ಮಾನ್ವಿ ತಾಲ್ಲೂಕಿನ ಕಪಗಲ್ನಿಂದ ಅಕ್ಕಿ ಸಾಗಿಸಲಾಗುತ್ತಿತ್ತು ಎಂದು ಗೊತ್ತಾಗಿದ್ದು, ಲಾರಿ ಚಾಲಕ ಪರಾರಿಯಾಗಿದ್ದಾನೆ.
ಜಿಲ್ಲಾ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಅರುಣ ಸಂಗಾವಿ ನೇತೃತ್ವದಲ್ಲಿ ಆಹಾರ ನಿರೀಕ್ಷಕರಾದ ಬಿ.ಅರ್.ವೆಂಕಣ್ಣ, ಖಲೀಲ್ ಅಹ್ಮದ್ ದಾಳಿ ನಡೆಸಿದರು. ಈ ಕುರಿತು ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.