ಫಲಾನುಭವಿಗಳ ಹೆಸರಿನಲ್ಲಿ ಭೂಮಿ ನೊಂದಣಿ ಆಗಿ ಪಹಣಿಯಲ್ಲಿ ಹೆಸರು ಸೇರ್ಪಡೆ ಕೂಡ ಮಾಡಲಾಗಿದೆ. ಆದರೆ, ಸದರಿ ಹಂಚಿಕೆಯಾದ ಜಮೀನುಗಳನ್ನು ಸ್ಥಳೀಯ ಪ್ರಭಾವಿ ವ್ಯಕ್ತಿಗಳು ಹಾಗೂ ಮಧ್ಯವರ್ತಿಗಳು ಫಲಾನುಭವಿಗಳ ಖಬ್ಜಾಕ್ಕೆ ನೀಡದೆ ಸಾಗುವಳಿಗೆ ಅಡ್ಡಿಪಡಿಸುತ್ತಿದ್ದಾರೆ. ಭೂಮಿ ಮಂಜೂರಾಗಿ ಎರಡು ವರ್ಷಗಳು ಕಳೆದರೂ ಫಲಾನುಭವಿಗಳು ಭೂಮಿಯಲ್ಲಿ ಸಾಗುವಳಿ ಮಾಡಲು ಸಾಧ್ಯವಾಗದೆ ಬೇಸರ ವ್ಯಕ್ತಪಡಿಸಿದ್ದಾರೆ.