ತಾಲ್ಲೂಕಿನ ಬಳಗಾನೂರು ಗ್ರಾಮದಲ್ಲಿ ಶುಕ್ರವಾರ ಬಂಧು ಶತಪುರೇಶ ಪತ್ತಿನ ಸೌಹಾರ್ದ ಸಹಕಾರಿ ಸಂಸ್ಥೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಸಹಕಾರಿ ಸಂಸ್ಥೆಯ ಉತ್ತಮ ಆಡಳಿತ ಮಂಡಳಿ ಹಾಗೂ ಪರಿಣತ ಸಿಬ್ಬಂದಿಯಿಂದ ಸಹಕಾರಿ ಸಂಸ್ಥೆ ಆರ್ಥಿಕವಾಗಿ ಬೆಳೆಯಲು ಸಾಧ್ಯ. ಷೇರುದಾರರು ಹಾಗೂ ಗ್ರಾಹಕರ ನಡುವೆ ಉತ್ತಮವಾದ ವ್ಯವಹಾರ ಸಂಬಂಧ ಹೊಂದಬೇಕು‘ ಎಂದು ಹೇಳಿದರು.