ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಅಕ್ರಮವಾಗಿ ಮಾರಾಟ ಮಾಡಲು ಕೊಂಡೊಯ್ಯುತ್ತಿರುವ ಖಚಿತ ಮಾಹಿತಿ ಅರಿತ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಕಟ್ಟಿಮನಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಸ್ಥಳಕ್ಕೆ ಬಂದ ಪೊಲೀಸರು ನಗರದ ಯಲ್ಲಮ್ಮ ದೇವಸ್ಥಾನದ ಬಳಿ ಪಡಿತರ ಅಕ್ಕಿ ಸಾಗಣೆ ಮಾಡುತ್ತಿದ್ದ ವಾಹನವನ್ನು ರಾತ್ರಿ 1 ಗಂಟೆ ಸುಮಾರಿಗೆ ವಶಪಡಿಸಿಕೊಂಡು ಶಹರ ಪೊಲೀಸ್ ಠಾಣೆಗೆ ತಂದಿದ್ದಾರೆ.