಲಿ ಸೋಮವಾರ ಟ್ರ್ಯಾಕ್ಟರ್ ಮೂಲಕ ಮರಳು ಅಕ್ರಮ ಸಾಗಣೆ ಮಾಡುತ್ತಿದ್ದ ವ್ಯಕ್ತಿಯು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾನೆ.</p>.<p>‘ದೇವರಾಜ ಎಂಬಾತ ಟ್ರ್ಯಾಕ್ಟರ್ನಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದಾಗ ಪೊಲೀಸ್ ಕಾನ್ಸ್ಟೆಬಲ್ ಲಕ್ಷ್ಮಣ ಅವರು ತಡೆದು ವಿಚಾರಿಸಿದ್ದಾರೆ. ಈ ಸಂದರ್ಭದಲ್ಲಿ ಇಬ್ಬರ ನಡುವೆ ವಾಗ್ವಾದ ನಡೆದಿದೆ. ‘ಇಲಾಖೆಗಳಿಗೆ ಮಾಮೂಲು ತಲುಪಿಸಲಾಗಿದೆ. ಟಿಪ್ಪರ್ನಲ್ಲಿ ಸಾಗಿಸಿದರೆ ಮೌನವಾಗಿರುತ್ತೀರಿ, ಟ್ರ್ಯಾಕ್ಟರ್ನಲ್ಲಿ ಸಾಗಿಸಿದರೆ ಏಕೆ ಬರ್ತೀರಿ’ ಎಂದು ದೇವರಾಜ ಕೂಗಾಡಿದ್ದಾನೆ. ಬಳಿಕ ಆವೇಶದಲ್ಲಿ ಕಾನ್ಸ್ಟೆಬಲ್ ಲಕ್ಷ್ಮಣ ಅವರ ಮೇಲೆ ಹಲ್ಲೆ ಮಾಡಿದ್ದಾನೆ’ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.</p>.<p>ಗಾಯಗೊಂಡ ಕಾನ್ಸ್ಟೆಬಲ್ ಲಕ್ಷ್ಮಣ ಅವರು ಮಾನ್ವಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ದೇವರಾಜನನ್ನು ಪೊಲೀಸರು ಬಂಧಿಸಿದ್ದಾರೆ.</p>.<p>‘ಪೊಲೀಸ್ ಹಿರಿಯ ಅಧಿಕಾರಿಗಳು ಮರಳು ಅಕ್ರಮ ದಂಧೆಕೋರರೊಂದಿಗೆ ಕೈಜೋಡಿಸಿದ್ದಾರೆ. ಹಿರಿಯ ಅಧಿಕಾರಿಗಳಿಗೆ ಅಕ್ರಮಗಳ ಬಗ್ಗೆ ಮಾಹಿತಿ ಕೊಡಲು ಫೋನ್ ಕರೆ ಮಾಡಿದರೂ ಕರೆ ಸ್ವೀಕರಿಸುವುದಿಲ್ಲ. ಅಧಿಕಾರಿಗಳ ನಡತೆಯಿಂದ ಕಾನ್ಸ್ಟೆಬಲ್ಗಳು ಬಲಿಪಶು ಆಗುತ್ತಿದ್ದಾರೆ’ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾನ್ವಿ (ರಾಯಚೂರು ಜಿಲ್ಲೆ)</strong>: ತಾಲ್ಲೂಕಿನ ಚೀಕಲಪರ್ವಿ ಗ್ರಾಮದಲ್ಲಿ ಸೋಮವಾರ ಟ್ರ್ಯಾಕ್ಟರ್ ಮೂಲಕ ಮರಳು ಅಕ್ರಮ ಸಾಗಣೆ ಮಾಡುತ್ತಿದ್ದ ವ್ಯಕ್ತಿಯು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾನೆ.</p>.<p>‘ದೇವರಾಜ ಎಂಬಾತ ಟ್ರ್ಯಾಕ್ಟರ್ನಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದಾಗ ಪೊಲೀಸ್ ಕಾನ್ಸ್ಟೆಬಲ್ ಲಕ್ಷ್ಮಣ ಅವರು ತಡೆದು ವಿಚಾರಿಸಿದ್ದಾರೆ. ಈ ಸಂದರ್ಭದಲ್ಲಿ ಇಬ್ಬರ ನಡುವೆ ವಾಗ್ವಾದ ನಡೆದಿದೆ. ‘ಇಲಾಖೆಗಳಿಗೆ ಮಾಮೂಲು ತಲುಪಿಸಲಾಗಿದೆ. ಟಿಪ್ಪರ್ನಲ್ಲಿ ಸಾಗಿಸಿದರೆ ಮೌನವಾಗಿರುತ್ತೀರಿ, ಟ್ರ್ಯಾಕ್ಟರ್ನಲ್ಲಿ ಸಾಗಿಸಿದರೆ ಏಕೆ ಬರ್ತೀರಿ’ ಎಂದು ದೇವರಾಜ ಕೂಗಾಡಿದ್ದಾನೆ. ಬಳಿಕ ಆವೇಶದಲ್ಲಿ ಕಾನ್ಸ್ಟೆಬಲ್ ಲಕ್ಷ್ಮಣ ಅವರ ಮೇಲೆ ಹಲ್ಲೆ ಮಾಡಿದ್ದಾನೆ’ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.</p>.<p>ಗಾಯಗೊಂಡ ಕಾನ್ಸ್ಟೆಬಲ್ ಲಕ್ಷ್ಮಣ ಅವರು ಮಾನ್ವಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ದೇವರಾಜನನ್ನು ಪೊಲೀಸರು ಬಂಧಿಸಿದ್ದಾರೆ.</p>.<p>‘ಪೊಲೀಸ್ ಹಿರಿಯ ಅಧಿಕಾರಿಗಳು ಮರಳು ಅಕ್ರಮ ದಂಧೆಕೋರರೊಂದಿಗೆ ಕೈಜೋಡಿಸಿದ್ದಾರೆ. ಹಿರಿಯ ಅಧಿಕಾರಿಗಳಿಗೆ ಅಕ್ರಮಗಳ ಬಗ್ಗೆ ಮಾಹಿತಿ ಕೊಡಲು ಫೋನ್ ಕರೆ ಮಾಡಿದರೂ ಕರೆ ಸ್ವೀಕರಿಸುವುದಿಲ್ಲ. ಅಧಿಕಾರಿಗಳ ನಡತೆಯಿಂದ ಕಾನ್ಸ್ಟೆಬಲ್ಗಳು ಬಲಿಪಶು ಆಗುತ್ತಿದ್ದಾರೆ’ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>